ದಸರಾ ಸಡಗರ ಹೆಚ್ಚಿಸಿದ ಸಿಹಿ ಸುದ್ದಿ
ಮೈಸೂರು: ಮೈಸೂರಿನಲ್ಲಿ ನಾಡಹಬ್ಬದ ಸಂಭ್ರಮ ಜೋರಾಗಿದೆ. ಆಯುಧ ಪೂಜೆಯ ಆಚರಣೆಗಳು ನಡೆಯುತ್ತಿರುವಾಗಲೇ ಒಡೆಯರ್ ರಾಜವಂಶಕ್ಕೆ ಸಿಹಿ ಸುದ್ದಿಯೊಂದು ದೊರಕಿದೆ. ಯದುವೀರ್ ಮತ್ತು ತ್ರಿಷಿಕಾ ಕುಮಾರಿ ದಂಪತಿ ತಮ್ಮ ಎರಡನೆ ಗಂಡು ಮಗುವನ್ನು ಸ್ವಾಗತಿಸಿದ್ದಾರೆ.
ಆಯುಧ ಪೂಜೆ ದಿನವೇ ಗಂಡು ಮಗು ಜನಿಸಿದ್ದು ರಾಜವಂಶಸ್ತರಲ್ಲಿ ಸಂತೋಷ ಮನೆ ಮಾಡಿದೆ. ಯದುವೀರ್ ಖಾಸಗಿ ದರ್ಬಾರ್ ನಡೆಸಲು ಕಂಕಣಧಾರಿಯಾಗಿ ಮಹಾನವಮಿ ಪೂಜೆಯಲ್ಲಿ ಪಾಲ್ಗೊಂಡಿದ್ದಾಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ತ್ರಿಷಿಕಾ ಅವರಿಗೆ ಗಂಡು ಮಗು ಹುಟ್ಟಿದೆ ಎಂದು ಅರಮನೆ ಮೂಲಗಳು ತಿಳಿಸಿವೆ. ಇದರಿಂದ ದಸರಾಕ್ಕೆ ಸಂಬಂಧಿಸಿದ ಕಾರ್ಯಗಳಲ್ಲಿ ಬದಲಾವಣೆಯಾಗುವ ಸಾಧ್ಯತೆಯೂ ಇದೆ ಎನ್ನಲಾಗಿದೆ.
2016ರಲ್ಲಿ ಮದುವೆಯಾಗಿದ್ದ ದಂಪತಿಗೆ 2017ರ ಡಿಸೆಂಬರ್ನಲ್ಲಿ ಆದ್ಯವೀರ್ ನರಸಿಂಹರಾಜ ಒಡೆಯರ್ ಜನಿಸಿದ್ದನು.
ಚೆಟ್ಟಳ್ಳಿ: ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ…
ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ 9 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಬಿಹಾರದಿಂದ…
ಬೆಂಗಳೂರು: ಅಮೇರಿಕಾ, ಇಸ್ರೇಲ್-ಇರಾನ್ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬರಪೀಡಿತ ಪ್ರದೇಶಗಳಲ್ಲಿ ಒಂದಾದ ಬೂದಬಾಳು ಕೆರೆಗೆ ಕಾವೇರಿ ನದಿ ಮೂಲದಿಂದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಷೇರುದಾರರು ನಿಮ್ಮ ಮೇಲೆ ವಿಶ್ವಾಸವಿಟ್ಟು ಕೃಷಿ ಪತ್ತಿನ ಸಹಕಾರ ಸಂಘದ…
ಟೆಹರಾನ್: ಅಮೇರಿಕಾ ಹಾಗೂ ಇಸ್ರೇಲ್ ದೇಶಗಳು ಇರಾನ್ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ…