ಮೈಸೂರು

ಎಚ್.ಡಿ.ಕೋಟೆ: ವಿಶ್ವಬಾಯಿ ಆರೋಗ್ಯ ದಿನಾಚರಣೆ ಕಾರ್ಯಕ್ರಮ

ಎಚ್.ಡಿ.ಕೋಟೆ: ತಾಲ್ಲೂಕು ಆರೋಗ್ಯಾಧಿಕಾರಿಗಳ‌ ಕಚೇರಿ ಎಚ್.ಡಿ.ಕೋಟೆ ಮತ್ತು ಸಾರ್ವಜನಿಕ ಆಸ್ಪತ್ರೆ ಎಚ್.ಡಿ.ಕೋಟೆ ವತಿಯಿಂದ ಬಾಯಿ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಎಚ್.ಡಿ.ಕೋಟೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ”ರವಿಕುಮಾರ್, ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ”ಶ್ರೀನಿವಾಸ್ ಮತ್ತು ಹಿರಿಯ ವೈದ್ಯಾಧಿಕಾರಿ ಡಾ”ಸೋಮಣ್ಣ , ದಂತ ತಜ್ಞ ಡಾ” ಸಮೀವುಲ್ಲಾ ಷರೀಫ್ ಅವರು ದೀಪ ಬೆಳಗುವುದರ ಮೂಲಕ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಸಾರ್ವಜನಿಕ ಆಸ್ಪತ್ರೆ ದಂತ ತಜ್ಞರಾದ ಡಾ”ಸಮೀವುಲ್ಲಾ ಶರೀಫ್ ರವರು ವಿಶ್ವದಲ್ಲೆಡೆ ವಿಶ್ವಬಾಯಿ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಗುತ್ತದೆ. ಇದರ ಮುಖ್ಯ ಉದ್ದೇಶ ಜನರಿಗೆ ಬಾಯಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಬಾಯಿ ಆರೋಗ್ಯದ ಮಹತ್ವವನ್ನು ತಿಳಿಸಿಕೊಡುವುದು.

ನಮ್ಮ ಬಾಯಿ ನಮ್ಮ ದೈಹಿಕ ಆರೋಗ್ಯಕ್ಕೆ ಕನ್ನಡಿ ಇದ್ದ ಹಾಗೆ. ಏಕೆಂದರೆ ಅನೇಕ ಕಾಯಿಲೆಗಳ ರೋಗಲಕ್ಷಣಗಳು ಮೊದಲಿಗೆ ಬಾಯಲ್ಲಿ ಕಾಣಿಸಿಕೊಳ್ಳುತ್ತವೆ. ಒಬ್ಬ ವ್ಯಕ್ತಿಯ ಬಾಯಿಯನ್ನು ಪರೀಕ್ಷಿಸಿ ಅವನು ಎಷ್ಟು ಆರೋಗ್ಯಕರವಾಗಿದ್ದಾನೆಂದು ಗುರುತಿಸಬಹುದು. ಬೀಡಿ, ಸಿಗರೇಟ್, ತಂಬಾಕು ಸೇವನೆಯಿಂದ ದೂರವಿರಬೇಕು. ಇದರಿಂದ ಬಾಯಿ ಕ್ಯಾನ್ಸರ್ ಬರುವ ಸಂಭಾವನೆ ಬಹಳ ಹೆಚ್ಚು ದುಶ್ಚಟಗಳಿಂದ ದೂರವಿದ್ದು ಬಾಯಿ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.

ನಂತರ ತಾಲ್ಲೂಕು ಆರೋಗ್ಯಾಧಿಕಾರಿಗಳು ಮಾತನಾಡಿ, ನಮ್ಮ ತಾಲ್ಲೂಕಿನಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ವಿಶ್ವ ಬಾಯಿ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸುತ್ತಿದ್ದೇವೆ, ಎಲ್ಲರೂ ದಿನನಿತ್ಯ ದೇಹವನ್ನು ಸ್ವಚ್ಛಗೊಳಿಸುವ ಹಾಗೆ ದಂತವನ್ನು ಸ್ವಚ್ಛಗೊಳಿಸಬೇಕು. ದಿನಕ್ಕೆರಡು ಬಾರಿ ದಂತವನ್ನು ಸ್ವಚ್ಛಗೊಳಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ AO ಮೋಹನ್, ಕಚೇರಿ ಅಧೀಕ್ಷಕರಾದ ತಾರಾದೇವಿ, ಶುಶ್ರೂಷಕ ಮೇಲ್ವಿಚಾರಕರಾದ ಪರಿಮಳ ಗಾಳಂಕಿ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹನೂರು ಶೂಟ್‌ಔಟ್ ಪ್ರಕರಣ | ಸ್ಥಳ ಮಹಜರ್, ಸಾಕ್ಷಿ ವಿಚಾರಣೆ

ಹನೂರು : ಕಾವೇರಿ ವನ್ಯಜೀವಿಧಾಮದ ಹೊಲೆಮುರಿದಟ್ಟಿ ಕರಿಕಲ್ಲು ಗುಡ್ಡ ಅರಣ್ಯ ಪ್ರದೇಶದಲ್ಲಿ ಶೂಟ್‌ಔಟ್ ನಡೆದ ಸ್ಥಳಕ್ಕೆ ಪ್ರಕರಣದ ಪ್ರಮುಖ ಸಾಕ್ಷಿ…

2 hours ago

ಬಾಲ್ಯದ ಗೆಳೆಯನಿಗೆ ಡಿಕೆಶಿ ‘ಉಡುಗೊರೆ’ : ರಾಜಕೀಯಕ್ಕೆ ರವಿಚಂದ್ರನ್?

ಸಿಎಂ ಭೇಟಿಯಾಗಿ ಚರ್ಚೆ ; ಖಚಿತಪಡಿಸದ ಕಾಂಗ್ರೆಸ್ ನಾಯಕರು ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕ್ರೇಜಿಸ್ಟಾರ್…

2 hours ago

ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹಲೋತ್‌

ಸಚಿವರಾದ ಕೆಲವೇ ದಿನಗಳಲ್ಲಿ ಸಂಪುಟದಿಂದ ನಾಗೇಂದ್ರ ಹೊರಕ್ಕೆ ಬೆಂಗಳೂರು: ಮಾಜಿ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್…

4 hours ago

ವಿನಾಶಕಾರಿ ಪ್ರವಾಹ: ನೇಪಾಳದಲ್ಲಿ ಏರುತ್ತಲೇ ಇದೆ ಸಾವಿನ ಸಂಖ್ಯೆ

ಕಠ್ಮಂಡು: ನೇಪಾಳದಲ್ಲಿ ಸಂಭವಿಸಿದ ವಿನಾಶಕಾರಿ ಪ್ರವಾಹಕ್ಕೆ ಸಾವಿನ ಸಂಖ್ಯೆ 682ಕ್ಕೆ ಏರಿಕೆಯಾಗಿದೆ. 2400ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದು, ಇದುವರೆಗೂ 4400ಕ್ಕೂ…

7 hours ago

ಯುವ ಜನತೆ ಮಾದಕ ವಸ್ತುಗಳ ಪಿಡುಗಿನಿಂದ ಸಂಪೂರ್ಣವಾಗಿ ಮುಕ್ತರಾಗಬೇಕು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶವು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಪ್ರಗತಿ ಸಾಧಿಸಿ 'ವಿಕಸಿತ ಭಾರತ'ವಾಗಿ ರೂಪುಗೊಳ್ಳಬೇಕಾದರೆ, ಯುವ ಜನತೆ ಮಾದಕ ವಸ್ತುಗಳ ಪಿಡುಗಿನಿಂದ…

7 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಇಂದು ಸಂಜೆಯಿಂದಲೇ ಆನೆಗಳಿಗೆ ತಾಲೀಮು ಆರಂಭ: ಡಿಸಿಎಫ್‌ ಡಾ.ಪ್ರಭುಗೌಡ

ಮೈಸೂರು: ಮೊದಲ ಹಂತದಲ್ಲಿ ಆಗಮಿಸಿರುವ ದಸರಾ ಆನೆಗಳಿಗೆ ತೂಕ ಪರೀಕ್ಷೆ ಮಾಡಲಾಗಿದೆ. ಶ್ರೀಕಂಠ ಆನೆ ಹೆಚ್ಚು ತೂಕ ಹೊಂದಿದೆ. ಆದರೆ…

8 hours ago