ಮೈಸೂರು

ಕುವೆಂಪುನಗರದ ಕಚೇರಿಗೆ ಆಗಮಿಸಿ ಮುಖಂಡರು, ಕಾರ್ಯಕರ್ತರ ಜತೆ ಚರ್ಚೆ

ಮೈಸೂರು: ಮೊದಲ ಚುನಾವಣೆಯ ಅನುಭವ ತುಂಬಾ ಚೆನ್ನಾಗಿತ್ತು. ಪ್ರಚಾರದ ಸಂದರ್ಭದಲ್ಲಿ ಸಹಜವಾಗಿ ಒತ್ತಡ ಇದ್ದರೂ ಅದನ್ನು ಮಾನಸಿಕವಾಗಿ ತಗ್ಗಿಸಿಕೊಂಡು ಪ್ರಚಾರ ಮಾಡಿದ್ದೆ. ಪ್ರಚಾರದ ವೇಳೆ ಜನರು ತೋರಿದ ಅಭೂತಪೂರ್ವ ಬೆಂಬಲ ನೋಡಿದರೆ ಗೆಲ್ಲುವ ವಿಶ್ವಾಸವಿದೆ ಎಂದು ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.

ಕುವೆಂಪುನಗರದಲ್ಲಿರುವ ಪಕ್ಷದ ಕಚೇರಿಯಲ್ಲಿ ಶನಿವಾರ ಪ್ರಮುಖರು, ಕಾರ್ಯಕರ್ತರನ್ನು ಭೇಟಿ ಮಾಡಿ ಚರ್ಚಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಮುಗಿದ ಮೇಲೆ ಸ್ವಲ್ಪ ರಿಲ್ಯಾಕ್ಸಾಗಿದ್ದೇನೆ. ಮೊದಲ ಚುನಾವಣೆಯಾಗಿದ್ದರಿಂದ ಹೊಸ ಅನುಭವವಾಗಿದೆ. ಜನರನ್ನು ಹತ್ತಿರದಿಂದ ನೋಡಿ ಗಮನಿಸಿದ್ದೇನೆ. ಅರಿತುಕೊಂಡಿದ್ದೇನೆ. ಅನೇಕ ವಿಚಾರಗಳಲ್ಲಿ ಕಲಿತಿದ್ದೇನೆ ಎಂದರು.

ಚುನಾವಣೆಯಲ್ಲಿ ಹಣ ಹಂಚಿಕೆಯ ವಿಚಾರಗಳು ಅಲ್ಲಲ್ಲಿ ಕೇಳಿ ಬಂದಿದ್ದವು. ಆದರೆ, ಮತದಾರರು ಅದನ್ನು ಮೀರಿ ನಮ್ಮ ಕೈ ಹಿಡಿಯುತ್ತಾರೆ ಎಂಬ ವಿಶ್ವಾಸವಿದೆ. ಚುನಾವಣೆಯಲ್ಲಿ ನಿರೀಕ್ಷಿತ ಮತಗಳನ್ನು ಪಡೆದು ಜಯಗಳಿಸುವ ನಂಬಿಕೆ ಇದೆ ಎಂದು ನುಡಿದರು.

ಎರಡನೇ ಹಂತದ ಚುನಾವಣಾ ಪ್ರಚಾರಕ್ಕೆ ಹೋಗಲು ನಾನು ಸಿದ್ಧನಿದ್ದೇನೆ. ಆದರೆ, ಪಕ್ಷ ಇನ್ನೂ ಅದರ ಬಗ್ಗೆ ಏನೂ ತಿಳಿಸಿಲ್ಲ. ಪಕ್ಷ ಹೇಳಿದರೆ ಖಂಡಿತ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುವೆ ಎಂದರು.

ನಗರ ಪ್ರದೇಶದ ವಾತಾವರಣಕ್ಕಿಂತಲೂ ಗ್ರಾಮಾಂತರ ಪ್ರದೇಶದಲ್ಲಿ ಹಲವಾರು ವಿಚಾರಗಳು ಗಮನಿಸಿದ್ದೇನೆ. ನಾವು ಹೊರ ಬಂದು ನೋಡಿದಾಗ ಅನೇಕ ವಿಚಾರಗಳು ಕಾಣುತ್ತವೆ. ನಾನು ರಾಜಕೀಯಕ್ಕೆ ಹೊಸಬನಾಗಿದ್ದರೂ ಸ್ವಲ್ಪಮಟ್ಟಿಗೆ ಅರಿಯುವ ಕೆಲಸ ಮಾಡಿದ್ದೆ. ಪಕ್ಷದ ನಾಯಕರ ಮಾರ್ಗದರ್ಶನದಿಂದ ಎಲ್ಲಾ ಕಡೆಗಳಲ್ಲಿ ಪ್ರಚಾರ ಮಾಡಲು ಸಾಧ್ಯವಾಯಿತು. ಜನರು ತೋರಿದ ಪ್ರೀತಿಯನ್ನು ಎಂದಿಗೂ ಮರೆಯುವುದಿಲ್ಲ. ಅವರ ನಿರೀಕ್ಷೆಯಂತೆ ಕೆಲಸ ಮಾಡುವೆ ಎಂದು ನುಡಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ ಪ್ರಶ್ನಾರ್ಹ

ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…

7 hours ago

ಓದುಗರ ಪತ್ರ: ಎನ್‌ಕೌಂಟರ್ ನಿಗೂಢತೆ?

ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…

7 hours ago

ಓದುಗರ ಪತ್ರ: ಜಂಬೂಸವಾರಿಯ ಹೊಸ ಸಾರಥಿ ಯಾರು?

ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…

7 hours ago

ಧ್ವನಿಹೀನರಿಗೆ ಧ್ವನಿಯಾಗಿದ್ದ ದೇವರಾಜ ಅರಸು

ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…

7 hours ago

ನೀರಿಲ್ಲದಿದ್ದರೂ ಭರ್ತಿಯಾಗುತ್ತಿದೆ ಕಸುವಿನಹಳ್ಳಿ ಕೆರೆ!

ಎಸ್.ಎಸ್.ಭಟ್ ಸುತ್ತಲಿನ ಕ್ರಷರ್‌ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…

7 hours ago