ಎಚ್.ಡಿ.ಕೋಟೆ: ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಎಚ್.ಡಿ.ಕೋಟೆ ಮತ್ತು ಸಾರ್ವಜನಿಕ ಆಸ್ಪತ್ರೆ ಎಚ್.ಡಿ.ಕೋಟೆ ವತಿಯಿಂದ ಬಾಯಿ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಎಚ್.ಡಿ.ಕೋಟೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ”ರವಿಕುಮಾರ್, ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ”ಶ್ರೀನಿವಾಸ್ ಮತ್ತು ಹಿರಿಯ ವೈದ್ಯಾಧಿಕಾರಿ ಡಾ”ಸೋಮಣ್ಣ , ದಂತ ತಜ್ಞ ಡಾ” ಸಮೀವುಲ್ಲಾ ಷರೀಫ್ ಅವರು ದೀಪ ಬೆಳಗುವುದರ ಮೂಲಕ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಸಾರ್ವಜನಿಕ ಆಸ್ಪತ್ರೆ ದಂತ ತಜ್ಞರಾದ ಡಾ”ಸಮೀವುಲ್ಲಾ ಶರೀಫ್ ರವರು ವಿಶ್ವದಲ್ಲೆಡೆ ವಿಶ್ವಬಾಯಿ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಗುತ್ತದೆ. ಇದರ ಮುಖ್ಯ ಉದ್ದೇಶ ಜನರಿಗೆ ಬಾಯಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಬಾಯಿ ಆರೋಗ್ಯದ ಮಹತ್ವವನ್ನು ತಿಳಿಸಿಕೊಡುವುದು.
ನಮ್ಮ ಬಾಯಿ ನಮ್ಮ ದೈಹಿಕ ಆರೋಗ್ಯಕ್ಕೆ ಕನ್ನಡಿ ಇದ್ದ ಹಾಗೆ. ಏಕೆಂದರೆ ಅನೇಕ ಕಾಯಿಲೆಗಳ ರೋಗಲಕ್ಷಣಗಳು ಮೊದಲಿಗೆ ಬಾಯಲ್ಲಿ ಕಾಣಿಸಿಕೊಳ್ಳುತ್ತವೆ. ಒಬ್ಬ ವ್ಯಕ್ತಿಯ ಬಾಯಿಯನ್ನು ಪರೀಕ್ಷಿಸಿ ಅವನು ಎಷ್ಟು ಆರೋಗ್ಯಕರವಾಗಿದ್ದಾನೆಂದು ಗುರುತಿಸಬಹುದು. ಬೀಡಿ, ಸಿಗರೇಟ್, ತಂಬಾಕು ಸೇವನೆಯಿಂದ ದೂರವಿರಬೇಕು. ಇದರಿಂದ ಬಾಯಿ ಕ್ಯಾನ್ಸರ್ ಬರುವ ಸಂಭಾವನೆ ಬಹಳ ಹೆಚ್ಚು ದುಶ್ಚಟಗಳಿಂದ ದೂರವಿದ್ದು ಬಾಯಿ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.
ನಂತರ ತಾಲ್ಲೂಕು ಆರೋಗ್ಯಾಧಿಕಾರಿಗಳು ಮಾತನಾಡಿ, ನಮ್ಮ ತಾಲ್ಲೂಕಿನಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ವಿಶ್ವ ಬಾಯಿ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸುತ್ತಿದ್ದೇವೆ, ಎಲ್ಲರೂ ದಿನನಿತ್ಯ ದೇಹವನ್ನು ಸ್ವಚ್ಛಗೊಳಿಸುವ ಹಾಗೆ ದಂತವನ್ನು ಸ್ವಚ್ಛಗೊಳಿಸಬೇಕು. ದಿನಕ್ಕೆರಡು ಬಾರಿ ದಂತವನ್ನು ಸ್ವಚ್ಛಗೊಳಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ AO ಮೋಹನ್, ಕಚೇರಿ ಅಧೀಕ್ಷಕರಾದ ತಾರಾದೇವಿ, ಶುಶ್ರೂಷಕ ಮೇಲ್ವಿಚಾರಕರಾದ ಪರಿಮಳ ಗಾಳಂಕಿ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.
ಹನೂರು : ಕಾವೇರಿ ವನ್ಯಜೀವಿಧಾಮದ ಹೊಲೆಮುರಿದಟ್ಟಿ ಕರಿಕಲ್ಲು ಗುಡ್ಡ ಅರಣ್ಯ ಪ್ರದೇಶದಲ್ಲಿ ಶೂಟ್ಔಟ್ ನಡೆದ ಸ್ಥಳಕ್ಕೆ ಪ್ರಕರಣದ ಪ್ರಮುಖ ಸಾಕ್ಷಿ…
ಸಿಎಂ ಭೇಟಿಯಾಗಿ ಚರ್ಚೆ ; ಖಚಿತಪಡಿಸದ ಕಾಂಗ್ರೆಸ್ ನಾಯಕರು ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕ್ರೇಜಿಸ್ಟಾರ್…
ಸಚಿವರಾದ ಕೆಲವೇ ದಿನಗಳಲ್ಲಿ ಸಂಪುಟದಿಂದ ನಾಗೇಂದ್ರ ಹೊರಕ್ಕೆ ಬೆಂಗಳೂರು: ಮಾಜಿ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್…
ಕಠ್ಮಂಡು: ನೇಪಾಳದಲ್ಲಿ ಸಂಭವಿಸಿದ ವಿನಾಶಕಾರಿ ಪ್ರವಾಹಕ್ಕೆ ಸಾವಿನ ಸಂಖ್ಯೆ 682ಕ್ಕೆ ಏರಿಕೆಯಾಗಿದೆ. 2400ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದು, ಇದುವರೆಗೂ 4400ಕ್ಕೂ…
ನವದೆಹಲಿ: ದೇಶವು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಪ್ರಗತಿ ಸಾಧಿಸಿ 'ವಿಕಸಿತ ಭಾರತ'ವಾಗಿ ರೂಪುಗೊಳ್ಳಬೇಕಾದರೆ, ಯುವ ಜನತೆ ಮಾದಕ ವಸ್ತುಗಳ ಪಿಡುಗಿನಿಂದ…
ಮೈಸೂರು: ಮೊದಲ ಹಂತದಲ್ಲಿ ಆಗಮಿಸಿರುವ ದಸರಾ ಆನೆಗಳಿಗೆ ತೂಕ ಪರೀಕ್ಷೆ ಮಾಡಲಾಗಿದೆ. ಶ್ರೀಕಂಠ ಆನೆ ಹೆಚ್ಚು ತೂಕ ಹೊಂದಿದೆ. ಆದರೆ…