ದಸರಾ ಸಡಗರ ಹೆಚ್ಚಿಸಿದ ಸಿಹಿ ಸುದ್ದಿ
ಮೈಸೂರು: ಮೈಸೂರಿನಲ್ಲಿ ನಾಡಹಬ್ಬದ ಸಂಭ್ರಮ ಜೋರಾಗಿದೆ. ಆಯುಧ ಪೂಜೆಯ ಆಚರಣೆಗಳು ನಡೆಯುತ್ತಿರುವಾಗಲೇ ಒಡೆಯರ್ ರಾಜವಂಶಕ್ಕೆ ಸಿಹಿ ಸುದ್ದಿಯೊಂದು ದೊರಕಿದೆ. ಯದುವೀರ್ ಮತ್ತು ತ್ರಿಷಿಕಾ ಕುಮಾರಿ ದಂಪತಿ ತಮ್ಮ ಎರಡನೆ ಗಂಡು ಮಗುವನ್ನು ಸ್ವಾಗತಿಸಿದ್ದಾರೆ.
ಆಯುಧ ಪೂಜೆ ದಿನವೇ ಗಂಡು ಮಗು ಜನಿಸಿದ್ದು ರಾಜವಂಶಸ್ತರಲ್ಲಿ ಸಂತೋಷ ಮನೆ ಮಾಡಿದೆ. ಯದುವೀರ್ ಖಾಸಗಿ ದರ್ಬಾರ್ ನಡೆಸಲು ಕಂಕಣಧಾರಿಯಾಗಿ ಮಹಾನವಮಿ ಪೂಜೆಯಲ್ಲಿ ಪಾಲ್ಗೊಂಡಿದ್ದಾಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ತ್ರಿಷಿಕಾ ಅವರಿಗೆ ಗಂಡು ಮಗು ಹುಟ್ಟಿದೆ ಎಂದು ಅರಮನೆ ಮೂಲಗಳು ತಿಳಿಸಿವೆ. ಇದರಿಂದ ದಸರಾಕ್ಕೆ ಸಂಬಂಧಿಸಿದ ಕಾರ್ಯಗಳಲ್ಲಿ ಬದಲಾವಣೆಯಾಗುವ ಸಾಧ್ಯತೆಯೂ ಇದೆ ಎನ್ನಲಾಗಿದೆ.
2016ರಲ್ಲಿ ಮದುವೆಯಾಗಿದ್ದ ದಂಪತಿಗೆ 2017ರ ಡಿಸೆಂಬರ್ನಲ್ಲಿ ಆದ್ಯವೀರ್ ನರಸಿಂಹರಾಜ ಒಡೆಯರ್ ಜನಿಸಿದ್ದನು.
ಮೈಸೂರು: ದಸರಾ ಹಬ್ಬ ಮುಗಿದಿದೆ... ಚಿನ್ನದ ಅಂಬಾರಿ ಹೊತ್ತ ಜಂಬೂಸವಾರಿಯೂ ಸಂಪನ್ನವಾಗಿದೆ. ಆದರೆ, ನಗರದಲ್ಲಿ ಈಗಲೂ ‘ಅಂಬಾರಿ’ಯೊಂದರಲ್ಲಿ ಸಂಚರಿಸಲು ಪ್ರವಾಸಿಗರು…
ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ…
ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ…
ಬೀಗ ಹಾಕಿದ್ದ ಮನೆಗಳೇ ಕಳ್ಳರ ಟಾರ್ಗೆಟ್, ಲಾಕರ್ಗಳನ್ನು ಒಡೆದು ನಗ,ನಾಣ್ಯ ದೋಚಿದ ದುಷ್ಕರ್ಮಿಗಳು ಮೇಲುಕೋಟೆ: ಇಲ್ಲಿನ ಒಕ್ಕಲಿಗರ ಬೀದಿಯ ಸುತ್ತಮುತ್ತಲ…
ದಾ. ರಾ. ಮಹೇಶ್ ವೀರನಹೊಸಹಳ್ಳಿ: ಮೂರು ದಿನಗಳಿಂದ ತೋಟಗಳಲ್ಲಿ ಬೀಡುಬಿಟ್ಟಿರುವ ಆನೆಗಳ ಹಿಂಡನ್ನು ಓಡಿಸಲು ಹೋದ ಜನರ ಗುಂಪನ್ನೇ ಆನೆಗಳು…
ದಾವಣಗೆರೆ: ಇಲ್ಲಿನ ಗಾಂಧಿ ನಗರ ಪೊಲೀಸ್ ಠಾಣೆಯಲ್ಲಿ ವಿಜಯಪುರ ಶಾಸಕ ಪಾಟೀಲ ಯತ್ನಳ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ರಾಜ್ಯ ಕಾಂಗ್ರೆಸ್…