ಮೈಸೂರು

ಕುವೆಂಪುನಗರದ ಕಚೇರಿಗೆ ಆಗಮಿಸಿ ಮುಖಂಡರು, ಕಾರ್ಯಕರ್ತರ ಜತೆ ಚರ್ಚೆ

ಮೈಸೂರು: ಮೊದಲ ಚುನಾವಣೆಯ ಅನುಭವ ತುಂಬಾ ಚೆನ್ನಾಗಿತ್ತು. ಪ್ರಚಾರದ ಸಂದರ್ಭದಲ್ಲಿ ಸಹಜವಾಗಿ ಒತ್ತಡ ಇದ್ದರೂ ಅದನ್ನು ಮಾನಸಿಕವಾಗಿ ತಗ್ಗಿಸಿಕೊಂಡು ಪ್ರಚಾರ ಮಾಡಿದ್ದೆ. ಪ್ರಚಾರದ ವೇಳೆ ಜನರು ತೋರಿದ ಅಭೂತಪೂರ್ವ ಬೆಂಬಲ ನೋಡಿದರೆ ಗೆಲ್ಲುವ ವಿಶ್ವಾಸವಿದೆ ಎಂದು ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.

ಕುವೆಂಪುನಗರದಲ್ಲಿರುವ ಪಕ್ಷದ ಕಚೇರಿಯಲ್ಲಿ ಶನಿವಾರ ಪ್ರಮುಖರು, ಕಾರ್ಯಕರ್ತರನ್ನು ಭೇಟಿ ಮಾಡಿ ಚರ್ಚಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಮುಗಿದ ಮೇಲೆ ಸ್ವಲ್ಪ ರಿಲ್ಯಾಕ್ಸಾಗಿದ್ದೇನೆ. ಮೊದಲ ಚುನಾವಣೆಯಾಗಿದ್ದರಿಂದ ಹೊಸ ಅನುಭವವಾಗಿದೆ. ಜನರನ್ನು ಹತ್ತಿರದಿಂದ ನೋಡಿ ಗಮನಿಸಿದ್ದೇನೆ. ಅರಿತುಕೊಂಡಿದ್ದೇನೆ. ಅನೇಕ ವಿಚಾರಗಳಲ್ಲಿ ಕಲಿತಿದ್ದೇನೆ ಎಂದರು.

ಚುನಾವಣೆಯಲ್ಲಿ ಹಣ ಹಂಚಿಕೆಯ ವಿಚಾರಗಳು ಅಲ್ಲಲ್ಲಿ ಕೇಳಿ ಬಂದಿದ್ದವು. ಆದರೆ, ಮತದಾರರು ಅದನ್ನು ಮೀರಿ ನಮ್ಮ ಕೈ ಹಿಡಿಯುತ್ತಾರೆ ಎಂಬ ವಿಶ್ವಾಸವಿದೆ. ಚುನಾವಣೆಯಲ್ಲಿ ನಿರೀಕ್ಷಿತ ಮತಗಳನ್ನು ಪಡೆದು ಜಯಗಳಿಸುವ ನಂಬಿಕೆ ಇದೆ ಎಂದು ನುಡಿದರು.

ಎರಡನೇ ಹಂತದ ಚುನಾವಣಾ ಪ್ರಚಾರಕ್ಕೆ ಹೋಗಲು ನಾನು ಸಿದ್ಧನಿದ್ದೇನೆ. ಆದರೆ, ಪಕ್ಷ ಇನ್ನೂ ಅದರ ಬಗ್ಗೆ ಏನೂ ತಿಳಿಸಿಲ್ಲ. ಪಕ್ಷ ಹೇಳಿದರೆ ಖಂಡಿತ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುವೆ ಎಂದರು.

ನಗರ ಪ್ರದೇಶದ ವಾತಾವರಣಕ್ಕಿಂತಲೂ ಗ್ರಾಮಾಂತರ ಪ್ರದೇಶದಲ್ಲಿ ಹಲವಾರು ವಿಚಾರಗಳು ಗಮನಿಸಿದ್ದೇನೆ. ನಾವು ಹೊರ ಬಂದು ನೋಡಿದಾಗ ಅನೇಕ ವಿಚಾರಗಳು ಕಾಣುತ್ತವೆ. ನಾನು ರಾಜಕೀಯಕ್ಕೆ ಹೊಸಬನಾಗಿದ್ದರೂ ಸ್ವಲ್ಪಮಟ್ಟಿಗೆ ಅರಿಯುವ ಕೆಲಸ ಮಾಡಿದ್ದೆ. ಪಕ್ಷದ ನಾಯಕರ ಮಾರ್ಗದರ್ಶನದಿಂದ ಎಲ್ಲಾ ಕಡೆಗಳಲ್ಲಿ ಪ್ರಚಾರ ಮಾಡಲು ಸಾಧ್ಯವಾಯಿತು. ಜನರು ತೋರಿದ ಪ್ರೀತಿಯನ್ನು ಎಂದಿಗೂ ಮರೆಯುವುದಿಲ್ಲ. ಅವರ ನಿರೀಕ್ಷೆಯಂತೆ ಕೆಲಸ ಮಾಡುವೆ ಎಂದು ನುಡಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಅಲರ್ಟ್‌ ಆದ ಲಾಟ್ಕರ್‌ : ಡ್ರಗ್ಸ್‌ ಜಾಲಮುಕ್ತಕ್ಕೆ ಪಣ : ದಿಢೀರ್‌ ದಾಳಿ

ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…

44 mins ago

ಫೆ.8ರಂದು ಸ್ವಚ್ಛತಾ ಓಟ : ʻಓಡೋಣ ಮೈಸೂರಿಗಾಗಿ-ಒಂದಾಗೋಣ ಸ್ವಚ್ಛತೆಗಾಗಿʼ

ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…

2 hours ago

ಗ್ರಾಮ ಪಂಚಾಯ್ತಿ ಅಧಿಕಾರ ಅವಧಿ ಮುಕ್ತಾಯ : ಈಗಿರುವ ಸದಸ್ಯರನ್ನೇ ಮುಂದುವರೆಸುತ್ತಾ ಸರ್ಕಾರ?

ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…

2 hours ago

ಪ್ರತ್ಯೇಕ ಕಳವು ಪ್ರಕರಣ : 11 ಮಂದಿ ಬಂಧನ

19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್‌ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…

3 hours ago

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…

4 hours ago

ಮಂಡ್ಯ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…

4 hours ago