ಮೈಸೂರು

ಮೈಸೂರು: ವೇಂಕಟಾಚಲಧಾಮದಲ್ಲಿ ಇಂದಿನಿಂದ ರಾಯರ ಆರಾಧನೆ

ಮೈಸೂರು: ಶ್ರೀ ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವದ ಅಂಗವಾಗಿ ಮೈಸೂರಿನ ಚಾಮರಾಜ ಜೋಡಿ ರಸ್ತೆಯ ಭಂಡಾರಕೇರಿ ಮಠದ ವೇಂಕಟಾಚಲ ಧಾಮದಲ್ಲಿ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಪ್ರತಿಷ್ಠಾಪಿಸಿರುವ ರಾಘವೇಂದ್ರ ಸ್ವಾಮಿಗಳ ಮೃತ್ತಿಕಾ ವೃಂದಾವನ ಕ್ಷೇತ್ರದಲ್ಲಿ ಆ.20ರಿಂದ 3 ದಿನಗಳ ಕಾಲ ವಿಶೇಷ ಆರಾಧನೋತ್ಸವ ನೆರವೇರಲಿದೆ.

ಸಾಂಸ್ಕೃತಿಕ ಕಾರ್ಯಕ್ರಮ ಸರಣಿಯಲ್ಲಿ 20ರ ಸಂಜೆ 6 ಗಂಟೆಗೆ ಎ.ಆರ್. ಕೌಸಲ್ಯಾ ರಘುರಾಂ ತಂಡದಿಂದ ವಿಶೇಷ ಭಜನೆ, ರಾತ್ರಿ 8 ಗಂಟೆಗೆ ರಥೋತ್ಸವ, ರಂಗಪೂಜೆ, 21 ರ ಸಂಜೆ 5.30ಕ್ಕೆ ಕಲಾವಿದೆ ಲಲಿತಾ ಉಳಿಯಾರು ತಂಡದಿಂದ ‘ ರಾಘವೇದ್ರ ಮಹಾತ್ಮೆ’ ಹರಿಕಥೆ, ರಾತ್ರಿ 8ಕ್ಕೆ ಅಷ್ಟಾವಧಾನ ಮತ್ತು ರಂಗಸೇವೆ ನೆರವೇರಲಿದೆ.

22 ರ ಸಂಜೆ 6ಕ್ಕೆ ವಿದ್ವಾನ್ ಕೃಷ್ಣಕುಮಾರ ಆಚಾರ್ಯರಿಂದ ‘ಪ್ರಹ್ಲಾದ ಚರಿತ್ರೆ’ ವಿಶೇಷ ಉಪನ್ಯಾಸ, ರಾತ್ರಿ 8ಕ್ಕೆ ರಾಯರಿಗೆ ಮತ್ತು ಶ್ರೀನಿವಾಸ ದೇವರಿಗೆ ಮಹಾಮಂಗಳಾರತಿ ಸಂಪನ್ನಗೊಳ್ಳಲಿದೆ.

ರಾಯರ ವೃಂದಾವನಕ್ಕೆ ಮೂರು ದಿನವೂ ಬೆಳಿಗ್ಗೆ ಅಷ್ಟೋತ್ತರ ಪಾರಾಯಣ ನಂತರ ಪಂಚಾಮೃತಾಭಿಷೇಕ, ಎಳನೀರು ಅಭಿಷೇಕ ಮಾಡಲಾಗುತ್ತದೆ. ವಿಶೇಷ ಹೂವಿನ ಅಲಂಕಾರ ನೆರವೇರಲಿದೆ. ಭಕ್ತರಿಂದ ರಾಯರ ಪಾದುಕೆಗಳಿಗೆ ಪ್ರತ್ಯೇಕ ಪಾದಪೂಜೆ, ಕನಕಾಭಿಷೇಕ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಸಂಜೆ ಪ್ರಾಕಾರ ಉತ್ಸವ, ಅಷ್ಟಾವಧಾನ ಸೇವೆ ಮತ್ತು ರಂಗಪೂಜೆ ಸಂಪನ್ನಗೊಳ್ಳಲಿದೆ. ಪ್ರಧಾನ ಅರ್ಚಕ ರಾಘವೇಂದ್ರಾಚಾರ್ ಪೂಜಾಕಾರ್ಯದ ನೇತೃತ್ವವಹಿಸಲಿದ್ದಾರೆ. ವಿವರಗಳಿಗೆ 9845492732 ಸಂಪರ್ಕಿಸಬಹುದು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

53 mins ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

5 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

5 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

5 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

5 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

5 hours ago