ಮೈಸೂರು

ಮಹಾವೀರರ ತತ್ವದಿಂದ ವಿಶ್ವಶಾಂತಿ ಸಾಧ್ಯ

ಮೈಸೂರು : ಭಗವಾನ್‌ ಮಹಾವೀರ ಆದರ್ಶ ಹಾಗೂ ತತ್ವಗಳು ಅಮೂಲ್ಯವಾದವು. ಅವರ ತತ್ವ ಪಾಲಿಸದರೆ ವಿಶ್ವದಲ್ಲಿ ಶಾಂತಿ, ನೆಮ್ಮದಿ ಉಂಟಾಗಲಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು  ಹೇಳಿದರು.

ನಗರದ ಕಲಾಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಗುರುವಾರ ಅಯೋಜಿಸಿದ್ದ ಶ್ರೀ ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಾಂತಿ ಮತ್ತು ಅಹಿಂಸೆ ಬಗ್ಗೆ ಹೆಚ್ಚಾಗಿ ಬೋಧನೆ ಮಾಡಿದ ಮಹಾವೀರರು ತೋರಿದ  ಸನ್ಮಾರ್ಗದಲ್ಲಿ  ನಡೆಯಬೇಕು ಎಂದರು.

ಭಗವಾನ್ ಮಹಾವೀರ ಅವರು ತಮ್ಮ ಉಪದೇಶ ಮತ್ತು ತತ್ವಗಳನ್ನು ಜೈನರಿಗೆ ಮಾತ್ರ ಹೇಳಿಕೊಡಲಿಲ್ಲ. ಸಮಸ್ತ ಮಾನವ ಕಲ್ಯಾಣಕ್ಕೆ ಹೇಳಿದ್ದಾರೆ. ಅವರ ತತ್ವಗಳನ್ನು ನಾವೆಲ್ಲರೂ ಪಾಲಿಸಬೇಕು. ಅಹಿಂಸಾ ತತ್ವಕ್ಕೆ ವಿಶ್ವದ ಇಡೀ ಮಾನವ ಕುಲವನ್ನು ಒಂದುಗೂಡಿಸುವ ಶಕ್ತಿಯಿದೆ. ಅಂಥ ತತ್ವ ಬೋಧಿಸಿದ ಭಗವಾನ ಮಹಾವೀರರ ಸಂದೇಶಗಳನ್ನು ನಾವೆಲ್ಲರೂ ಪಾಲಿಸಬೇಕಿದೆ ಎಂದು ಸಲಹೆ ನೀಡಿದರು.

ಹಿರಿಯ ಸಾಹಿತಿ ಪ್ರೊ.ಎಸ್.ಶಿವರಾಜಪ್ಪ ಮಾತನಾಡಿ, ಭಗವಾನ್ ಮಹಾವೀರರ ಜಯಂತಿ ಜೈನರಿಗೆ ಮಾತ್ರ ಸೀಮಿತವಲ್ಲ. ಈ ಜಗತ್ತಿನಲ್ಲಿ ವಾಸಮಾಡುವಂತಹ ಎಲ್ಲಾ ಜೀವಗಳಿಗೂ ಶ್ರೇಯಸನ್ನು ಬಯಸಿದಂತ ಮಹಾವೀರ, ಎಲ್ಲಾ ಧರ್ಮೀಯರಿಗೆ ಪ್ರಿಯವಾದ ಸಂದೇಶವನ್ನು ನೀಡಿದ್ದಾರೆ ಎಂದು ಹೇಳಿದರು.

ಧರ್ಮಗಳಲ್ಲಿ ಐಕ್ಯತೆ ಇಲ್ಲದೆ ಹೋದರೆ  ದೇಶ ನಾಶವಾಗುವುದರ ಜೊತೆಗೆ ಸಮಾಜ ಹಾಗೂ ಮನಸ್ಸುಗಳು ನಡುವೆ ವೈ ಮನಸ್ಸು ಉಂಟಾಗಿ ಧ್ವೇಷ ಅಸೂಯೆ‌ ಹೆಚ್ಚುತ್ತದೆ. ನಾವು ಧರ್ಮವನ್ನು ಹೇಳುತ್ತಿದ್ದೇವೆ ಹೊರತು ಆ ತತ್ವ ಸಿದ್ಧಾಂತಗಳನ್ನು ನಾವು ಅರ್ಥ ಮಾಡಿಕೊಳ್ಳುವುದರ ಜೊತೆಗೆ ಆತ್ಮಾವಲೋಕನ ಮಾಡಿಕೊಳ್ಳುವುದು ಬಹಳ ಮುಖ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ವಿ.ಎನ್ ಮಲ್ಲಿಕಾರ್ಜುನ ಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಂ.ಡಿ ಸುದರ್ಶನ್, ಮೈಸೂರಿನ ಜೈನ ಸಮಾಜದ ಅಧ್ಯಕ್ಷ ಸುನಿಲ್ ಕುಮಾರ್ ಮತ್ತು ಕಾರ್ಯದರ್ಶಿಗಳು ಹಾಗೂ ಜೈನ ಧರ್ಮದ ಅಧ್ಯಕ್ಷರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕನ್ನಡಿಗರ ರಕ್ಷಣೆಗೆ ಕ್ರಮ ಕೈಗೊಳ್ಳಿ: ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇರಾನ್‌-ಇಸ್ರೇಲ್‌ ನಡುವಿನ ಸಂಘರ್ಷ ಏರ್ಪಟ್ಟಿರುವ ಪರಿಣಾಮ ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ…

2 hours ago

ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲ: ಸಂಸದ ಯದುವೀರ್‌ ಒಡೆಯರ್‌

ನಾಪೋಕ್ಲು: ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ವಾಗ್ದಾಳಿ…

2 hours ago

ಹನೂರು: ಶಾಲೆಗೆ ನೂತನ ಕಟ್ಟಡ ನಿರ್ಮಿಸುವಂತೆ ಆಗ್ರಹ: ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಶಿಕ್ಷಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಳಸಿಕೆರೆ ಗ್ರಾಮದ…

2 hours ago

ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ: ವಿಪಕ್ಷ ನಾಯಕ ಆರ್.‌ಅಶೋಕ್‌

ಬೆಂಗಳೂರು: ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು…

3 hours ago

ನಾಳೆ ರಕ್ತ ಚಂದ್ರಗ್ರಹಣ: ಕೊಡಗಿನ ವಿವಿಧ ದೇವಾಲಯಗಳಲ್ಲಿ ಪೂಜಾ ಸಮಯ ಬದಲು

ಕೊಡಗು: ನಾಳೆ ವರ್ಷದ ಮೊದಲ ಚಂದ್ರಗ್ರಹಣ ಹೋಳಿ ಹುಣ್ಣಿಮೆಯ ದಿನದಂದು ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ಪೂಜಾ…

3 hours ago

ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ.!

ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನು ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ ಮದ್ದೂರು…

3 hours ago