ಮೈಸೂರು

ಸ್ವಚ್ಛನಗರಿ ಪಟ್ಟಕ್ಕೆ ಸಹಕಾರ ಅಗತ್ಯ : ಸಂಸದ ಯದುವೀರ್‌

ಮೈಸೂರು: ಮೈಸೂರು ನಗರವು ಹಿಂದೆ ಹೆಚ್ಚು ಬಾರಿ ಸ್ವಚ್ಛನಗರಿ ಪಟ್ಟವನ್ನು ತನ್ನದಾಗಿಸಿಕೊಂಡಿತ್ತು. ಈಗ ಕೆಲವು ವರ್ಷಗಳಿಂದ ಆ ಅವಕಾಶ ಕೈತಪ್ಪಿ ಹೋಗಿದೆ. ಮತ್ತೇ ಮೈಸೂರಿಗೆ ಪ್ರಶಸ್ತಿ ಬರಲು ನಗರದ ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.

ವಿಶ್ವ ಪರಿಸರ ದಿನದ ಅಂಗವಾಗಿ ನಗರದ ಸಿಎಫ್‌ಟಿಆರ್‌ಐನಲ್ಲಿ ‘ಇಕೋ ಫ್ಯಾಕ್ಟರಿ ಫೌಂಡೇಶನ್’ ಸಹಯೋಗದಲ್ಲಿ ಆಯೋಜಿಸಿದ್ದ ವಸ್ತುಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು, ಸ್ವಚ್ಛನಗರಿ ಪ್ರಶಸ್ತಿ ಬರಲು ಹಲವಾರು ಮಾನದಂಡಗಳಿವೆ. ಮೈಸೂರಿನಲ್ಲಿ ಸ್ವಚ್ಛತೆಗೆ ಹಿಂದಿನಿಂದಲೂ ಆದ್ಯತೆ ನೀಡಲಾಗಿದೆ. ಆದರೆ, ಈಗ ಕಾಮಗಾರಿಗಳು ಹೆಚ್ಚಾಗಿ ನಡೆಯುತ್ತಿರುವುದರಿಂದ ಅವುಗಳ ತ್ಯಾಜ್ಯ ಸಾಗಣೆ ದುಸ್ತರವಾಗಿದೆ ಎಂದರು.

ನಗರದ ಸುತ್ತಮುತ್ತ ಅನೇಕ ಬಡಾವಣೆಗಳು ಬೆಳೆದಿವೆ. ಅವುಗಳ ಪ್ರಮಾಣಕ್ಕೆ ಅನುಗುಣವಾಗಿ ಕಸ ಸಂಗ್ರಹಣೆ, ವಿಲೇವಾರಿ ಹಾಗೂ ತ್ಯಾಜ್ಯ ಸಂಸ್ಕರಣೆ ಮಾಡಲು ಸಾಧ್ಯವಾಗುತ್ತಿಲ್ಲ. ಈ ನಿಟ್ಟಿನಲ್ಲಿ ಇವುಗಳನ್ನು ಬಲವರ್ಧನೆಗೊಳಿಸಬೇಕಾದ ಅವಶ್ಯಕತೆ ಇದೆ. ತ್ಯಾಜ್ಯ ವಿಲೇವಾರಿ ಘಟಕಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಣೆ ಚಟುವಟಿಕೆಗಳಾಗಬೇಕು ಎಂದರು.

ಸಿಎಫ್‌ಟಿಆರ್‌ಐ ನಿರ್ದೇಶಕರಾದ ಶ್ರೀದೇವಿ ಅನ್ನಪೂರ್ಣಸಿಂಗ್, ಮಾಜಿ ಶಾಸಕ ಎಲ್.ನಾಗೇಂದ್ರ, ಸಿಎಫ್‌ಟಿಆರ್‌ನ ವಿಜ್ಞಾನಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

14 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

14 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

14 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

14 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

14 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

17 hours ago