ದಸರಾ ಸಡಗರ ಹೆಚ್ಚಿಸಿದ ಸಿಹಿ ಸುದ್ದಿ
ಮೈಸೂರು: ಮೈಸೂರಿನಲ್ಲಿ ನಾಡಹಬ್ಬದ ಸಂಭ್ರಮ ಜೋರಾಗಿದೆ. ಆಯುಧ ಪೂಜೆಯ ಆಚರಣೆಗಳು ನಡೆಯುತ್ತಿರುವಾಗಲೇ ಒಡೆಯರ್ ರಾಜವಂಶಕ್ಕೆ ಸಿಹಿ ಸುದ್ದಿಯೊಂದು ದೊರಕಿದೆ. ಯದುವೀರ್ ಮತ್ತು ತ್ರಿಷಿಕಾ ಕುಮಾರಿ ದಂಪತಿ ತಮ್ಮ ಎರಡನೆ ಗಂಡು ಮಗುವನ್ನು ಸ್ವಾಗತಿಸಿದ್ದಾರೆ.
ಆಯುಧ ಪೂಜೆ ದಿನವೇ ಗಂಡು ಮಗು ಜನಿಸಿದ್ದು ರಾಜವಂಶಸ್ತರಲ್ಲಿ ಸಂತೋಷ ಮನೆ ಮಾಡಿದೆ. ಯದುವೀರ್ ಖಾಸಗಿ ದರ್ಬಾರ್ ನಡೆಸಲು ಕಂಕಣಧಾರಿಯಾಗಿ ಮಹಾನವಮಿ ಪೂಜೆಯಲ್ಲಿ ಪಾಲ್ಗೊಂಡಿದ್ದಾಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ತ್ರಿಷಿಕಾ ಅವರಿಗೆ ಗಂಡು ಮಗು ಹುಟ್ಟಿದೆ ಎಂದು ಅರಮನೆ ಮೂಲಗಳು ತಿಳಿಸಿವೆ. ಇದರಿಂದ ದಸರಾಕ್ಕೆ ಸಂಬಂಧಿಸಿದ ಕಾರ್ಯಗಳಲ್ಲಿ ಬದಲಾವಣೆಯಾಗುವ ಸಾಧ್ಯತೆಯೂ ಇದೆ ಎನ್ನಲಾಗಿದೆ.
2016ರಲ್ಲಿ ಮದುವೆಯಾಗಿದ್ದ ದಂಪತಿಗೆ 2017ರ ಡಿಸೆಂಬರ್ನಲ್ಲಿ ಆದ್ಯವೀರ್ ನರಸಿಂಹರಾಜ ಒಡೆಯರ್ ಜನಿಸಿದ್ದನು.
ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…
ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…
ಎಸ್.ಎಸ್.ಭಟ್ ಸುತ್ತಲಿನ ಕ್ರಷರ್ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…