ಮೈಸೂರು : ಭಗವಾನ್ ಮಹಾವೀರ ಆದರ್ಶ ಹಾಗೂ ತತ್ವಗಳು ಅಮೂಲ್ಯವಾದವು. ಅವರ ತತ್ವ ಪಾಲಿಸದರೆ ವಿಶ್ವದಲ್ಲಿ ಶಾಂತಿ, ನೆಮ್ಮದಿ ಉಂಟಾಗಲಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಹೇಳಿದರು.
ನಗರದ ಕಲಾಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಗುರುವಾರ ಅಯೋಜಿಸಿದ್ದ ಶ್ರೀ ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಾಂತಿ ಮತ್ತು ಅಹಿಂಸೆ ಬಗ್ಗೆ ಹೆಚ್ಚಾಗಿ ಬೋಧನೆ ಮಾಡಿದ ಮಹಾವೀರರು ತೋರಿದ ಸನ್ಮಾರ್ಗದಲ್ಲಿ ನಡೆಯಬೇಕು ಎಂದರು.
ಭಗವಾನ್ ಮಹಾವೀರ ಅವರು ತಮ್ಮ ಉಪದೇಶ ಮತ್ತು ತತ್ವಗಳನ್ನು ಜೈನರಿಗೆ ಮಾತ್ರ ಹೇಳಿಕೊಡಲಿಲ್ಲ. ಸಮಸ್ತ ಮಾನವ ಕಲ್ಯಾಣಕ್ಕೆ ಹೇಳಿದ್ದಾರೆ. ಅವರ ತತ್ವಗಳನ್ನು ನಾವೆಲ್ಲರೂ ಪಾಲಿಸಬೇಕು. ಅಹಿಂಸಾ ತತ್ವಕ್ಕೆ ವಿಶ್ವದ ಇಡೀ ಮಾನವ ಕುಲವನ್ನು ಒಂದುಗೂಡಿಸುವ ಶಕ್ತಿಯಿದೆ. ಅಂಥ ತತ್ವ ಬೋಧಿಸಿದ ಭಗವಾನ ಮಹಾವೀರರ ಸಂದೇಶಗಳನ್ನು ನಾವೆಲ್ಲರೂ ಪಾಲಿಸಬೇಕಿದೆ ಎಂದು ಸಲಹೆ ನೀಡಿದರು.
ಹಿರಿಯ ಸಾಹಿತಿ ಪ್ರೊ.ಎಸ್.ಶಿವರಾಜಪ್ಪ ಮಾತನಾಡಿ, ಭಗವಾನ್ ಮಹಾವೀರರ ಜಯಂತಿ ಜೈನರಿಗೆ ಮಾತ್ರ ಸೀಮಿತವಲ್ಲ. ಈ ಜಗತ್ತಿನಲ್ಲಿ ವಾಸಮಾಡುವಂತಹ ಎಲ್ಲಾ ಜೀವಗಳಿಗೂ ಶ್ರೇಯಸನ್ನು ಬಯಸಿದಂತ ಮಹಾವೀರ, ಎಲ್ಲಾ ಧರ್ಮೀಯರಿಗೆ ಪ್ರಿಯವಾದ ಸಂದೇಶವನ್ನು ನೀಡಿದ್ದಾರೆ ಎಂದು ಹೇಳಿದರು.
ಧರ್ಮಗಳಲ್ಲಿ ಐಕ್ಯತೆ ಇಲ್ಲದೆ ಹೋದರೆ ದೇಶ ನಾಶವಾಗುವುದರ ಜೊತೆಗೆ ಸಮಾಜ ಹಾಗೂ ಮನಸ್ಸುಗಳು ನಡುವೆ ವೈ ಮನಸ್ಸು ಉಂಟಾಗಿ ಧ್ವೇಷ ಅಸೂಯೆ ಹೆಚ್ಚುತ್ತದೆ. ನಾವು ಧರ್ಮವನ್ನು ಹೇಳುತ್ತಿದ್ದೇವೆ ಹೊರತು ಆ ತತ್ವ ಸಿದ್ಧಾಂತಗಳನ್ನು ನಾವು ಅರ್ಥ ಮಾಡಿಕೊಳ್ಳುವುದರ ಜೊತೆಗೆ ಆತ್ಮಾವಲೋಕನ ಮಾಡಿಕೊಳ್ಳುವುದು ಬಹಳ ಮುಖ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ವಿ.ಎನ್ ಮಲ್ಲಿಕಾರ್ಜುನ ಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಂ.ಡಿ ಸುದರ್ಶನ್, ಮೈಸೂರಿನ ಜೈನ ಸಮಾಜದ ಅಧ್ಯಕ್ಷ ಸುನಿಲ್ ಕುಮಾರ್ ಮತ್ತು ಕಾರ್ಯದರ್ಶಿಗಳು ಹಾಗೂ ಜೈನ ಧರ್ಮದ ಅಧ್ಯಕ್ಷರು ಉಪಸ್ಥಿತರಿದ್ದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುವನ್ನು ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…
ಟೆಹರಾನ್: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್ನಲ್ಲಿನ ಬೃಹತ್ ಕಟ್ಟಡಗಳು…
ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…
ಜಮ್ಮು-ಕಾಶ್ಮೀರ: ಇಸ್ರೇಲ್ ಮತ್ತು ಅಮೇರಿಕಾ ಇರಾನ್ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.…
ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…