ಮೈಸೂರು: ಬಿಜೆಪಿಯಿಂದ ಅಂತರ ಕಾಯ್ದುಕೊಂಡು ಕಾಂಗ್ರೆಸ್ ಜೊತೆ ಗುರುತಿಸಿಕೊಂಡಿರುವ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಹಾಗೂ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬುಧವಾರ ಭೇಟಿಯಾಗಿ ಚರ್ಚಿಸಿ, ಲೋಕಸಭಾ ಚುನಾವಣೆಯಲ್ಲಿ ಬೆಂಬಲಿಸುವಂತೆ ಕೋರಿದರು.
ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ವಿಶ್ವನಾಥ್, ರಾಜಪ್ರಭುತ್ವದ ಕುಡಿ ಪ್ರಜಾಪ್ರಭುತ್ವದ ಪ್ರತಿನಿಧಿಯಾಗಲು ಸ್ಪರ್ಧಿಸಿದ್ದಾರೆ. ಯದುವೀರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಬೇಕಿದೆ. ಕಾಂಗ್ರೆಸ್ಗೆ ಇನ್ನೂ ಕಾಲ ಮಿಂಚಿಲ್ಲ. ಅನ್ನ, ಅಕ್ಷರ, ಆರೋಗ್ಯ ಕೊಟ್ಟ ಯದುವಂಶಕ್ಕೆ ಗೌರವ ಕೊಟ್ಟು ಯದುವೀರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಬೇಕು ಎಂದು ಹೇಳಿದರು.
ಮೈಸೂರು ಅರಸರು ಜಾತಿ ಮುಂದಿಟ್ಟುಕೊಂಡು ಅಭಿವೃದ್ಧಿ ಮಾಡಿಲ್ಲ. ಯದುವಂಶದವರು ಜಾತಿ ಮೀರಿದವರು ಎಂದರು.
ನಾನು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಕೇಳಿದ್ದುದು ಸತ್ಯ. ವಿಷಯಾಧಾರಿತವಾಗಿ ಬಿಜೆಪಿ ಟೀಕಿಸಿದ್ದೂ ಸತ್ಯ. ಆದರೆ, ಯದುವೀರ್ ಸ್ಪರ್ಧಿಸಿದ್ದರಿಂದ ಅವರನ್ನು ಬೆಂಬಲಿಸಿವಂತೆ ನಿರ್ಧಾರ ಕೈಗೊಂಡಿದ್ದೇನೆ. ಅವರು ಯಾವುದೇ ಪಕ್ಷದಿಂದ ಕಣಕ್ಕಿಳಿದಿದ್ದರೂ ಅವರ ವಿರುದ್ಧ ಸ್ಪರ್ಧಿಸದಿರುವ ತೀರ್ಮಾನ ಮಾಡುತ್ತಿದ್ದೆ ಎಂದರು.
ಕಾರಾಗೃಹದ ಅಧೀಕ್ಷಕಿ ಎಂ.ಶಾಂತಮ್ಮ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಂಡ್ಯ: ವಿಚಾರಣಾಧೀನ ಕೈದಿ ಶ್ರೀರಂಗಪಟ್ಟಣ ಎಡಿಎಲ್ಆರ್ ಮೊಹಮದ್ ಹುಸೇನ್ಗೆ ಅನಧಿಕೃತ…
ಬೆಂಗಳೂರು : 26,000 ಕೋಟಿ ಸಾಲ ಪಡೆದು ಸಂಚಾರ ದಟ್ಟಣೆ ಕಡಿಮೆ ಮಾಡಲು ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ನಿರ್ಮಾಣವಾಗುತ್ತಿದೆ ಎಂದು…
ಬೆಂಗಳೂರು : ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಸಮೀಕ್ಷೆಯ ಅವಧಿಯನ್ನು ರಾಜ್ಯ ಸರ್ಕಾರ ಸೆಪ್ಟೆಂಬರ್ 30ರವರೆಗೆ ವಿಸ್ತರಿಸಿದೆ. 2023ರ…
ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಸಂಭ್ರಮಕ್ಕೂ ಮುನ್ನ ಸ್ಥಳೀಯ ಕಾಲೇಜು ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿಕೊಡಲು ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ…
ನವದೆಹಲಿ: ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೆಪ್ಟೆಂಬರ್ 15ಕ್ಕೆ ಮುಂದೂಡಿದೆ. ಬಾಕಿ ಇರುವ 17 ಟಿಎಂಸಿ ನೀರನ್ನು…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹ ಹಾಗೂ ಭೂಕುಸಿತದಿಂದಾಗಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಸಾವಿನ ಸಂಖ್ಯೆ 903ಕ್ಕೆ ಏರಿಕೆಯಾಗಿದೆ. ಪ್ರವಾಹದ ರಭಸಕ್ಕೆ…