ಮೈಸೂರು : ಲೋಕಸಭಾ ಚುನಾವಣೆ ಬೆನ್ನಲ್ಲಿ ಮೈಸೂರು-ಕೊಡಗು ಲೋಕಸಭಾ ಮೈತ್ರಿ ಅಭ್ಯರ್ಥಿ ಯದುವೀರ್ ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ.
ಈ ವೇಳೆ ಇಂದು ಮುಂಜಾನೆಯಿಂದಲೆ ನಾಡು ಕಟ್ಟಿ-ಬೆಳೆಸಿದ ಹಾಗು ಜ್ಞಾನ ಮಾರ್ಗ ತೋರಿದ, ಹಿರಿಯ ಹಮನೀಯರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು.
ನಗರದ ಅಗ್ರಹಾರದ ಬಳಿ ಇರುವ ಬಸವಣ್ಣ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ರಾಷ್ಟ್ರಪಿತ ಮಹಾತ್ಮ ಗಾಂಧಿ, ಡಾ.ಬಿ.ಆರ್.ಅಂಬೇಡ್ಕರ್, ಮೈಸೂರು ರಾಜವಂಶದ ಹಿರಿಯರಾದ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್, ಗನ್ಹೌಸ್ನಲ್ಲಿರುವ ರಾಷ್ಟ್ರಕವಿ ಕುವೆಂಪು, ಮೈಸೂರಿನ ಮೆಟ್ರೋ ಪಲ್ ವೃತ್ತದಲ್ಲಿರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ವರನಟ ಡಾ.ರಾಜ್ಕುಮಾರ್ ಸೇರಿದಂತೆ ನಗರದಾದ್ಯಂತ ಇರುವ ಹಿರಿಯರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಮರ್ಪಿಸಿದರು.
ಇಂದು ಅರಮನೆ ಮುಂಭಾಗ ಕೋಟೆ ಆಂಜನೇಯಸ್ವಾಮಿ ದೇವಾಲಯದ ಬಳಿ ಬೃಹತ್ ಸಮಾವೇಶ ನಡೆಯಲಿದ್ದು ಬಳಿಕ ಬೆಂಬಲಿಗರು ಹಾಗೂ ಮೈತ್ರಿ ಪಕ್ಷಗಳ ಕಾರ್ಯಕರ್ತರನ್ನೊಳಗೊಂದಡು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಯದುವೀರ್ ನಾಮಪತ್ರ ಸಲ್ಲಿಸಲಿದ್ದಾರೆ.
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕು ವ್ಯಾಪ್ತಿಯ ಮಲೆ ಮಹದೇಶ್ವರ ವನ್ಯಜೀವಿ…
ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…
ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…