ಮೈಸೂರು

ಅನ್ನ, ಅಕ್ಷರ ಕೊಟ್ಟ ಯದುವಂಶದ ಕುಡಿ ಅವಿರೋಧ ಆಯ್ಕೆಯಾಗಲಿ: ವಿಶ್ವನಾಥ್

ಮೈಸೂರು: ಬಿಜೆಪಿಯಿಂದ ಅಂತರ ಕಾಯ್ದುಕೊಂಡು ಕಾಂಗ್ರೆಸ್‌ ಜೊತೆ ಗುರುತಿಸಿಕೊಂಡಿರುವ ವಿಧಾನ ಪರಿಷತ್‌ ಸದಸ್ಯ ಎಚ್.‌ ವಿಶ್ವನಾಥ್ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಹಾಗೂ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಬುಧವಾರ ಭೇಟಿಯಾಗಿ ಚರ್ಚಿಸಿ, ಲೋಕಸಭಾ ಚುನಾವಣೆಯಲ್ಲಿ ಬೆಂಬಲಿಸುವಂತೆ ಕೋರಿದರು.

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ವಿಶ್ವನಾಥ್, ರಾಜಪ್ರಭುತ್ವದ‌ ಕುಡಿ ಪ್ರಜಾಪ್ರಭುತ್ವದ ಪ್ರತಿನಿಧಿಯಾಗಲು ಸ್ಪರ್ಧಿಸಿದ್ದಾರೆ. ಯದುವೀರ್‌ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಬೇಕಿದೆ. ಕಾಂಗ್ರೆಸ್‌ಗೆ ಇನ್ನೂ ಕಾಲ ಮಿಂಚಿಲ್ಲ. ಅನ್ನ, ಅಕ್ಷರ, ಆರೋಗ್ಯ ಕೊಟ್ಟ ಯದುವಂಶಕ್ಕೆ ಗೌರವ ಕೊಟ್ಟು ಯದುವೀರ್‌ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಬೇಕು ಎಂದು ಹೇಳಿದರು.

ಮೈಸೂರು ಅರಸರು ಜಾತಿ ಮುಂದಿಟ್ಟುಕೊಂಡು ಅಭಿವೃದ್ಧಿ ಮಾಡಿಲ್ಲ. ಯದುವಂಶದವರು ಜಾತಿ ಮೀರಿದವರು ಎಂದರು.

ನಾನು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್‌ ಟಿಕೆಟ್‌ ಕೇಳಿದ್ದುದು ಸತ್ಯ. ವಿಷಯಾಧಾರಿತವಾಗಿ ಬಿಜೆಪಿ ಟೀಕಿಸಿದ್ದೂ ಸತ್ಯ. ಆದರೆ, ಯದುವೀರ್‌ ಸ್ಪರ್ಧಿಸಿದ್ದರಿಂದ ಅವರನ್ನು ಬೆಂಬಲಿಸಿವಂತೆ ನಿರ್ಧಾರ ಕೈಗೊಂಡಿದ್ದೇನೆ. ಅವರು ಯಾವುದೇ ಪಕ್ಷದಿಂದ ಕಣಕ್ಕಿಳಿದಿದ್ದರೂ ಅವರ ವಿರುದ್ಧ ಸ್ಪರ್ಧಿಸದಿರುವ ತೀರ್ಮಾನ ಮಾಡುತ್ತಿದ್ದೆ ಎಂದರು.

andolana

Recent Posts

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ

ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…

7 hours ago

ಭಾರತ-ಯುರೋಪ್‌ ಒಕ್ಕೂಟ ವ್ಯಾಪಾರ ಒಪ್ಪಂದಕ್ಕೆ ಸಹಿ

ನವದೆಹಲಿ: ಮದರ್‌ ಆಫ್‌ ಆಲ್‌ ಡೀಲ್ಸ್‌ ಎಂದೇ ಕರೆಯಲ್ಪಡುವ ಭಾರತ-ಯುರೋಪ್‌ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…

12 hours ago

ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನಂತೆ ಕ್ರಮ: ಸಚಿವ ಭೈರತಿ ಸುರೇಶ್‌

ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…

12 hours ago

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸಾವು

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…

12 hours ago

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

12 hours ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

13 hours ago