ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸಂಸದ ಶ್ರೀನಿವಾಸ್ ಪ್ರಸಾದ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿದ್ದಾರೆ.
ಮೈಸೂರು ಕ್ಷೇತ್ರದ ಅಭ್ಯರ್ಥಿಯಾಗಿ ನೇಮಕಗೊಂಡ ಬೆನ್ನಲ್ಲೇ ಭರ್ಜರಿ ಪ್ರಚಾರ ಆರಂಭಿಸಿರುವ ರಾಜವಂಶಸ್ಥ ಯದುವೀರ್, ಎಲ್ಲಾ ಹಿರಿಯ ನಾಯಕರನ್ನು ಭೇಟಿಯಾಗಿ ಸಮಾಲೋಚನೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಇಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಅವರನ್ನು ಭೇಟಿಯಾಗಿರುವ ಯದುವೀರ್ ಚುನಾವಣಾ ಸಂಬಂಧ ಮಾತುಕತೆ ನಡೆಸಿದ್ದಾರೆ.
ಇದರ ಮಧ್ಯೆ ರಾಜವಂಶಸ್ಥ ಯದುವೀರ್ ಒಡೆಯರ್ ಅವರು ತಮ್ಮ ಹಿಂದಿನ ಘಟನೆಯೊಂದನ್ನು ಮೆಲುಕು ಹಾಕಿದ್ದಾರೆ. ತಾವು 8ನೇ ವಯಸ್ಸಿನಲ್ಲಿ ರಾಜಮನೆತನಕ್ಕೆ ದತ್ತು ಸ್ವೀಕಾರಗೊಂಡಾಗ ಸಂಸದ ಶ್ರೀನಿವಾಸ್ ಪ್ರಸಾದ್ ಅವರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು ಎಂದು ಹೇಳಿದರು. ಇದಕ್ಕೆ ಪ್ರಸಾದ್ ಹೌದು ಎಂದು ಹಿಂದಿನ ಘಟನೆಯನ್ನು ನೆನೆದಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…