ಮೈಸೂರು

Loksahba Election Results 2024: ಮೈಸೂರು-ಕೊಡಗು ಕ್ಷೇತ್ರದಲ್ಲಿ ಯದುವೀರ್‌-ಲಕ್ಷ್ಮಣ್‌ ವಿಧಾನಸಭಾ ಕ್ಷೇತ್ರವಾರು ಪಡೆದ ಮತ ವಿವರ

ಮೈಸೂರು: ಜೂನ್‌.4 ರಂದು ಲೋಕಸಭಾ ಚುನಾವಣಾ ಮತದಾನ ಪ್ರಕ್ರಿಯೆ ಅಂತ್ಯವಾಗಿದೆ. ಆಡಳೀತಾರೂಢ ಬಿಜೆಪಿ ಪಕ್ಷ ಈ ಬಾರಿಯೂ ನಿರೀಕ್ಷಿತ ಸ್ಥಾನಗಳನ್ನು ಗೆಲ್ಲದೇ ಇದ್ದರೂ ಸಹಾ ಅಧಿಕಾರ ರಚಿಸಲು ಅಗತ್ಯವಿರುವ ಸ್ಥಾನಗಳನ್ನು ಗೆದ್ದಿದೆ.

ಇದೇ ಬಿಜೆಪಿ ಪಕ್ಷದ ಮೈಸೂರು-ಕೊಡಗು ಕ್ಷೇತ್ರದ ಅಭ್ಯರ್ಥಿ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಕಾಂಗ್ರೆಸ್‌ ಅಭ್ಯರ್ಥಿ ಎಂ. ಲಕ್ಷ್ಮಣ್‌ ವಿರುದ್ಧ ಲಕ್ಷ ಮತಗಳ ಅಂತರದಿಂದ ಗೆದ್ದು ಬೀಗಿದ್ದಾರೆ.

ತೀವ್ರ ಕುತೂಹಲ ಕೆರಳಿಸಿದ್ದ ಈ ಕ್ಷೇತ್ರದಲ್ಲಿ ರಾಜಮನೆತನದ ದೊರೆಗೆ ಜನರ ಆಶೀರ್ವಾದದಿಂದ ಲೋಕಸಭೆಗೆ ಟಿಕೆಟ್‌ ಸಿಕ್ಕಿದೆ. ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಕೆಲಸ ಮಾಡಿದ್ದ ಲಕ್ಷ್ಮಣ್‌ ಕೈ ಹಿಡಿಯುವಲ್ಲಿ ಈ ಬಾರಿಯೂ ಮತದಾರ ಹಿಂದೇಟಾಕಿದ್ದು, ಅವರಿಗೆ ಇದು ನಾಲ್ಕನೇ ಸೋಲಾಗಿದೆ.

ಇನ್ನು ಈ ಚುನಾವಣೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಿದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಮೈಸೂರು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಅವರು ಪ್ರಮಾಣ ಪತ್ರ ನೀಡಿದರು.

ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಮೈಸೂರು ಜಿ.ಪಂ.ಸಿಇಒ ಹಾಗೂ ಚುನಾವಣಾ ವೀಕ್ಷಕರು ಇದ್ದರು.

ಜತೆಗೆ ಯದುವೀರ್‌ ಹಾಗೂ ಲಕ್ಷ್ಮಣ್‌ ಅವರು ವಿಧಾನಸಭಾ ಕ್ಷೇತ್ರವಾರು ಪಡೆದ ಮತಗಳ ವಿವರ ಇಲ್ಲಿದೆ ನೋಡಿ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕ್ರಮ: ಸಚಿವ ಸುಧಾಕರ್‌

ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್‌…

8 hours ago

ರಾಜ್ಯ ಸಂಚಾರ ಪೊಲೀಸರ ಆರೋಗ್ಯ ರಕ್ಷಣೆಗೆ ಕ್ರಮ: ಮಾಸ್ಕ್‌ ನೀರು, ನೆರಳಿನ ವ್ಯವಸ್ಥೆಗೆ ಸೂಚನೆ

ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…

8 hours ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸಂಸದ ಯದುವೀರ್‌ ಒಡೆಯರ್‌ ಪ್ರತಿಕ್ರಿಯೆ.!

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ…

9 hours ago

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು: 10ಕ್ಕೂ ಹೆಚ್ಚು ಮಂದಿಗೆ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ…

9 hours ago

ಒಳಮೀಸಲಾತಿ ಹಂಚಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…

13 hours ago

ಸೋಮವಾರಪೇಟೆ: ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ

ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…

14 hours ago