ಮೈಸೂರು: ಶ್ರೀ ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವದ ಅಂಗವಾಗಿ ಮೈಸೂರಿನ ಚಾಮರಾಜ ಜೋಡಿ ರಸ್ತೆಯ ಭಂಡಾರಕೇರಿ ಮಠದ ವೇಂಕಟಾಚಲ ಧಾಮದಲ್ಲಿ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಪ್ರತಿಷ್ಠಾಪಿಸಿರುವ ರಾಘವೇಂದ್ರ ಸ್ವಾಮಿಗಳ ಮೃತ್ತಿಕಾ ವೃಂದಾವನ ಕ್ಷೇತ್ರದಲ್ಲಿ ಆ.20ರಿಂದ 3 ದಿನಗಳ ಕಾಲ ವಿಶೇಷ ಆರಾಧನೋತ್ಸವ ನೆರವೇರಲಿದೆ.
ಸಾಂಸ್ಕೃತಿಕ ಕಾರ್ಯಕ್ರಮ ಸರಣಿಯಲ್ಲಿ 20ರ ಸಂಜೆ 6 ಗಂಟೆಗೆ ಎ.ಆರ್. ಕೌಸಲ್ಯಾ ರಘುರಾಂ ತಂಡದಿಂದ ವಿಶೇಷ ಭಜನೆ, ರಾತ್ರಿ 8 ಗಂಟೆಗೆ ರಥೋತ್ಸವ, ರಂಗಪೂಜೆ, 21 ರ ಸಂಜೆ 5.30ಕ್ಕೆ ಕಲಾವಿದೆ ಲಲಿತಾ ಉಳಿಯಾರು ತಂಡದಿಂದ ‘ ರಾಘವೇದ್ರ ಮಹಾತ್ಮೆ’ ಹರಿಕಥೆ, ರಾತ್ರಿ 8ಕ್ಕೆ ಅಷ್ಟಾವಧಾನ ಮತ್ತು ರಂಗಸೇವೆ ನೆರವೇರಲಿದೆ.
22 ರ ಸಂಜೆ 6ಕ್ಕೆ ವಿದ್ವಾನ್ ಕೃಷ್ಣಕುಮಾರ ಆಚಾರ್ಯರಿಂದ ‘ಪ್ರಹ್ಲಾದ ಚರಿತ್ರೆ’ ವಿಶೇಷ ಉಪನ್ಯಾಸ, ರಾತ್ರಿ 8ಕ್ಕೆ ರಾಯರಿಗೆ ಮತ್ತು ಶ್ರೀನಿವಾಸ ದೇವರಿಗೆ ಮಹಾಮಂಗಳಾರತಿ ಸಂಪನ್ನಗೊಳ್ಳಲಿದೆ.
ರಾಯರ ವೃಂದಾವನಕ್ಕೆ ಮೂರು ದಿನವೂ ಬೆಳಿಗ್ಗೆ ಅಷ್ಟೋತ್ತರ ಪಾರಾಯಣ ನಂತರ ಪಂಚಾಮೃತಾಭಿಷೇಕ, ಎಳನೀರು ಅಭಿಷೇಕ ಮಾಡಲಾಗುತ್ತದೆ. ವಿಶೇಷ ಹೂವಿನ ಅಲಂಕಾರ ನೆರವೇರಲಿದೆ. ಭಕ್ತರಿಂದ ರಾಯರ ಪಾದುಕೆಗಳಿಗೆ ಪ್ರತ್ಯೇಕ ಪಾದಪೂಜೆ, ಕನಕಾಭಿಷೇಕ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಸಂಜೆ ಪ್ರಾಕಾರ ಉತ್ಸವ, ಅಷ್ಟಾವಧಾನ ಸೇವೆ ಮತ್ತು ರಂಗಪೂಜೆ ಸಂಪನ್ನಗೊಳ್ಳಲಿದೆ. ಪ್ರಧಾನ ಅರ್ಚಕ ರಾಘವೇಂದ್ರಾಚಾರ್ ಪೂಜಾಕಾರ್ಯದ ನೇತೃತ್ವವಹಿಸಲಿದ್ದಾರೆ. ವಿವರಗಳಿಗೆ 9845492732 ಸಂಪರ್ಕಿಸಬಹುದು.
ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…
ಬೆಂಗಳೂರು: ಬೌರಿಂಗ್ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್ ಅನ್ನು ಕೂಡಲೇ ಅಮಾನತು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…
ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…