ಎಚ್.ಡಿ.ಕೋಟೆ: ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಎಚ್.ಡಿ.ಕೋಟೆ ಮತ್ತು ಸಾರ್ವಜನಿಕ ಆಸ್ಪತ್ರೆ ಎಚ್.ಡಿ.ಕೋಟೆ ವತಿಯಿಂದ ಬಾಯಿ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಎಚ್.ಡಿ.ಕೋಟೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ”ರವಿಕುಮಾರ್, ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ”ಶ್ರೀನಿವಾಸ್ ಮತ್ತು ಹಿರಿಯ ವೈದ್ಯಾಧಿಕಾರಿ ಡಾ”ಸೋಮಣ್ಣ , ದಂತ ತಜ್ಞ ಡಾ” ಸಮೀವುಲ್ಲಾ ಷರೀಫ್ ಅವರು ದೀಪ ಬೆಳಗುವುದರ ಮೂಲಕ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಸಾರ್ವಜನಿಕ ಆಸ್ಪತ್ರೆ ದಂತ ತಜ್ಞರಾದ ಡಾ”ಸಮೀವುಲ್ಲಾ ಶರೀಫ್ ರವರು ವಿಶ್ವದಲ್ಲೆಡೆ ವಿಶ್ವಬಾಯಿ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಗುತ್ತದೆ. ಇದರ ಮುಖ್ಯ ಉದ್ದೇಶ ಜನರಿಗೆ ಬಾಯಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಬಾಯಿ ಆರೋಗ್ಯದ ಮಹತ್ವವನ್ನು ತಿಳಿಸಿಕೊಡುವುದು.
ನಮ್ಮ ಬಾಯಿ ನಮ್ಮ ದೈಹಿಕ ಆರೋಗ್ಯಕ್ಕೆ ಕನ್ನಡಿ ಇದ್ದ ಹಾಗೆ. ಏಕೆಂದರೆ ಅನೇಕ ಕಾಯಿಲೆಗಳ ರೋಗಲಕ್ಷಣಗಳು ಮೊದಲಿಗೆ ಬಾಯಲ್ಲಿ ಕಾಣಿಸಿಕೊಳ್ಳುತ್ತವೆ. ಒಬ್ಬ ವ್ಯಕ್ತಿಯ ಬಾಯಿಯನ್ನು ಪರೀಕ್ಷಿಸಿ ಅವನು ಎಷ್ಟು ಆರೋಗ್ಯಕರವಾಗಿದ್ದಾನೆಂದು ಗುರುತಿಸಬಹುದು. ಬೀಡಿ, ಸಿಗರೇಟ್, ತಂಬಾಕು ಸೇವನೆಯಿಂದ ದೂರವಿರಬೇಕು. ಇದರಿಂದ ಬಾಯಿ ಕ್ಯಾನ್ಸರ್ ಬರುವ ಸಂಭಾವನೆ ಬಹಳ ಹೆಚ್ಚು ದುಶ್ಚಟಗಳಿಂದ ದೂರವಿದ್ದು ಬಾಯಿ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.
ನಂತರ ತಾಲ್ಲೂಕು ಆರೋಗ್ಯಾಧಿಕಾರಿಗಳು ಮಾತನಾಡಿ, ನಮ್ಮ ತಾಲ್ಲೂಕಿನಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ವಿಶ್ವ ಬಾಯಿ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸುತ್ತಿದ್ದೇವೆ, ಎಲ್ಲರೂ ದಿನನಿತ್ಯ ದೇಹವನ್ನು ಸ್ವಚ್ಛಗೊಳಿಸುವ ಹಾಗೆ ದಂತವನ್ನು ಸ್ವಚ್ಛಗೊಳಿಸಬೇಕು. ದಿನಕ್ಕೆರಡು ಬಾರಿ ದಂತವನ್ನು ಸ್ವಚ್ಛಗೊಳಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ AO ಮೋಹನ್, ಕಚೇರಿ ಅಧೀಕ್ಷಕರಾದ ತಾರಾದೇವಿ, ಶುಶ್ರೂಷಕ ಮೇಲ್ವಿಚಾರಕರಾದ ಪರಿಮಳ ಗಾಳಂಕಿ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.
ತೆರವಾಯಿತೆ ಫುಟ್ಪಾತ್ನಲ್ಲಿ ಕಟ್ಟಿಕೊಂಡಿದ್ದ ಅನ್ನದ ಬಟ್ಟಲು; ನಿರುದ್ಯೋಗ ನಿವಾರಣಾತೊಟ್ಟಿಲು ಶಕ್ತಿ ತುಂಬಲಿ ಮತ್ತೊಂದು ಕಟ್ಟಲು ಎಲ್ಲರ ಜೀವನ ಜಾಲವೇ ಮುಂದಕೂ…
ಕೆಪಿಎಸ್ಸಿ ಭ್ರಷ್ಟಾಚಾರದ ಕುರಿತು ಇತ್ತೀಚಿನ ಸುದ್ದಿ ಕಣ್ಣು ತೆರೆಸುವಂತಿದೆ. ದಕ್ಷ ಅಧಿಕಾರಿಗಳನ್ನು ಆರಿಸಬೇಕಾದ ಸಾಂವಿಧಾನಿಕ ಸಂಸ್ಥೆಯ ಅಧ್ಯಕ್ಷರೇ ಅಮಾನತ್ತುಗೊಂಡಿರುವುದು ಇಡೀ…
ಮಾಸ್ಕ್ ಧರಿಸಿ ಸಿಟಿ ಬಸ್ಸಿನಲ್ಲಿ ಸಂಚರಿಸಿ ರಿಯಾಲಿಟಿ ಚೆಕ್ ನಡೆಸಿದ ಸಾರಿಗೆ ಸಚಿವ ಭೈರತಿ ಸುರೇಶ್ ಅವರು ಕರ್ತವ್ಯಲೋಪ ಎಸಗಿದ…
ಸುಪ್ರೀಂಕೋರ್ಟ್ ಆದೇಶದಂತೆ ಬೆಂಗಳೂರಿನ ನಂತರ ಈಗ ಮೈಸೂರಿನಲ್ಲೂ ಫುಟ್ಪಾತ್ ಒತ್ತುವರಿ ತೆರವು ಮಾಡುತ್ತಿರುವುದು ಸ್ವಾಗತಾರ್ಹ. ಇದರಿಂದ ಪಾದಚಾರಿಗಳಿಗೆ ಅನುಕೂಲವಾಗುತ್ತದೆ. ಇದೇ…
ರಾಜ್ಯ ಸರ್ಕಾರವು ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಧಿಸೂಚನೆ ಹೊರಡಿಸಿದು, ಸ್ಪರ್ಧಾಕಾಂಕ್ಷಿಗಳು ಆನ್ಲೆ ನ್ ಮೂಲಕ ಅರ್ಜಿಸಲ್ಲಿಸಲು ಕರ್ನಾಟಕ ಪರೀಕ್ಷಾ…
ಡಿಜಿಟಲ್ ಗುರುತಿನ ವ್ಯವಸ್ಥೆಯಾಗಿ ಹುಟ್ಟಿಕೊಂಡ ಆಧಾರ್, ಡಿಜಿಟಲ್ ಆಡಳಿತಕ್ಕೆ ಚುಕ್ಕಾಣಿಯಾಗತೊಡಗಿದ್ದು, ಜನರಲ್ಲಿ ತಮ್ಮ ಖಾಸಗಿತನದ ಸುರಕ್ಷತೆಯ ಬಗ್ಗೆ ಆತಂಕಗಳನ್ನು ನಿಧಾನಕ್ಕೆ…