ಮೈಸೂರು: ಜೂನ್.4 ರಂದು ಲೋಕಸಭಾ ಚುನಾವಣಾ ಮತದಾನ ಪ್ರಕ್ರಿಯೆ ಅಂತ್ಯವಾಗಿದೆ. ಆಡಳೀತಾರೂಢ ಬಿಜೆಪಿ ಪಕ್ಷ ಈ ಬಾರಿಯೂ ನಿರೀಕ್ಷಿತ ಸ್ಥಾನಗಳನ್ನು ಗೆಲ್ಲದೇ ಇದ್ದರೂ ಸಹಾ ಅಧಿಕಾರ ರಚಿಸಲು ಅಗತ್ಯವಿರುವ ಸ್ಥಾನಗಳನ್ನು ಗೆದ್ದಿದೆ.
ಇದೇ ಬಿಜೆಪಿ ಪಕ್ಷದ ಮೈಸೂರು-ಕೊಡಗು ಕ್ಷೇತ್ರದ ಅಭ್ಯರ್ಥಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ವಿರುದ್ಧ ಲಕ್ಷ ಮತಗಳ ಅಂತರದಿಂದ ಗೆದ್ದು ಬೀಗಿದ್ದಾರೆ.
ತೀವ್ರ ಕುತೂಹಲ ಕೆರಳಿಸಿದ್ದ ಈ ಕ್ಷೇತ್ರದಲ್ಲಿ ರಾಜಮನೆತನದ ದೊರೆಗೆ ಜನರ ಆಶೀರ್ವಾದದಿಂದ ಲೋಕಸಭೆಗೆ ಟಿಕೆಟ್ ಸಿಕ್ಕಿದೆ. ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಕೆಲಸ ಮಾಡಿದ್ದ ಲಕ್ಷ್ಮಣ್ ಕೈ ಹಿಡಿಯುವಲ್ಲಿ ಈ ಬಾರಿಯೂ ಮತದಾರ ಹಿಂದೇಟಾಕಿದ್ದು, ಅವರಿಗೆ ಇದು ನಾಲ್ಕನೇ ಸೋಲಾಗಿದೆ.
ಇನ್ನು ಈ ಚುನಾವಣೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಿದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಮೈಸೂರು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಅವರು ಪ್ರಮಾಣ ಪತ್ರ ನೀಡಿದರು.
ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಮೈಸೂರು ಜಿ.ಪಂ.ಸಿಇಒ ಹಾಗೂ ಚುನಾವಣಾ ವೀಕ್ಷಕರು ಇದ್ದರು.
ಜತೆಗೆ ಯದುವೀರ್ ಹಾಗೂ ಲಕ್ಷ್ಮಣ್ ಅವರು ವಿಧಾನಸಭಾ ಕ್ಷೇತ್ರವಾರು ಪಡೆದ ಮತಗಳ ವಿವರ ಇಲ್ಲಿದೆ ನೋಡಿ.
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್…
ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…
ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…