ಸಕಲೇಶಪುರ : ಮೈಸೂರು ಅರಮನೆಯ ಪಟ್ಟದ ಆನೆ ಅರ್ಜುನನ ಸಮಾದಿಗೆ ಇಂದು ಮೈಸೂರು ಅರಮನೆಯ ರಾಜರಾದ ಯದುವೀರ್ ಒಡೆಯರ್ ಹಾಗೂ ಮಹಾರಾಣಿ ತ್ರಿಶಿಕಾ ಕುಮಾರಿ ಒಡೆಯರ್ ಅವರು ಪೂಜೆ ಸಲ್ಲಿಸಿ ಶ್ರದ್ದಾಂಜಲಿ ಸಲ್ಲಿಸಿದರು.
ಮಂಗಳವಾರ ತಾಲೂಕಿನ ಯಸಳೂರು ಹೋಬಳಿಯ ದಬ್ಬಳ್ಳಿಕಟ್ಟೆಯ ನೀರ್ಕೊಲ್ಲಿ ಎಂಬಲ್ಲಿ ಕಾಡಾನೆಯೊಂದಿಗೆ ಸೆಣಸಾಡಿ ವೀರ ಮರಣ ಹೊಂದಿದ ಕ್ಯಾಪ್ಟನ್ ಅರ್ಜುನನ ಸಮಾದಿ ಸ್ಥಳಕ್ಕೆ ಇಂದು ಆಗಮಿಸಿ ಅರ್ಜುನನ ಸಮಾದಿಗೆ ಪೂಜೆ ಸಲ್ಲಿಸಿ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಿದರು.
ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಬರೋಬ್ಬರಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆ (63 ವರ್ಷ) ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಕಾಡಾನೆ ಸೆರೆ ಹಿಡಿದು ಸ್ಥಳಾಂತರ ಮಾಡುವ ಕಾರ್ಯಾಚರಣೆ ನಡೆಯುತ್ತಿತ್ತು. ಈ ವೇಳೆ ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡುವ ಕಾರ್ಯಾಚರಣೆ ವೇಳೆ ಅರ್ಜುನನ ಮೇಲೆ ಒಂಟಿಸಲಗ ಅಟ್ಯಾಕ್ ಮಾಡಿದೆ. ಡಿಸೆಂಬರ್ 4ರಂದು ನಡೆದ ಈ ಘಟನೆಯಲ್ಲಿ ಅರ್ಜುನ ಆನೆ ಮೃತಪಟ್ಟಿತ್ತು.
ಮೈಸೂರು : ಮೈಸೂರು ನಗರದಲ್ಲಿ ಬೆಳ್ಳಂಬೆಳಿಗ್ಗೆ ಜೆಸಿಬಿ ಘರ್ಜನೆ ಕೇಳಿ ಬಂದಿದ್ದು, ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದ ಜಾಗವನ್ನು ಸರ್ಕಾರದ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇತ್ತೀಚಿಗೆ ಮಾದಕ ವಸ್ತುಗಳ (ಡ್ರಗ್ಸ್) ತಯಾರಿಕೆ ಮತ್ತು ಮಾರಾಟದ ಜಾಲಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ…
ಬೆಂಗಳೂರು : ನೆಲಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬೆಂಗಳೂರಿನಿಂದ ಯಾದಗಿರಿ ಕಡೆಗೆ ಹೊರಟಿದ್ದ ಖಾಸಗಿ ನಾನ್-ಎಸಿ ಸ್ಲೀಪರ್ ಬಸ್ವೊಂದು…
ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ನಿಗಮ (ಸೆಸ್ಕ್)ನಿಂದ ಅಂಡರ್ ಗ್ರೌಂಡ್ ಕೇಬಲ್…
ಮೈಸೂರಿನ ರಾಜರಾಜೇಶ್ವರಿ ನಗರದ ಬಳಿಯ ನ್ಯಾಯಾಂಗ ಬಡಾವಣೆಯಲ್ಲಿ ಐದಕ್ಕೂ ಹೆಚ್ಚು ಸರ್ಕಾರಿ ವಸತಿನಿಲಯಗಳಿದ್ದು, ಬೆಳಿಗ್ಗೆ ಹಾಗೂ ಸಂಜೆ ಸಾಕಷ್ಟು ನಗರ…
ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಆವರಣದಲ್ಲಿ ಪ್ಲಾಸ್ಟಿಕ್ ಬಾಟಲಿ, ಪ್ಲೇಟ್, ಚೀಲಗಳು ಹಾಗೂ ಮರದ ಎಲೆಗಳು ತುಂಬಿದ್ದು, ಅನೈರ್ಮಲ್ಯದ…