ಮೈಸೂರು: ಜೂನ್.4 ರಂದು ಲೋಕಸಭಾ ಚುನಾವಣಾ ಮತದಾನ ಪ್ರಕ್ರಿಯೆ ಅಂತ್ಯವಾಗಿದೆ. ಆಡಳೀತಾರೂಢ ಬಿಜೆಪಿ ಪಕ್ಷ ಈ ಬಾರಿಯೂ ನಿರೀಕ್ಷಿತ ಸ್ಥಾನಗಳನ್ನು ಗೆಲ್ಲದೇ ಇದ್ದರೂ ಸಹಾ ಅಧಿಕಾರ ರಚಿಸಲು ಅಗತ್ಯವಿರುವ ಸ್ಥಾನಗಳನ್ನು ಗೆದ್ದಿದೆ.
ಇದೇ ಬಿಜೆಪಿ ಪಕ್ಷದ ಮೈಸೂರು-ಕೊಡಗು ಕ್ಷೇತ್ರದ ಅಭ್ಯರ್ಥಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ವಿರುದ್ಧ ಲಕ್ಷ ಮತಗಳ ಅಂತರದಿಂದ ಗೆದ್ದು ಬೀಗಿದ್ದಾರೆ.
ತೀವ್ರ ಕುತೂಹಲ ಕೆರಳಿಸಿದ್ದ ಈ ಕ್ಷೇತ್ರದಲ್ಲಿ ರಾಜಮನೆತನದ ದೊರೆಗೆ ಜನರ ಆಶೀರ್ವಾದದಿಂದ ಲೋಕಸಭೆಗೆ ಟಿಕೆಟ್ ಸಿಕ್ಕಿದೆ. ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಕೆಲಸ ಮಾಡಿದ್ದ ಲಕ್ಷ್ಮಣ್ ಕೈ ಹಿಡಿಯುವಲ್ಲಿ ಈ ಬಾರಿಯೂ ಮತದಾರ ಹಿಂದೇಟಾಕಿದ್ದು, ಅವರಿಗೆ ಇದು ನಾಲ್ಕನೇ ಸೋಲಾಗಿದೆ.
ಇನ್ನು ಈ ಚುನಾವಣೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಿದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಮೈಸೂರು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಅವರು ಪ್ರಮಾಣ ಪತ್ರ ನೀಡಿದರು.
ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಮೈಸೂರು ಜಿ.ಪಂ.ಸಿಇಒ ಹಾಗೂ ಚುನಾವಣಾ ವೀಕ್ಷಕರು ಇದ್ದರು.
ಜತೆಗೆ ಯದುವೀರ್ ಹಾಗೂ ಲಕ್ಷ್ಮಣ್ ಅವರು ವಿಧಾನಸಭಾ ಕ್ಷೇತ್ರವಾರು ಪಡೆದ ಮತಗಳ ವಿವರ ಇಲ್ಲಿದೆ ನೋಡಿ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…