ಮೈಸೂರು

ಮೈಸೂರು ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಯದುವೀರ್‌ ಪರಿಶೀಲನೆ

ಮೈಸೂರು : ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ ಸಂಸದ ಯದವೀರ್‌ ಅವರು ಸೌಲಭ್ಯಗಳ ಸಂಪೂರ್ಣ ಸಮೀಕ್ಷೆ ನಡೆಸಿದರು. 

ನಗರದ ಹೊರವಲಯದಲ್ಲಿರುವ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ ಅವರು, ಸೌಲಭ್ಯಗಳ ಸಂಪೂರ್ಣ ಸಮೀಕ್ಷೆಯನ್ನು ನಡೆಸಿದರು.

ಎರಡು ಹಂತಗಳಲ್ಲಿ ಆಗಲಿರುವ ವಿಮಾನ ನಿಲ್ದಾಣದ ವಿಸ್ತರಣೆಯ ಕುರಿತು ವಿಮಾನ ನಿಲ್ದಾಣದ ನಿರ್ದೇಶಕರಾದ ಅನೂಪ್ ಮತ್ತು ಇತರ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಬಳಿಕ ಮಾತನಾಡಿದ ಸಂಸದ ಯದುವೀರದದ ಅವರು, ಮೈಸೂರು ವಿಮಾನ ನಿಲ್ದಾಣವನ್ನು ಸಂಪೂರ್ಣವಾಗಿ ಕಾರ್ಯಗತಗೊಳಿಸುವ ನಮ್ಮ ಪ್ರಯತ್ನಗಳಿಗೆ ನಾಗರಿಕ ವಿಮಾನಯಾನ ಸಚಿವಾಲಯವು ಸಂಪೂರ್ಣ ಬೆಂಬಲವನ್ನು ನೀಡುತ್ತದೆ ಮತ್ತು ನಮ್ಮ ನಗರದ ವಿಮಾನ ನಿಲ್ದಾಣವು ಅತ್ಯುನ್ನತ ಗುಣಮಟ್ಟವನ್ನು ಪೂರೈಸುತ್ತದೆ. ಮೈಸೂರು-ಕೊಡಗು ಪ್ರದೇಶವನ್ನು ತಲುಪಲು ಮೈಸೂರು ವಿಮಾನ ನಿಲ್ದಾಣವನ್ನು ಕೇಂದ್ರವಾಗಿಸುವುದು ನಮ್ಮ ಗುರಿಯಾಗಿರುತ್ತದೆ ಎಂದು ತಿಳಿಸಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ:  ಮರ್ಯಾದಾ ಹತ್ಯೆಯಲ್ಲಿ ಜಾತಿ ಜೀವಂತಿಕೆ

ಜಾತಿ ವ್ಯವಸ್ಥೆಯು ಅಸಮಾನತೆಯನ್ನು ಸೃಷ್ಟಿ ಮಾಡಿದೆ. ಈ ಜಾತಿ ವ್ಯವಸ್ಥೆ ಈಗಲೂ ಜೀವಂತ ವಾಗಿದೆ ಎನ್ನುವುದಕ್ಕೆ ಬೇರೆ ಜಾತಿಯ ಹುಡುಗನನ್ನು…

10 mins ago

ಓದುಗರ ಪತ್ರ:  ಚಲನಚಿತ್ರ ರಂಗದಲ್ಲಿ ಏನಿದು ಗದ್ದಲ?

೬೦ರ ದಶಕದ ಸಿನಿಮಾರಂಗ ಯಾವ ಗಲಾಟೆ ಇಲ್ಲದೆ ಸಾಗಿತ್ತು. ರಾಜಕುಮಾರ್ ಅವರ ಸಮಕಾಲಿನ ನಟರಾದ ಕಲ್ಯಾಣ್ ಕುಮಾರ್, ಶ್ರೀನಾಥ್, ನರಸಿಂಹರಾಜು,…

11 mins ago

ಓದುಗರ ಪತ್ರ: ಚಾಮುಂಡಿಬೆಟ್ಟ ಯಥಾಸ್ಥಿತಿಯಲ್ಲೇ ಇರಲಿ

ನಾಡದೇವತೆಯಾದ ಶ್ರೀ ಚಾಮುಂಡೇಶ್ವರಿ ನೆಲೆಸಿರುವ ಬೆಟ್ಟವನ್ನು ಯಥಾಸ್ಥಿತಿಯಲ್ಲಿ ಇರುವಂತೆ ಉಳಿಸಿಕೊಳ್ಳುವುದು ಮೈಸೂರಿಗರ ಆದ್ಯ ಕರ್ತವ್ಯವಾಗಿದೆ. ಸಂರಕ್ಷಿತ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ…

14 mins ago

ಓದುಗರ ಪತ್ರ: ಪುಸ್ತಕ ಉಡುಗೊರೆ ಸಂಸ್ಕೃತಿ ಬೆಳೆಸಿ

ಚಿತ್ರದುರ್ಗದ ಪೇಟೆ ಬೀದಿಯ ಉಡುಗೊರೆ (ಗಿಫ್ಟ್) ಮಾರಾಟ ಮಳಿಗೆ ಮಕ್ಕಳು ಮತ್ತು ಪೋಷಕರಿಂದ ತುಂಬಿ ಹೋಗಿತ್ತು. ಅಲ್ಲಿದ್ದ ಹುಡುಗರನ್ನು ಏಕೆ…

28 mins ago

ಪ್ರೀತಿ, ಸೌಹಾರ್ದತೆಯ ಸಂದೇಶ ಸಾರುವ ಕ್ರಿಸ್ತ ಜಯಂತಿ

- ಡಾ.ಐ.ಸೇಸುನಾಥನ್ ‘ಒಬ್ಬ ನಿನ್ನ ಬಲಗೆನ್ನೆಗೆ ಹೊಡೆದರೆ ಅವನಿಗೆ ನಿನ್ನ ಇನ್ನೊಂದು ಕೆನ್ನೆಗೂ ಹೊಡೆಯಲು ಅನುವು ಮಾಡಿಕೊಡು; ನಿನ್ನ ಮೇಲಂಗಿಯನ್ನು…

1 hour ago

2025 ಸವಿನೆನಪು: ಸ್ಯಾಂಡಲ್‌ವುಡ್ ಏಳು-ಬೀಳು

‘ಸ್ಯಾಂಡಲ್ ವುಡ್’ ಎಂದೇ ಹೆಸರಾಗಿರುವ ಕನ್ನಡ ಚಿತ್ರರಂಗ ಇಂದು ಭಾರತದ ಒಂದು ಪ್ರಮುಖ ಚಿತ್ರೋದ್ಯಮವಾಗಿ ಬೆಳೆದಿದೆ. ಈ ಮೊದಲು ಪ್ರತಿ…

4 hours ago