ಮೈಸೂರು : ವಿಶ್ವ ಹಾವುಗಳ ದಿನಾಚರಣೆ ಅಂಗವಾಗಿ ಕೆ.ಎಂ.ಪಿ.ಕೆ ಚಾರಿಟೇಬಲ್ ಟ್ರಸ್ಟ್ ಹಾಗೂ ಜೀವದಾರ ರಕ್ತ ನಿಧಿ ಕೇಂದ್ರ ಲಕ್ಷ್ಮಿಪುರಂನಲ್ಲಿರುವ ಕಚೇರಿಯಲ್ಲಿ ವಿಶ್ವ ಹಾವುಗಳ ದಿನಾಚರಣೆ ಆಚರಿಸಲಾಯಿತು. ಈ ವೇಳೆ 85 ಸಾವಿರಕ್ಕೂ ಹೆಚ್ಚು ಹಾವುಗಳನ್ನು ಸಂರಕ್ಷಿಸಿದ ಉರಗ ತಜ್ಞ ಸ್ನೇಕ್ ಶ್ಯಾಮ್ ರವರಿಗೆ ಸನ್ಮಾನ ಮಾಡಿ ಅಭಿನಂದಿಸಲಾಯಿತು.
ಬಳಿಕ ಮಾತನಾಡಿದ ಉರಗ ತಜ್ಞ ಸ್ನೇಕ್ ಶ್ಯಾಮ್, ಪರಿಸರ ಸಮತೋಲನಕ್ಕೆ ಉರಗ ಸಂತತಿಯ ಉಳಿವೂ ಮುಖ್ಯ ,ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತಮುತ್ತಲಿನ ಉಪಯುಕ್ತ ಸ್ಥಳದಲ್ಲಿಯೇ ಗಿಡಗಳನ್ನು ನೆಟ್ಟು ಬೆಳೆಸಬೇಕು. ಆ ಮೂಲಕ ಪರಿಸರವನ್ನು ಶುದ್ಧವಾಗಿಸುವ ಅಲ್ಪ ಸೇವೆಯನ್ನು ಮಾಡಿದಂತಾಗುತ್ತದೆ. ಪರಿಸರದಲ್ಲಿರುವ ಪ್ರತಿಯೊಂದು ಜೀವಿಯೂ ಒಂದನ್ನೊಂದು ಅವಲಂಬಿಸಿಯೇ ಬದುಕುವ ಕಾರಣ ಪ್ರತಿಯೊಂದಕ್ಕೂ ಪ್ರಾಮುಖ್ಯತೆಯಿದೆ. ಎಲ್ಲವನ್ನೂ ಗೌರವಿಸಿ ಎಂದು ಹೇಳಿದರು. ಬಳಿಕ ಉರಗ ಪ್ರಭೇದಗಳು, ಅವುಗಳ ಸಂತತಿ, ಹಾವಿನ ಕಡಿತದ ಬಳಿಕ ನಡೆಸುವ ಪ್ರಥಮ ಚಿಕಿತ್ಸೆಗಳ ಕುರಿತು ಮಾಹಿತಿ ನೀಡಿದರು.
ಇದೇ ವೇಳೆ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣ ಗೌಡ ಮಾತನಾಡಿ, ಕೋವಿಡ್ ನಂತಹ ಕಷ್ಡಕಾಲದಲ್ಲೂ ಮನೆಗಳಿಗೆ ಹಾವು ಬಂದಾಗ ಸ್ನೇಕ್ ಶ್ಯಾಮ್ ರವರು ಹಾವನ್ನ ಸಂರಕ್ಷಿಸಿದ್ದಾರೆ, ಅಂತರಾಷ್ಟ್ರೀಯ ಉರಗತಜ್ಞ ಸ್ನೇಕ್ ಶ್ಯಾಮ್ ರವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಬಂದಿದೆ. ಅಷ್ಟೇ ಅಲ್ಲದೇ 85 ಸಾವಿರಕ್ಕೂ ಹೆಚ್ಚು ಹಾವನ್ನ ಸಂರಕ್ಷಿಸಿದ್ದಾರೆ. ಪರಿಸರ ಸಂರಕ್ಷಣೆ ಜೊತೆಯಲ್ಲೆ ಧಾರ್ಮಿಕ ಕೇಂದ್ರವನ್ನ ಸ್ಥಾಪಿಸಿರುವುದು ಶ್ಲಾಘನೀಯ. ಪರಿಸರ ಸಂರಕ್ಷಣೆ ವಿಚಾರವಾಗಿ ಪಠ್ಯಪುಸ್ತಕಗಳಲ್ಲಿ ಸ್ನೇಕ್ ಶ್ಯಾಮ್ ರವರ ಸೇವೆ ಮತ್ತು ಪರಿಸರ ಕಾಳಜಿಯ ವಿಷಯದ ಬಗ್ಗೆ ರಾಜ್ಯ ಸರ್ಕಾರ ಅಳವಡಿಸಿ ಸಣ್ಣಮಕ್ಕಳಲ್ಲಿ ಉರಗ ಮತ್ತು ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು
ಕಾರ್ಯಕ್ರಮದಲ್ಲಿ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ, ನಜರ್ಬಾದ್ ನಟರಾಜ್, ಕೆ ಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಜಿ ರಾಘವೇಂದ್ರ,ಪ್ರಕಾಶ್ ಪ್ರಿಯದರ್ಶನ್, ಪರಮೇಶ್ ಗೌಡ, ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಅಜಯ್ ಶಾಸ್ತ್ರಿ, ಕೆ ಎಂ ನಿಶಾಂತ್, ಅಪೂರ್ವ ಸುರೇಶ್, ಬೈರತಿ ಲಿಂಗರಾಜು, ಸುಚಿಂದ್ರ, ಚಕ್ರಪಾಣಿ, ಎಸ್ ಎನ್ ರಾಜೇಶ್, ಸದಾಶಿವ್, ಸಚಿನ್ ನಾಯಕ್, ಸಫಿ, ರಾಕೇಶ್, ಹಾಗೂ ಇನ್ನಿತರರು ಹಾಜರಿದ್ದರು.
ಪಂಪ ಪ್ರಶಸ್ತಿ ಪಡೆಯುತ್ತಿರುವ ಮಹಾದೇವರಿಗೆ ಎಲ್ಲಾ ಮನೆಗಳ ಜೋತಮ್ಮದೀರು ಹರಸಲಿ ರಾಜೇಂದ್ರ ಚೆನ್ನಿ ೧ ತಮ್ಮ ಒಟ್ಟು ಬರಹಗಳು ಇಷ್ಟು ಕಡಿಮೆ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು ನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಆತಂಕ ಒಂದು ವರ್ಷದಲ್ಲಿ ೨೫ ಚಿರತೆಗಳ ಸೆರೆ ಅರಣ್ಯ ಇಲಾಖೆಯಿಂದ ಜನ…
ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್ಬೋಟ್ಗಳಿಂದ…
ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್, ತನ್ನ ನಿರ್ಧಾರವನ್ನು…
ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…