ಸಕಲೇಶಪುರ : ಮೈಸೂರು ಅರಮನೆಯ ಪಟ್ಟದ ಆನೆ ಅರ್ಜುನನ ಸಮಾದಿಗೆ ಇಂದು ಮೈಸೂರು ಅರಮನೆಯ ರಾಜರಾದ ಯದುವೀರ್ ಒಡೆಯರ್ ಹಾಗೂ ಮಹಾರಾಣಿ ತ್ರಿಶಿಕಾ ಕುಮಾರಿ ಒಡೆಯರ್ ಅವರು ಪೂಜೆ ಸಲ್ಲಿಸಿ ಶ್ರದ್ದಾಂಜಲಿ ಸಲ್ಲಿಸಿದರು.
ಮಂಗಳವಾರ ತಾಲೂಕಿನ ಯಸಳೂರು ಹೋಬಳಿಯ ದಬ್ಬಳ್ಳಿಕಟ್ಟೆಯ ನೀರ್ಕೊಲ್ಲಿ ಎಂಬಲ್ಲಿ ಕಾಡಾನೆಯೊಂದಿಗೆ ಸೆಣಸಾಡಿ ವೀರ ಮರಣ ಹೊಂದಿದ ಕ್ಯಾಪ್ಟನ್ ಅರ್ಜುನನ ಸಮಾದಿ ಸ್ಥಳಕ್ಕೆ ಇಂದು ಆಗಮಿಸಿ ಅರ್ಜುನನ ಸಮಾದಿಗೆ ಪೂಜೆ ಸಲ್ಲಿಸಿ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಿದರು.
ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಬರೋಬ್ಬರಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆ (63 ವರ್ಷ) ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಕಾಡಾನೆ ಸೆರೆ ಹಿಡಿದು ಸ್ಥಳಾಂತರ ಮಾಡುವ ಕಾರ್ಯಾಚರಣೆ ನಡೆಯುತ್ತಿತ್ತು. ಈ ವೇಳೆ ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡುವ ಕಾರ್ಯಾಚರಣೆ ವೇಳೆ ಅರ್ಜುನನ ಮೇಲೆ ಒಂಟಿಸಲಗ ಅಟ್ಯಾಕ್ ಮಾಡಿದೆ. ಡಿಸೆಂಬರ್ 4ರಂದು ನಡೆದ ಈ ಘಟನೆಯಲ್ಲಿ ಅರ್ಜುನ ಆನೆ ಮೃತಪಟ್ಟಿತ್ತು.
ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…
ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…
ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…