ಮೈಸೂರು

ಎಚ್.ಡಿ.ಕೋಟೆ: ವಿಶ್ವಬಾಯಿ ಆರೋಗ್ಯ ದಿನಾಚರಣೆ ಕಾರ್ಯಕ್ರಮ

ಎಚ್.ಡಿ.ಕೋಟೆ: ತಾಲ್ಲೂಕು ಆರೋಗ್ಯಾಧಿಕಾರಿಗಳ‌ ಕಚೇರಿ ಎಚ್.ಡಿ.ಕೋಟೆ ಮತ್ತು ಸಾರ್ವಜನಿಕ ಆಸ್ಪತ್ರೆ ಎಚ್.ಡಿ.ಕೋಟೆ ವತಿಯಿಂದ ಬಾಯಿ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಎಚ್.ಡಿ.ಕೋಟೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ”ರವಿಕುಮಾರ್, ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ”ಶ್ರೀನಿವಾಸ್ ಮತ್ತು ಹಿರಿಯ ವೈದ್ಯಾಧಿಕಾರಿ ಡಾ”ಸೋಮಣ್ಣ , ದಂತ ತಜ್ಞ ಡಾ” ಸಮೀವುಲ್ಲಾ ಷರೀಫ್ ಅವರು ದೀಪ ಬೆಳಗುವುದರ ಮೂಲಕ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಸಾರ್ವಜನಿಕ ಆಸ್ಪತ್ರೆ ದಂತ ತಜ್ಞರಾದ ಡಾ”ಸಮೀವುಲ್ಲಾ ಶರೀಫ್ ರವರು ವಿಶ್ವದಲ್ಲೆಡೆ ವಿಶ್ವಬಾಯಿ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಗುತ್ತದೆ. ಇದರ ಮುಖ್ಯ ಉದ್ದೇಶ ಜನರಿಗೆ ಬಾಯಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಬಾಯಿ ಆರೋಗ್ಯದ ಮಹತ್ವವನ್ನು ತಿಳಿಸಿಕೊಡುವುದು.

ನಮ್ಮ ಬಾಯಿ ನಮ್ಮ ದೈಹಿಕ ಆರೋಗ್ಯಕ್ಕೆ ಕನ್ನಡಿ ಇದ್ದ ಹಾಗೆ. ಏಕೆಂದರೆ ಅನೇಕ ಕಾಯಿಲೆಗಳ ರೋಗಲಕ್ಷಣಗಳು ಮೊದಲಿಗೆ ಬಾಯಲ್ಲಿ ಕಾಣಿಸಿಕೊಳ್ಳುತ್ತವೆ. ಒಬ್ಬ ವ್ಯಕ್ತಿಯ ಬಾಯಿಯನ್ನು ಪರೀಕ್ಷಿಸಿ ಅವನು ಎಷ್ಟು ಆರೋಗ್ಯಕರವಾಗಿದ್ದಾನೆಂದು ಗುರುತಿಸಬಹುದು. ಬೀಡಿ, ಸಿಗರೇಟ್, ತಂಬಾಕು ಸೇವನೆಯಿಂದ ದೂರವಿರಬೇಕು. ಇದರಿಂದ ಬಾಯಿ ಕ್ಯಾನ್ಸರ್ ಬರುವ ಸಂಭಾವನೆ ಬಹಳ ಹೆಚ್ಚು ದುಶ್ಚಟಗಳಿಂದ ದೂರವಿದ್ದು ಬಾಯಿ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.

ನಂತರ ತಾಲ್ಲೂಕು ಆರೋಗ್ಯಾಧಿಕಾರಿಗಳು ಮಾತನಾಡಿ, ನಮ್ಮ ತಾಲ್ಲೂಕಿನಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ವಿಶ್ವ ಬಾಯಿ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸುತ್ತಿದ್ದೇವೆ, ಎಲ್ಲರೂ ದಿನನಿತ್ಯ ದೇಹವನ್ನು ಸ್ವಚ್ಛಗೊಳಿಸುವ ಹಾಗೆ ದಂತವನ್ನು ಸ್ವಚ್ಛಗೊಳಿಸಬೇಕು. ದಿನಕ್ಕೆರಡು ಬಾರಿ ದಂತವನ್ನು ಸ್ವಚ್ಛಗೊಳಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ AO ಮೋಹನ್, ಕಚೇರಿ ಅಧೀಕ್ಷಕರಾದ ತಾರಾದೇವಿ, ಶುಶ್ರೂಷಕ ಮೇಲ್ವಿಚಾರಕರಾದ ಪರಿಮಳ ಗಾಳಂಕಿ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಯತ್ನ: ಮ್ಯಾಕ್ರನ್‌ ಜೊತೆ ಮೋದಿ ಮಾತುಕತೆ

ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್‌ ಮ್ಯಾಕ್ರನ್‌ ಜೊತೆ…

8 mins ago

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ನಿಧನ

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…

3 hours ago

ರಾಜ್ಯದಲ್ಲಿ ಮತ್ತೆರಡು ದಿನ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್‌, ಕಲಬುರ್ಗಿ,…

3 hours ago

ಮಲೆ ಮಹದೇಶ್ವರ ಬೆಟ್ಟ: ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಜರುಗಿದ ಮಹಾರಥೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ  ಮಹೋತ್ಸವದ ಅಂಗವಾಗಿ…

3 hours ago

ಮಧ್ಯ ಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು: ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದು

ಇಸ್ಲಾಮಾಬಾದ್:‌ ಇರಾನ್‌, ಅಮೇರಿಕಾ-ಇಸ್ರೇಲ್‌ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು ಉಲ್ಬಣಗೊಂಡಿದೆ. ಇದರಿಂದ ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದಾಗಿದೆ. ಮಾರ್ಚ್.‌23ರಂದು…

6 hours ago

ಯುಗಾದಿ ಸಂಭ್ರಮ: ಓಂಕಾರೇಶ್ವರ ದೇವಾಲಯದಲ್ಲೂ ಬೇವು ಬೆಲ್ಲ ವಿತರಣೆ

ಮಡಿಕೇರಿ: ನಾಡಿನಾದ್ಯಂತ ಇಂದು ಹೊಸ ವರ್ಷ ಯುಗಾದಿ ಸಂಭ್ರಮ ಮನೆ ಮಾಡಿದ್ದು, ಕೊಡಗಿನ ಮನೆ ಮನೆಯಲ್ಲೂ ಯುಗಾದಿ ಹಬ್ಬದ ಸಡಗರ…

6 hours ago