ಮೈಸೂರು: ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಂಸ್ಕೃತಿಕ ನಗರಿ ಮೈಸೂರಿನ ಶಂಕರಮಠದಲ್ಲಿ ವಾಸ್ತವ್ಯ ಹೂಡಿರುವ ಶೃಂಗೇರಿಮಠದ ಶ್ರೀವಿಧುಶೇಖರ ಭಾರತೀ ಸ್ವಾಮೀಜಿ ಅರಮನೆಗೆ ಭೇಟಿ ನೀಡಿದಾಗ ರಾಜಮನೆತನದ ಸಂಪ್ರದಾಯದಂತೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಶ್ರೀಗಳ ಪಾದಪೂಜೆ ನೆರವೇರಿಸಿದರು.
ಅರಮನೆಗೆ ಭೇಟಿ ನೀಡಿದಾಗ ಪೂರ್ಣಕುಂಭ,ಮಂತ್ರಘೋಷದೊಂದಿಗೆ ರಾಜವಂಶಸ್ಥರು ಬರಮಾಡಿಕೊಂಡರು. ನಂತರ,ಅರಮನೆ ಕಲ್ಯಾಣಮಂಟಪದಲ್ಲಿ ರಾಜವಂಶಸ್ಥರಾದ ಪ್ರಮೋದದೇವಿ ಒಡೆಯರ್, ಯದುವೀರ್ ಅವರು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು. ಬಳಿಕ ಶ್ರೀವಿಧುಶೇಖರ ಭಾರತಿ ಸ್ವಾಮೀಜಿಗಳ ಪಾದಪೂಜೆ ನೆರವೇರಿಸಿದರು.
ಫಲತಾಂಬೂಲ ಸ್ವೀಕರಿಸಿದ ಶ್ರೀಗಳು ವಿಶೇಷ ಆಶೀರ್ವಾದ ಮಾಡಿದರು. ರಾಜಮನೆತನದವರು ವಿಜಯಯಾತ್ರೆ ಹೊರಡುವ ಮುನ್ನ ಶ್ರೀಗಳು, ಯತಿವರ್ಯರ ಆಶೀರ್ವಾದ ಪಡೆದುಕೊಂಡು ಹೆಜ್ಜೆ ಇಡುವುದು ಮೊದಲಿನಿಂದಲೂ ಸಂಪ್ರದಾಯವಾಗಿದೆ. ಈ ಬಾರಿ ಯದುವೀರ್ ಚುನಾವಣೆಯಲ್ಲಿ ಸ್ಪರ್ಧೆ ಮಾಡಿರುವ ಸಂದರ್ಭದಲ್ಲೇ ಶೃಂಗೇರಿ ಶ್ರೀಗಳು ಮೈಸೂರಿಗೆ ಆಗಮಿಸಿದಲ್ಲದೆ, ಅರಮನೆಗೆ ಭೇಟಿ ನೀಡಿ ಮರ್ಯಾದೆ ಸ್ವೀಕರಿಸಿದರು.
ಬೆಂಗಳೂರು: ಕ್ರಿಕೆಟ್ ಪ್ರೇಮಿಗಳಿಗೆ ಶಾಕ್ ಎಂಬಂತೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಾಳಿನ ಪಂದ್ಯಕ್ಕೆ ಅವಕಾಶ ಇಲ್ಲ ಎಂದು ತಿಳಿದುಬಂದಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ…
ಮೈಸೂರು: ಅಪಘಾತದಲ್ಲಿ ಗಾಯಗೊಂಡು ಬಿದ್ದಿದ್ದ ವ್ಯಕ್ತಿಯಿಂದ 80 ಸಾವಿರ ರೂ ದೋಚಿದ್ದ ಇಬ್ಬರನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ರಮೇಶ್ ಹಾಗೂ…
ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿಯಲ್ಲಿ ನಡೆದಿದೆ.…
ಬೆಂಗಳೂರು: ಸ್ಯಾಂಡಲ್ವುಡ್ನಲ್ಲಿ ಸ್ಟಾರ್ ವಾರ್ ಬಗ್ಗೆ ನಟ ಕಿಚ್ಚ ಸುದೀಪ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಯುದ್ಧಕ್ಕೆ ಸಿದ್ಧ ಮಾತಿಗೆ…
ಮೈಸೂರಿನ ಸುಭಾಷ್ ನಗರದ ೪ನೇ ಮುಖ್ಯರಸ್ತೆಯಲ್ಲಿರುವ ಮರಗಳ ಕೊಂಬೆಗಳು ವಿದ್ಯುತ್ ತಂತಿಗಳಿಗೆ ತಗುಲುತ್ತಿದ್ದು, ಗಾಳಿ ಅಥವಾ ಮಳೆಯ ಸಮಯದಲ್ಲಿ ಶಾರ್ಟ್…
ರಾಜ್ಯದಲ್ಲಿ ೩೧೫ ಕುಸ್ತಿಪಟುಗಳಿಗೆ ಉಚಿತವಾಗಿ ನುರಿತ ಕುಸ್ತಿ ತರಬೇತುದಾರರಿಂದ ವೈಜ್ಞಾನಿಕ ಕ್ರೀಡಾ ತರಬೇತಿ ನೀಡಲಾಗುತ್ತಿದೆ ಹಾಗೂ ರಾಜ್ಯದಲ್ಲಿ ಕ್ರೀಡಾ ಅಭಿವೃದ್ಧಿಗಾಗಿ…