ಮೈಸೂರು: ಮೈಸೂರು ನಗರವು ಹಿಂದೆ ಹೆಚ್ಚು ಬಾರಿ ಸ್ವಚ್ಛನಗರಿ ಪಟ್ಟವನ್ನು ತನ್ನದಾಗಿಸಿಕೊಂಡಿತ್ತು. ಈಗ ಕೆಲವು ವರ್ಷಗಳಿಂದ ಆ ಅವಕಾಶ ಕೈತಪ್ಪಿ ಹೋಗಿದೆ. ಮತ್ತೇ ಮೈಸೂರಿಗೆ ಪ್ರಶಸ್ತಿ ಬರಲು ನಗರದ ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.
ವಿಶ್ವ ಪರಿಸರ ದಿನದ ಅಂಗವಾಗಿ ನಗರದ ಸಿಎಫ್ಟಿಆರ್ಐನಲ್ಲಿ ‘ಇಕೋ ಫ್ಯಾಕ್ಟರಿ ಫೌಂಡೇಶನ್’ ಸಹಯೋಗದಲ್ಲಿ ಆಯೋಜಿಸಿದ್ದ ವಸ್ತುಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು, ಸ್ವಚ್ಛನಗರಿ ಪ್ರಶಸ್ತಿ ಬರಲು ಹಲವಾರು ಮಾನದಂಡಗಳಿವೆ. ಮೈಸೂರಿನಲ್ಲಿ ಸ್ವಚ್ಛತೆಗೆ ಹಿಂದಿನಿಂದಲೂ ಆದ್ಯತೆ ನೀಡಲಾಗಿದೆ. ಆದರೆ, ಈಗ ಕಾಮಗಾರಿಗಳು ಹೆಚ್ಚಾಗಿ ನಡೆಯುತ್ತಿರುವುದರಿಂದ ಅವುಗಳ ತ್ಯಾಜ್ಯ ಸಾಗಣೆ ದುಸ್ತರವಾಗಿದೆ ಎಂದರು.
ನಗರದ ಸುತ್ತಮುತ್ತ ಅನೇಕ ಬಡಾವಣೆಗಳು ಬೆಳೆದಿವೆ. ಅವುಗಳ ಪ್ರಮಾಣಕ್ಕೆ ಅನುಗುಣವಾಗಿ ಕಸ ಸಂಗ್ರಹಣೆ, ವಿಲೇವಾರಿ ಹಾಗೂ ತ್ಯಾಜ್ಯ ಸಂಸ್ಕರಣೆ ಮಾಡಲು ಸಾಧ್ಯವಾಗುತ್ತಿಲ್ಲ. ಈ ನಿಟ್ಟಿನಲ್ಲಿ ಇವುಗಳನ್ನು ಬಲವರ್ಧನೆಗೊಳಿಸಬೇಕಾದ ಅವಶ್ಯಕತೆ ಇದೆ. ತ್ಯಾಜ್ಯ ವಿಲೇವಾರಿ ಘಟಕಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಣೆ ಚಟುವಟಿಕೆಗಳಾಗಬೇಕು ಎಂದರು.
ಸಿಎಫ್ಟಿಆರ್ಐ ನಿರ್ದೇಶಕರಾದ ಶ್ರೀದೇವಿ ಅನ್ನಪೂರ್ಣಸಿಂಗ್, ಮಾಜಿ ಶಾಸಕ ಎಲ್.ನಾಗೇಂದ್ರ, ಸಿಎಫ್ಟಿಆರ್ನ ವಿಜ್ಞಾನಿಗಳು ಉಪಸ್ಥಿತರಿದ್ದರು.
ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…
ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್ನಿಂದ ಇಸ್ರೇಲ್ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…
ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…
ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…
ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…