ಮೈಸೂರು: ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಂಸ್ಕೃತಿಕ ನಗರಿ ಮೈಸೂರಿನ ಶಂಕರಮಠದಲ್ಲಿ ವಾಸ್ತವ್ಯ ಹೂಡಿರುವ ಶೃಂಗೇರಿಮಠದ ಶ್ರೀವಿಧುಶೇಖರ ಭಾರತೀ ಸ್ವಾಮೀಜಿ ಅರಮನೆಗೆ ಭೇಟಿ ನೀಡಿದಾಗ ರಾಜಮನೆತನದ ಸಂಪ್ರದಾಯದಂತೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಶ್ರೀಗಳ ಪಾದಪೂಜೆ ನೆರವೇರಿಸಿದರು.
ಅರಮನೆಗೆ ಭೇಟಿ ನೀಡಿದಾಗ ಪೂರ್ಣಕುಂಭ,ಮಂತ್ರಘೋಷದೊಂದಿಗೆ ರಾಜವಂಶಸ್ಥರು ಬರಮಾಡಿಕೊಂಡರು. ನಂತರ,ಅರಮನೆ ಕಲ್ಯಾಣಮಂಟಪದಲ್ಲಿ ರಾಜವಂಶಸ್ಥರಾದ ಪ್ರಮೋದದೇವಿ ಒಡೆಯರ್, ಯದುವೀರ್ ಅವರು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು. ಬಳಿಕ ಶ್ರೀವಿಧುಶೇಖರ ಭಾರತಿ ಸ್ವಾಮೀಜಿಗಳ ಪಾದಪೂಜೆ ನೆರವೇರಿಸಿದರು.
ಫಲತಾಂಬೂಲ ಸ್ವೀಕರಿಸಿದ ಶ್ರೀಗಳು ವಿಶೇಷ ಆಶೀರ್ವಾದ ಮಾಡಿದರು. ರಾಜಮನೆತನದವರು ವಿಜಯಯಾತ್ರೆ ಹೊರಡುವ ಮುನ್ನ ಶ್ರೀಗಳು, ಯತಿವರ್ಯರ ಆಶೀರ್ವಾದ ಪಡೆದುಕೊಂಡು ಹೆಜ್ಜೆ ಇಡುವುದು ಮೊದಲಿನಿಂದಲೂ ಸಂಪ್ರದಾಯವಾಗಿದೆ. ಈ ಬಾರಿ ಯದುವೀರ್ ಚುನಾವಣೆಯಲ್ಲಿ ಸ್ಪರ್ಧೆ ಮಾಡಿರುವ ಸಂದರ್ಭದಲ್ಲೇ ಶೃಂಗೇರಿ ಶ್ರೀಗಳು ಮೈಸೂರಿಗೆ ಆಗಮಿಸಿದಲ್ಲದೆ, ಅರಮನೆಗೆ ಭೇಟಿ ನೀಡಿ ಮರ್ಯಾದೆ ಸ್ವೀಕರಿಸಿದರು.
ಬೇಸಿಗೆ ತಾಪಮಾನದ ಪರಿಣಾಮವಾಗಿ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಹೆಚ್ಚಾಗಬಹುದು ಎಂದು ವರದಿ ನೀಡಿಕೆ... ಚಾಮರಾಜನಗರ: ಬೇಸಿಗೆಯ ತಾಪಮಾನದ ಪರಿಣಾಮವಾಗಿ ಕುಡಿಯುವ…
ಫ್ಲೋರಿಡಾ: 50 ವರ್ಷಗಳ ಬಳಿಕ ಚಂದಿರನ ಅನ್ವೇಷಣೆಗೆ ಹೊರಟಿರುವ ನಾಸಾ ಐತಿಹಾಸಿಕ ಆರ್ಟೆಮಿಸ್-II ಮಿಷನ್ ಉಡಾವಣೆ ಯಶಸ್ವಿಯಾಗಿದೆ. ಅಮೇರಿಕಾದ ಕಾಲಮಾನ…
ಟಿ.ಎ.ನಾರಾಯಣಗೌಡ ಹಿಂದಿ ರಾಷ್ಟ್ರ ಭಾಷೆ/ ರಾಷ್ಟ್ರೀಯ ಭಾಷೆ ಎಂಬ ಹೇಳಿಕೆಗಳು ಪುಂಖಾನುಪುಂಖವಾಗಿ ಕೇಳಿಬರುತ್ತಿವೆ. ಆದರೆ, ಹಿಂದಿ ರಾಷ್ಟ್ರ ಭಾಷೆಯಲ್ಲ, ಇದನ್ನು…
ಈಗಾಗಲೇ ಶಾಲಾ ಕಾಲೇಜುಗಳ ವಾರ್ಷಿಕ ಪರೀಕ್ಷೆ ಮುಗಿದಿದ್ದು, ಕೆಲವೇ ದಿನಗಳಲ್ಲಿ ದ್ವಿತೀಯ ಪಿಯುಸಿ -ಲಿತಾಂಶ ಬರಲಿದ್ದು, ನಂತರ ಎಸ್ಎಸ್ಎಲ್ಸಿ ಪರೀಕ್ಷಾ…
೨೦೨೫-೨೬ರ ಶೈಕ್ಷಣಿಕ ವರ್ಷ ಮುಗಿಯುತ್ತಾ ಬಂದಿದ್ದು, ಇದೇ ಏಪ್ರಿಲ್ ೧೧ರಿಂದ ಮೇ ೨೮ರವರೆಗೆ ಸರ್ಕಾರ ಬೇಸಿಗೆ ರಜೆಯನ್ನು ಮಕ್ಕಳಿಗೆ ನೀಡಿದೆ.…
ದೇಶವೊಂದರ ಮುಖ್ಯಸ್ಥ ಇನ್ನೊಂದು ದೇಶದ ವಿರುದ್ಧ ಯುದ್ಧ ಸಾರಿದ್ದಾರೆ. ಈ ಸಂಘರ್ಷದಲ್ಲಿ ತಮ್ಮ ಜನರೂ ಪ್ರಾಣ ಕಳೆದುಕೊಳ್ಳುತ್ತಾರೆ ಎಂಬುದರ ಅರಿವಿದ್ದರೂ…