ಮೈಸೂರು: ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಂಸ್ಕೃತಿಕ ನಗರಿ ಮೈಸೂರಿನ ಶಂಕರಮಠದಲ್ಲಿ ವಾಸ್ತವ್ಯ ಹೂಡಿರುವ ಶೃಂಗೇರಿಮಠದ ಶ್ರೀವಿಧುಶೇಖರ ಭಾರತೀ ಸ್ವಾಮೀಜಿ ಅರಮನೆಗೆ ಭೇಟಿ ನೀಡಿದಾಗ ರಾಜಮನೆತನದ ಸಂಪ್ರದಾಯದಂತೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಶ್ರೀಗಳ ಪಾದಪೂಜೆ ನೆರವೇರಿಸಿದರು.
ಅರಮನೆಗೆ ಭೇಟಿ ನೀಡಿದಾಗ ಪೂರ್ಣಕುಂಭ,ಮಂತ್ರಘೋಷದೊಂದಿಗೆ ರಾಜವಂಶಸ್ಥರು ಬರಮಾಡಿಕೊಂಡರು. ನಂತರ,ಅರಮನೆ ಕಲ್ಯಾಣಮಂಟಪದಲ್ಲಿ ರಾಜವಂಶಸ್ಥರಾದ ಪ್ರಮೋದದೇವಿ ಒಡೆಯರ್, ಯದುವೀರ್ ಅವರು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು. ಬಳಿಕ ಶ್ರೀವಿಧುಶೇಖರ ಭಾರತಿ ಸ್ವಾಮೀಜಿಗಳ ಪಾದಪೂಜೆ ನೆರವೇರಿಸಿದರು.
ಫಲತಾಂಬೂಲ ಸ್ವೀಕರಿಸಿದ ಶ್ರೀಗಳು ವಿಶೇಷ ಆಶೀರ್ವಾದ ಮಾಡಿದರು. ರಾಜಮನೆತನದವರು ವಿಜಯಯಾತ್ರೆ ಹೊರಡುವ ಮುನ್ನ ಶ್ರೀಗಳು, ಯತಿವರ್ಯರ ಆಶೀರ್ವಾದ ಪಡೆದುಕೊಂಡು ಹೆಜ್ಜೆ ಇಡುವುದು ಮೊದಲಿನಿಂದಲೂ ಸಂಪ್ರದಾಯವಾಗಿದೆ. ಈ ಬಾರಿ ಯದುವೀರ್ ಚುನಾವಣೆಯಲ್ಲಿ ಸ್ಪರ್ಧೆ ಮಾಡಿರುವ ಸಂದರ್ಭದಲ್ಲೇ ಶೃಂಗೇರಿ ಶ್ರೀಗಳು ಮೈಸೂರಿಗೆ ಆಗಮಿಸಿದಲ್ಲದೆ, ಅರಮನೆಗೆ ಭೇಟಿ ನೀಡಿ ಮರ್ಯಾದೆ ಸ್ವೀಕರಿಸಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…
ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.…
ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…
ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…
ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…