ಮೈಸೂರು: ಮೈಸೂರಿನ ಪ್ರತಿಷ್ಠಿತ ಜೆಎಸ್ಎಸ್ ರಾಜೇಂದ್ರ ಶ್ರೀಗಳ ಪ್ರತಿಮೆ ಅನಾವರಣ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಪ್ರತಿಮೆ ವಿಚಾರವನ್ನು ಕಾಂಗ್ರೆಸ್ ಮುನ್ನಲೆಗೆ ತಂದಿದ್ದು, ಮೈಸೂರು-ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಶ್ರೀಗಳ ಪ್ರತಿಮೆ ವಿರುದ್ಧ ನೀಡಿರುವ ಪ್ರಕರಣ ವಾಪಾಸ್ ಪಡೆದು ಕ್ಷಮೆ ಕೇಳುವಂತೆ ಕಾಂಗ್ರೆಸ್ ಆಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.
ನಗರದ ಗನ್ಹೌಸ್ ಬಳಿ ರಾತ್ರೋರಾತ್ರಿ ದೇಶಿಕೇಂದ್ರ ಸ್ವಾಮಿಗಳ ಪ್ರತಿಮೆ ಸ್ಥಾಪಿಸಲಾಗಿತ್ತು. ಇದಕ್ಕೆ ರಾಜಮನೆತನದವರು ತೀವ್ರ ಆಕ್ರೋಶ ಹೊರ ಹಾಕಿದ್ದರು. ಇನ್ನು ಈ ವಿವಾದ ಮತ್ತೆ ಮುನ್ನಲೆಗೆ ಬಂದಿದ್ದು, ಕಾಂಗ್ರೆಸ್ ಮಾಜಿ ಮೇಯರ್ ಬಿ.ಎಲ್ ಭೈರಪ್ಪ ಈ ಬಗ್ಗೆ ಮಾತನಾಡಿದ್ದಾರೆ.
ತ್ರಿವಿಧ ದಾಸೋಹಿ ಸುತ್ತೂರು ಸ್ವಾಮಿಗಳ ಪ್ರತಿಮೆ ಅನಾವರಣಕ್ಕೆ ಮೈಸೂರು ರಾಜಮನೆತನ ವಿರೋಧ ವ್ಯಕ್ತಿಪಡಿಸಿದೆ. ಆದರೇ ಚುನಾವಣೆಗೆ ಸುತ್ತೂರು ಶ್ರೀಗಳ ಆಶೀರ್ವಾದ ಬೇಕು ಎಂದು ಯದುವೀರ್ ಅವರು ಮಠಕ್ಕೆ ಹೋಗುವುದಕ್ಕೆ ಯಾವ ನೈತಿಕತೆಯಿದೆ. ಎಲ್ಲಾ ಸಮುದಾಯದ ಏಳಿಗೆಗಾಗಿ ದುಡಿದು, ಬಿಕ್ಷೆ ಬೇಡಿ ಅನ್ನ ದಾಸೋಹ ನಡೆಸುತ್ತಿದ್ದ ಶ್ರೀಗಳ ಪ್ರತಿಮೆ ಅನಾವರಣಕ್ಕೆ ನೀವು ಅವಕಾಶ ಯಾಕೆ ಕೊಡುತ್ತಿಲ್ಲ ಎಂದು ಕಿಡಿಕಾರಿದರು.
ಈ ಸಂಬಂಧ ಸುಪ್ರೀಂ ನಲ್ಲಿ ಪ್ರಕರಣ ನಡೆಯುತ್ತಿದೆ. ಇದನ್ನು ಯದುವೀರ್ ಅವರು ವಾಪಾಸ್ ಪಡೆದು ಪ್ರತಿಮೆ ಅನಾವರಣಕ್ಕೆ ಅವಕಾಶ ಮಾಡಿಕೊಡಬೇಕು. ಇದರಿಂದ ನಿಮ್ಮ ಘನತೆ ಇನ್ನೂ ಹೆಚ್ಚಾಗಲಿದೆ. ರಾಜ್ಯ ಸರ್ಕಾರ, ಮಹಾನಗರ ಪಾಲಿಕೆಯಿಂದಲೂ ಅನುಮತಿ ಪಡೆದಿದ್ದರು ಅದಕ್ಕೆ ನೀವು ತಡೆಯೊಡ್ಡಿರುವುದು ಸರಿಯಲ್ಲ. ಈ ಬಗ್ಗೆ ಭಹಿರಂಗ ಕ್ಷಮೆ ಕೇಳಬೇಕು ಎಂದು ಮಾಜಿ ಮೇಯರ್ ಭೈರಪ್ಪ, ಯದುವೀರ್ ಒಡೆಯರ್ ಅವರನ್ನು ಒತ್ತಾಯಿಸಿದ್ದಾರೆ.
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…
ಚಿಕ್ಕಬಳ್ಳಾಪುರ: ನಗರಸಭೆ ಪೌರಾಯುಕ್ತೆಗೆ ನಿಂದನೆ, ಜೀವ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.…
ಬೆಂಗಳೂರು: ನಾವು ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬಂದರೆ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ವಿಜಯೇಂದ್ರ ಹಾಗೂ ಆರ್.ಅಶೋಕ್ ಹೇಳಲಿ…
ಬೆಂಗಳೂರು: ಮನರೇಗಾ ಯೋಜನೆಯ ಹೆಸರನ್ನು ವಿಬಿ ಜೀ ರಾಮ್ ಜೀ ಎಂದು ಬದಲಾವಣೆ ಮಾಡಿದ ಕೇಂದ್ರ ಸರ್ಕಾರದ ನಡೆ ವಿರುದ್ಧ…
ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದ ದಿನದಂದು ರಾಜ್ಯಪಾಲರ ವಿರುದ್ಧ ರಾಜ್ಯ ಕಾಂಗ್ರೆಸ್ ಸರ್ಕಾರ ನಡೆದುಕೊಂಡ ಕ್ರಮ ಕರ್ನಾಟಕದ ಇತಿಹಾಸದಲ್ಲೇ ನಡೆದ…