ಮೈಸೂರು

ಮಹಾವೀರರ ತತ್ವದಿಂದ ವಿಶ್ವಶಾಂತಿ ಸಾಧ್ಯ

ಮೈಸೂರು : ಭಗವಾನ್‌ ಮಹಾವೀರ ಆದರ್ಶ ಹಾಗೂ ತತ್ವಗಳು ಅಮೂಲ್ಯವಾದವು. ಅವರ ತತ್ವ ಪಾಲಿಸದರೆ ವಿಶ್ವದಲ್ಲಿ ಶಾಂತಿ, ನೆಮ್ಮದಿ ಉಂಟಾಗಲಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು  ಹೇಳಿದರು.

ನಗರದ ಕಲಾಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಗುರುವಾರ ಅಯೋಜಿಸಿದ್ದ ಶ್ರೀ ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಾಂತಿ ಮತ್ತು ಅಹಿಂಸೆ ಬಗ್ಗೆ ಹೆಚ್ಚಾಗಿ ಬೋಧನೆ ಮಾಡಿದ ಮಹಾವೀರರು ತೋರಿದ  ಸನ್ಮಾರ್ಗದಲ್ಲಿ  ನಡೆಯಬೇಕು ಎಂದರು.

ಭಗವಾನ್ ಮಹಾವೀರ ಅವರು ತಮ್ಮ ಉಪದೇಶ ಮತ್ತು ತತ್ವಗಳನ್ನು ಜೈನರಿಗೆ ಮಾತ್ರ ಹೇಳಿಕೊಡಲಿಲ್ಲ. ಸಮಸ್ತ ಮಾನವ ಕಲ್ಯಾಣಕ್ಕೆ ಹೇಳಿದ್ದಾರೆ. ಅವರ ತತ್ವಗಳನ್ನು ನಾವೆಲ್ಲರೂ ಪಾಲಿಸಬೇಕು. ಅಹಿಂಸಾ ತತ್ವಕ್ಕೆ ವಿಶ್ವದ ಇಡೀ ಮಾನವ ಕುಲವನ್ನು ಒಂದುಗೂಡಿಸುವ ಶಕ್ತಿಯಿದೆ. ಅಂಥ ತತ್ವ ಬೋಧಿಸಿದ ಭಗವಾನ ಮಹಾವೀರರ ಸಂದೇಶಗಳನ್ನು ನಾವೆಲ್ಲರೂ ಪಾಲಿಸಬೇಕಿದೆ ಎಂದು ಸಲಹೆ ನೀಡಿದರು.

ಹಿರಿಯ ಸಾಹಿತಿ ಪ್ರೊ.ಎಸ್.ಶಿವರಾಜಪ್ಪ ಮಾತನಾಡಿ, ಭಗವಾನ್ ಮಹಾವೀರರ ಜಯಂತಿ ಜೈನರಿಗೆ ಮಾತ್ರ ಸೀಮಿತವಲ್ಲ. ಈ ಜಗತ್ತಿನಲ್ಲಿ ವಾಸಮಾಡುವಂತಹ ಎಲ್ಲಾ ಜೀವಗಳಿಗೂ ಶ್ರೇಯಸನ್ನು ಬಯಸಿದಂತ ಮಹಾವೀರ, ಎಲ್ಲಾ ಧರ್ಮೀಯರಿಗೆ ಪ್ರಿಯವಾದ ಸಂದೇಶವನ್ನು ನೀಡಿದ್ದಾರೆ ಎಂದು ಹೇಳಿದರು.

ಧರ್ಮಗಳಲ್ಲಿ ಐಕ್ಯತೆ ಇಲ್ಲದೆ ಹೋದರೆ  ದೇಶ ನಾಶವಾಗುವುದರ ಜೊತೆಗೆ ಸಮಾಜ ಹಾಗೂ ಮನಸ್ಸುಗಳು ನಡುವೆ ವೈ ಮನಸ್ಸು ಉಂಟಾಗಿ ಧ್ವೇಷ ಅಸೂಯೆ‌ ಹೆಚ್ಚುತ್ತದೆ. ನಾವು ಧರ್ಮವನ್ನು ಹೇಳುತ್ತಿದ್ದೇವೆ ಹೊರತು ಆ ತತ್ವ ಸಿದ್ಧಾಂತಗಳನ್ನು ನಾವು ಅರ್ಥ ಮಾಡಿಕೊಳ್ಳುವುದರ ಜೊತೆಗೆ ಆತ್ಮಾವಲೋಕನ ಮಾಡಿಕೊಳ್ಳುವುದು ಬಹಳ ಮುಖ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ವಿ.ಎನ್ ಮಲ್ಲಿಕಾರ್ಜುನ ಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಂ.ಡಿ ಸುದರ್ಶನ್, ಮೈಸೂರಿನ ಜೈನ ಸಮಾಜದ ಅಧ್ಯಕ್ಷ ಸುನಿಲ್ ಕುಮಾರ್ ಮತ್ತು ಕಾರ್ಯದರ್ಶಿಗಳು ಹಾಗೂ ಜೈನ ಧರ್ಮದ ಅಧ್ಯಕ್ಷರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

9 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

9 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

9 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

9 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

9 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

9 hours ago