ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಬೋಗಾದಿ ಗ್ರಾಮ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಭರ್ಜರಿ ರೋಡ್ ಶೋ ಮೂಲಕ ಪ್ರಚಾರ ನಡೆಸಿದರು.
ಬೋಗಾದಿ ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಆರತಿ ಬೆಳಗಿ ಪಟಾಕಿ ಸಿಡಿಸಿ, ಜೈಕಾರದ ಘೋಷಣೆಗಳನ್ನು ಕೂಗಿದರು. ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತನಾಡಿ, ಹಳ್ಳಿಯ ವಾತಾವರಣ ನೋಡಿದ್ದೇನೆ. ಸಮಸ್ಯೆಗಳನ್ನು ಗಮನಿಸಿದ್ದೇನೆ. ಮುಂದಿನ ದಿನಗಳಲ್ಲಿ ನಿಮ್ಮ ನೋವು-ನಲಿವುಗಳಿಗೆ ಸ್ಪಂದಿಸಿ ಕೆಲಸ ಮಾಡುತ್ತೇನೆ. ಮೈಸೂರು-ಕೊಡಗು ಜಿಲ್ಲೆಗಳ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಶಾಸಕ ಜಿ.ಟಿ.ದೇವೇಗೌಡ ಮಾತನಾಡಿ, ಬಿಜೆಪಿ-ಜಾ.ದಳದ ಮೈತ್ರಿಕೂಟದ ಅಭ್ಯರ್ಥಿ ಯದುವೀರ್ಗೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಒಂದು ಲಕ್ಷ ಲೀಡ್ ಬರುವಂತೆ ಮತ ಚಲಾಯಿಸಬೇಕು ಎಂದು ಮನವಿ ಮಾಡಿದರು.
ಕವೀಶ್ ಗೌಡ, ಅರುಣ್ಕುಮಾರ್ ಗೌಡ, ಹೇಮಂತಕುಮಾರ್ ಗೌಡ ಸಾಥ್ ಮತ್ತಿತರರು ಪಾಲ್ಗೊಂಡಿದ್ದರು.
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್ಎಸ್ಎಲ್ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…