ಮೈಸೂರು: ಮೈಸೂರಿನ ಪ್ರತಿಷ್ಠಿತ ಜೆಎಸ್ಎಸ್ ರಾಜೇಂದ್ರ ಶ್ರೀಗಳ ಪ್ರತಿಮೆ ಅನಾವರಣ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಪ್ರತಿಮೆ ವಿಚಾರವನ್ನು ಕಾಂಗ್ರೆಸ್ ಮುನ್ನಲೆಗೆ ತಂದಿದ್ದು, ಮೈಸೂರು-ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಶ್ರೀಗಳ ಪ್ರತಿಮೆ ವಿರುದ್ಧ ನೀಡಿರುವ ಪ್ರಕರಣ ವಾಪಾಸ್ ಪಡೆದು ಕ್ಷಮೆ ಕೇಳುವಂತೆ ಕಾಂಗ್ರೆಸ್ ಆಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.
ನಗರದ ಗನ್ಹೌಸ್ ಬಳಿ ರಾತ್ರೋರಾತ್ರಿ ದೇಶಿಕೇಂದ್ರ ಸ್ವಾಮಿಗಳ ಪ್ರತಿಮೆ ಸ್ಥಾಪಿಸಲಾಗಿತ್ತು. ಇದಕ್ಕೆ ರಾಜಮನೆತನದವರು ತೀವ್ರ ಆಕ್ರೋಶ ಹೊರ ಹಾಕಿದ್ದರು. ಇನ್ನು ಈ ವಿವಾದ ಮತ್ತೆ ಮುನ್ನಲೆಗೆ ಬಂದಿದ್ದು, ಕಾಂಗ್ರೆಸ್ ಮಾಜಿ ಮೇಯರ್ ಬಿ.ಎಲ್ ಭೈರಪ್ಪ ಈ ಬಗ್ಗೆ ಮಾತನಾಡಿದ್ದಾರೆ.
ತ್ರಿವಿಧ ದಾಸೋಹಿ ಸುತ್ತೂರು ಸ್ವಾಮಿಗಳ ಪ್ರತಿಮೆ ಅನಾವರಣಕ್ಕೆ ಮೈಸೂರು ರಾಜಮನೆತನ ವಿರೋಧ ವ್ಯಕ್ತಿಪಡಿಸಿದೆ. ಆದರೇ ಚುನಾವಣೆಗೆ ಸುತ್ತೂರು ಶ್ರೀಗಳ ಆಶೀರ್ವಾದ ಬೇಕು ಎಂದು ಯದುವೀರ್ ಅವರು ಮಠಕ್ಕೆ ಹೋಗುವುದಕ್ಕೆ ಯಾವ ನೈತಿಕತೆಯಿದೆ. ಎಲ್ಲಾ ಸಮುದಾಯದ ಏಳಿಗೆಗಾಗಿ ದುಡಿದು, ಬಿಕ್ಷೆ ಬೇಡಿ ಅನ್ನ ದಾಸೋಹ ನಡೆಸುತ್ತಿದ್ದ ಶ್ರೀಗಳ ಪ್ರತಿಮೆ ಅನಾವರಣಕ್ಕೆ ನೀವು ಅವಕಾಶ ಯಾಕೆ ಕೊಡುತ್ತಿಲ್ಲ ಎಂದು ಕಿಡಿಕಾರಿದರು.
ಈ ಸಂಬಂಧ ಸುಪ್ರೀಂ ನಲ್ಲಿ ಪ್ರಕರಣ ನಡೆಯುತ್ತಿದೆ. ಇದನ್ನು ಯದುವೀರ್ ಅವರು ವಾಪಾಸ್ ಪಡೆದು ಪ್ರತಿಮೆ ಅನಾವರಣಕ್ಕೆ ಅವಕಾಶ ಮಾಡಿಕೊಡಬೇಕು. ಇದರಿಂದ ನಿಮ್ಮ ಘನತೆ ಇನ್ನೂ ಹೆಚ್ಚಾಗಲಿದೆ. ರಾಜ್ಯ ಸರ್ಕಾರ, ಮಹಾನಗರ ಪಾಲಿಕೆಯಿಂದಲೂ ಅನುಮತಿ ಪಡೆದಿದ್ದರು ಅದಕ್ಕೆ ನೀವು ತಡೆಯೊಡ್ಡಿರುವುದು ಸರಿಯಲ್ಲ. ಈ ಬಗ್ಗೆ ಭಹಿರಂಗ ಕ್ಷಮೆ ಕೇಳಬೇಕು ಎಂದು ಮಾಜಿ ಮೇಯರ್ ಭೈರಪ್ಪ, ಯದುವೀರ್ ಒಡೆಯರ್ ಅವರನ್ನು ಒತ್ತಾಯಿಸಿದ್ದಾರೆ.
ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್ ಬಳಿಯ ಅರ್ಪೊರಾದ ನೈಟ್ಕ್ಲಬ್ ಬೀರ್ಚ್ ಬೈ ರೋಮಿಯೋ ಲೇನ್ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ…
ಮೈಸೂರು: ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಅಪಹರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಜಯನಗರ ಮೂರನೇ ಹಂತದಲ್ಲಿ ಈ…
ಗೋವಾ: ಇಲ್ಲಿನ ನೈಟ್ ಕ್ಲಬ್ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್…
ಮೈಸೂರಿನ ಶ್ರೀರಾಂಪುರದ ಮಾರ್ಗದಲ್ಲಿ ಬರುವ ಅಮೃತ್ ಬೇಕರಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ತಂಗುದಾಣ ಹಾಳಾಗಿದ್ದು, ಬಸ್ಗಾಗಿ ಕಾಯುವವರು ರಸ್ತೆಯಲ್ಲಿ ನಿಲ್ಲಬೇಕಾದ…
ನಿಕೋಟಿನ್, ಪಾನ್ ಮಸಾಲಾ ಮತ್ತು ಇತರೆ ಹೊಗೆ ರಹಿತ ತಂಬಾಕು ಪದಾರ್ಥಗಳ ಮೇಲೆ ಕೇಂದ್ರ ಸರ್ಕಾರ ಪ್ರಸ್ತಾವಿಸಿದ ಆರೋಗ್ಯ ಮತ್ತು…
ಮೈಸೂರಿನಿಂದ ಚಾಮರಾಜನಗರಕ್ಕೆ ಪ್ರತಿನಿತ್ಯ ೬ ರೈಲುಗಳು ಸಂಚರಿಸುತ್ತಿವೆ. ಈಗ ಸಂಚರಿಸುವ ರೈಲುಗಳ ಜೊತೆ ಚಾಮರಾಜನಗರದಿಂದ ಮೈಸೂರಿಗೆ ಬೆಳಿಗ್ಗೆ ೪.೪೦ಕ್ಕೆ ,…