ಮೈಸೂರು

ಸ್ವಚ್ಛನಗರಿ ಪಟ್ಟಕ್ಕೆ ಸಹಕಾರ ಅಗತ್ಯ : ಸಂಸದ ಯದುವೀರ್‌

ಮೈಸೂರು: ಮೈಸೂರು ನಗರವು ಹಿಂದೆ ಹೆಚ್ಚು ಬಾರಿ ಸ್ವಚ್ಛನಗರಿ ಪಟ್ಟವನ್ನು ತನ್ನದಾಗಿಸಿಕೊಂಡಿತ್ತು. ಈಗ ಕೆಲವು ವರ್ಷಗಳಿಂದ ಆ ಅವಕಾಶ ಕೈತಪ್ಪಿ ಹೋಗಿದೆ. ಮತ್ತೇ ಮೈಸೂರಿಗೆ ಪ್ರಶಸ್ತಿ ಬರಲು ನಗರದ ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.

ವಿಶ್ವ ಪರಿಸರ ದಿನದ ಅಂಗವಾಗಿ ನಗರದ ಸಿಎಫ್‌ಟಿಆರ್‌ಐನಲ್ಲಿ ‘ಇಕೋ ಫ್ಯಾಕ್ಟರಿ ಫೌಂಡೇಶನ್’ ಸಹಯೋಗದಲ್ಲಿ ಆಯೋಜಿಸಿದ್ದ ವಸ್ತುಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು, ಸ್ವಚ್ಛನಗರಿ ಪ್ರಶಸ್ತಿ ಬರಲು ಹಲವಾರು ಮಾನದಂಡಗಳಿವೆ. ಮೈಸೂರಿನಲ್ಲಿ ಸ್ವಚ್ಛತೆಗೆ ಹಿಂದಿನಿಂದಲೂ ಆದ್ಯತೆ ನೀಡಲಾಗಿದೆ. ಆದರೆ, ಈಗ ಕಾಮಗಾರಿಗಳು ಹೆಚ್ಚಾಗಿ ನಡೆಯುತ್ತಿರುವುದರಿಂದ ಅವುಗಳ ತ್ಯಾಜ್ಯ ಸಾಗಣೆ ದುಸ್ತರವಾಗಿದೆ ಎಂದರು.

ನಗರದ ಸುತ್ತಮುತ್ತ ಅನೇಕ ಬಡಾವಣೆಗಳು ಬೆಳೆದಿವೆ. ಅವುಗಳ ಪ್ರಮಾಣಕ್ಕೆ ಅನುಗುಣವಾಗಿ ಕಸ ಸಂಗ್ರಹಣೆ, ವಿಲೇವಾರಿ ಹಾಗೂ ತ್ಯಾಜ್ಯ ಸಂಸ್ಕರಣೆ ಮಾಡಲು ಸಾಧ್ಯವಾಗುತ್ತಿಲ್ಲ. ಈ ನಿಟ್ಟಿನಲ್ಲಿ ಇವುಗಳನ್ನು ಬಲವರ್ಧನೆಗೊಳಿಸಬೇಕಾದ ಅವಶ್ಯಕತೆ ಇದೆ. ತ್ಯಾಜ್ಯ ವಿಲೇವಾರಿ ಘಟಕಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಣೆ ಚಟುವಟಿಕೆಗಳಾಗಬೇಕು ಎಂದರು.

ಸಿಎಫ್‌ಟಿಆರ್‌ಐ ನಿರ್ದೇಶಕರಾದ ಶ್ರೀದೇವಿ ಅನ್ನಪೂರ್ಣಸಿಂಗ್, ಮಾಜಿ ಶಾಸಕ ಎಲ್.ನಾಗೇಂದ್ರ, ಸಿಎಫ್‌ಟಿಆರ್‌ನ ವಿಜ್ಞಾನಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

6 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

8 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

8 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

8 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

9 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

9 hours ago