ಎಚ್.ಡಿ.ಕೋಟೆ: ಇಲ್ಲಿನ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ವಿಶ್ವ ಆರೋಗ್ಯ ದಿನಾಚರಣೆಯ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ. ಟಿ. ರವಿಕುಮಾರ್ ಅವರು ಅಧ್ಯಕ್ಷತೆ ವಹಿಸಿ ಜಾಥಾಗೆ ಹಸಿರು ನಿಶಾನೆ ತೋರುವುದರ ಮೂಲಕ ಚಾಲನೆಯನ್ನೂ ನೀಡಿದರು.
ಈ ವೇಳೆ ಮಾತನಾಡಿದ ರವಿಕುಮಾರ್ ಅವರು, ಮನುಷ್ಯ ಉತ್ತಮ ರೀತಿಯಲ್ಲಿ ಬಾಳ್ವೆ ನಡೆಸಲು ಆರೋಗ್ಯ ಅತ್ಯಗತ್ಯ. ಅದು ದೈಹಿಕ ಮತ್ತು ಮಾನಸಿಕ ಆರೋಗ್ಯ ಎರಡನ್ನೂ ಒಳಗೊಂಡಿರುತ್ತದೆ. ಆರೋಗ್ಯ ಕಾಳಜಿ ಕುರಿತು ಜನಸಾಮಾನ್ಯರಲ್ಲಿ ಅರಿವು ಮೂಡಿಸಲು ವಿಶ್ವ ಆರೋಗ್ಯ ಸಂಸ್ಥೆ ಪ್ರತಿ ವರ್ಷ ಏಪ್ರಿಲ್.7ನ್ನು ವಿಶ್ವ ಆರೋಗ್ಯ ದಿನವೆಂದು ಆಚರಿಸುತ್ತದೆ.
ಈ ವರ್ಷ ಎಲ್ಲರಿಗೂ ಸಮಾನ ಆರೋಗ್ಯ ಎಂಬ ಘೋಷಣೆಯನ್ನು ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆ ಆಹಾರದ ಮೂಲಕ ಆಗಮಿಸುವ ರೋಗಗಳ ಕಾಳಜಿಯನ್ನು ವಿಷಯವನ್ನಾಗಿ ಆರಿಸಿಕೊಂಡಿದೆ. “From farm to plate, make food safe.” (ಗದ್ದೆಯಿಂದ ತಟ್ಟೆಗೆ, ನಿಮ್ಮ ಆಹಾರ ಸುರಕ್ಷಿತವಾಗಿರಲಿ) ಎಂಬುದು ಲಾಭ ಮಾಡುವ ಗುರಿಯಿಂದ ಕೃತಕವಾಗಿ ಬೆಳೆಯನ್ನು ಪರಿವರ್ತಿಸುವ ರಾಸಾಯನಿಕ ಮತ್ತು ಇತರ ವಿಷಕಾರಿ ವಸ್ತುಗಳ ಬಗ್ಗೆ ಅರಿವು ಮೂಡಿಸುವುದು ಈ ಯೋಜನೆಯ ಪ್ರಮುಖ ಯೋಜನೆಯಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವೈದ್ಯಾಧಿಕಾರಿಗಳಾದ ಡಾ”ಕೀರ್ತಿ, ಡಾ”.ಚಂದ್ರಕಲಾ, DHEO ಪದ್ಮಾವತಿ, ಚಲ್ಲಲ್, ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರಾದ ನಾಗೇಂದ್ರ, ರವಿರಾಜ್ ಸೇರಿದಂತೆ ಮತ್ತಿತರರು ಹಾಜರಿದ್ದರು.
ಮೈಸೂರು : ಎಸ್ಐಆರ್ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಕದಿಯುತ್ತಿರುವ ಬಿಜೆಪಿ, ಕೆಲವು ದಿನಗಳಿಂದ ಅನಗತ್ಯ…
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ…
ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್ಪ್ರೆಸ್…
ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ…
ಬರಹ ಮತ್ತು ರೇಖಾಚಿತ್ರ: ಎಂ ಎಸ್ ಪ್ರಕಾಶ್ ಬಾಬು ಮೇಲ್ವರ್ಗದಿಂದಲೇ ಬಂದ ಶಿವಪ್ರಸಾದರು ವಿಶೇಷವಾಗಿ ಉಳಿಯುವುದು ಅವರ ರಾಜಕೀಯ ಸಾಮಾಜಿಕ…
ಶೇಷಾದ್ರಿ ಗಂಜೂರು ಸರಿಯಾಗಿ ಇನ್ನೂರೈವತ್ತು ವರ್ಷಗಳ ಹಿಂದೆ, ೧೭೭೬ರ ಜುಲೈ ೪ರಂದು, ಅಮೆರಿಕದ ಫಿಲಡೆಲ್ಛಿಯಾ ನಗರದಲ್ಲಿ ಒಗ್ಗೂಡಿದ್ದ ೫೬ ಜನ…