yadhuveer wadiyar
ಮೈಸೂರು: ಮರು ಜಾತಿಗಣತಿಗೆ ಮುಂದಾಗಿರುವ ರಾಜ್ಯ ಸರ್ಕಾರದ ನಿಲುವಿಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನೂರಾರು ಕೋಟಿ ವ್ಯಯಿಸಿ ಕಾಂತರಾಜು ಆಯೋಗ ಸಿದ್ಧಪಡಿಸಿದ್ದ ಜಾತಿಗಣತಿ ವರದಿಯನ್ನು ಇದುವರೆಗೂ ಬಹಿರಂಗ ಪಡಿಸಿಲ್ಲ. ಬೆಂಗಳೂರು ಕಾಲ್ತುಳಿತ ಘಟನೆಯಿಂದ ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ಬಂದಿದೆ. ರಾಜ್ಯ ಸರ್ಕಾರದ ಬೇಜವಾಬ್ದಾರಿಯಿಂದ 11 ಮಂದಿ ಯುವಜನರು ಸಾವನ್ನಪ್ಪಿದ್ದಾರೆ. ಇದರಿಂದ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಿದೆ.
ಜನರ ಗಮನವನ್ನು ಬೇರೆಡೆ ಸೆಳೆಯುವ ಸಲುವಾಗಿ, ಜನರ ದಿಕ್ಕು ತಪ್ಪಿಸಲು ಮರು ಜಾತಿಗಣತಿಗೆ ಮುಂದಾಗಿದ್ದಾರೆ. ಕೇವಲ 90 ದಿನದಲ್ಲಿ ಮರು ಜಾತಿಗಣತಿ ನಡೆಸಲು ಸಾಧ್ಯವೇ ಇಲ್ಲ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರನ್ನು ಉಳಿಸಲು ಕಾಂಗ್ರೆಸ್ ಹೈಕಮಾಂಡ್ ಹಿಂದುಳಿದ ವರ್ಗಗಳ ಹಿತವನ್ನು ಬಲಿಕೊಟ್ಟಿದೆ. ಈಗಾಗಲೇ ಕೇಂದ್ರ ಸರ್ಕಾರ ಜನಗಣತಿಯ ಜೊತೆಗೆ ಜಾತಿಗಣತಿಯನ್ನು ಕೂಡ ನಡೆಸುವಂತೆ ಸೂಚಿಸಿದೆ. ಹಾಗಾಗಿ ರಾಜ್ಯದಲ್ಲಿ ಮರು ಜಾತಿಗಣತಿ ನಡೆಸುವ ಅವಶ್ಯಕತೆ ಇಲ್ಲ. ರಾಜ್ಯದ ಜಾತಿಗಣತಿ ವಿಚಾರವನ್ನು ರಾಹುಲ್ ಗಾಂಧಿ, ವೇಣುಗೋಪಾಲ್ ನಿರ್ಧರಿಸಲು ಮುಂದಾಗಿದ್ದು ಸರಿಯಲ್ಲ. ಮರು ಜಾತಿಗಣತಿ ನಡೆಸುವ ಸಾಮರ್ಥ್ಯ ರಾಜ್ಯ ಸರ್ಕಾರಕ್ಕಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…