ಮೈಸೂರು

ಮತ್ತೆ ಮುನ್ನಲೆಗೆ ಬಂದ ಪ್ರತಿಮೆ ವಿವಾದ: ಯದುವೀರ್‌ಗೆ ಕ್ಷೇಮೆ ಕೇಳಿ ಎಂದ ಕಾಂಗ್ರೆಸ್‌!

ಮೈಸೂರು: ಮೈಸೂರಿನ ಪ್ರತಿಷ್ಠಿತ ಜೆಎಸ್‌ಎಸ್‌ ರಾಜೇಂದ್ರ ಶ್ರೀಗಳ ಪ್ರತಿಮೆ ಅನಾವರಣ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಪ್ರತಿಮೆ ವಿಚಾರವನ್ನು ಕಾಂಗ್ರೆಸ್‌ ಮುನ್ನಲೆಗೆ ತಂದಿದ್ದು, ಮೈಸೂರು-ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಶ್ರೀಗಳ ಪ್ರತಿಮೆ ವಿರುದ್ಧ ನೀಡಿರುವ ಪ್ರಕರಣ ವಾಪಾಸ್‌ ಪಡೆದು ಕ್ಷಮೆ ಕೇಳುವಂತೆ ಕಾಂಗ್ರೆಸ್‌ ಆಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.

ನಗರದ ಗನ್‌ಹೌಸ್‌ ಬಳಿ ರಾತ್ರೋರಾತ್ರಿ ದೇಶಿಕೇಂದ್ರ ಸ್ವಾಮಿಗಳ ಪ್ರತಿಮೆ ಸ್ಥಾಪಿಸಲಾಗಿತ್ತು. ಇದಕ್ಕೆ ರಾಜಮನೆತನದವರು ತೀವ್ರ ಆಕ್ರೋಶ ಹೊರ ಹಾಕಿದ್ದರು. ಇನ್ನು ಈ ವಿವಾದ ಮತ್ತೆ ಮುನ್ನಲೆಗೆ ಬಂದಿದ್ದು, ಕಾಂಗ್ರೆಸ್‌ ಮಾಜಿ ಮೇಯರ್‌ ಬಿ.ಎಲ್‌ ಭೈರಪ್ಪ ಈ ಬಗ್ಗೆ ಮಾತನಾಡಿದ್ದಾರೆ.

ತ್ರಿವಿಧ ದಾಸೋಹಿ ಸುತ್ತೂರು ಸ್ವಾಮಿಗಳ ಪ್ರತಿಮೆ ಅನಾವರಣಕ್ಕೆ ಮೈಸೂರು ರಾಜಮನೆತನ ವಿರೋಧ ವ್ಯಕ್ತಿಪಡಿಸಿದೆ. ಆದರೇ ಚುನಾವಣೆಗೆ ಸುತ್ತೂರು ಶ್ರೀಗಳ ಆಶೀರ್ವಾದ ಬೇಕು ಎಂದು ಯದುವೀರ್‌ ಅವರು ಮಠಕ್ಕೆ ಹೋಗುವುದಕ್ಕೆ ಯಾವ ನೈತಿಕತೆಯಿದೆ. ಎಲ್ಲಾ ಸಮುದಾಯದ ಏಳಿಗೆಗಾಗಿ ದುಡಿದು, ಬಿಕ್ಷೆ ಬೇಡಿ ಅನ್ನ ದಾಸೋಹ ನಡೆಸುತ್ತಿದ್ದ ಶ್ರೀಗಳ ಪ್ರತಿಮೆ ಅನಾವರಣಕ್ಕೆ ನೀವು ಅವಕಾಶ ಯಾಕೆ ಕೊಡುತ್ತಿಲ್ಲ ಎಂದು ಕಿಡಿಕಾರಿದರು.

ಈ ಸಂಬಂಧ ಸುಪ್ರೀಂ ನಲ್ಲಿ ಪ್ರಕರಣ ನಡೆಯುತ್ತಿದೆ. ಇದನ್ನು ಯದುವೀರ್‌ ಅವರು ವಾಪಾಸ್‌ ಪಡೆದು ಪ್ರತಿಮೆ ಅನಾವರಣಕ್ಕೆ ಅವಕಾಶ ಮಾಡಿಕೊಡಬೇಕು. ಇದರಿಂದ ನಿಮ್ಮ ಘನತೆ ಇನ್ನೂ ಹೆಚ್ಚಾಗಲಿದೆ. ರಾಜ್ಯ ಸರ್ಕಾರ, ಮಹಾನಗರ ಪಾಲಿಕೆಯಿಂದಲೂ ಅನುಮತಿ ಪಡೆದಿದ್ದರು ಅದಕ್ಕೆ ನೀವು ತಡೆಯೊಡ್ಡಿರುವುದು ಸರಿಯಲ್ಲ. ಈ ಬಗ್ಗೆ ಭಹಿರಂಗ ಕ್ಷಮೆ ಕೇಳಬೇಕು ಎಂದು ಮಾಜಿ ಮೇಯರ್‌ ಭೈರಪ್ಪ, ಯದುವೀರ್‌ ಒಡೆಯರ್‌ ಅವರನ್ನು ಒತ್ತಾಯಿಸಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸಿದ್ದಾಪುರ | ಉಪಟಳ ನೀಡುತ್ತಿದ್ದ ಒಂಟಿ ಸಲಗ ಸೆರೆ

ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…

7 hours ago

ಇರಾನ್‌ ಈವರೆಗೆ 400ಕ್ಕೂ ಹೆಚ್ಚು ಕ್ಷಿಪಣಿ ದಾಳಿ ನಡೆಸಿದೆ ; ಇಸ್ರೇಲ್‌

ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್‌ನಿಂದ ಇಸ್ರೇಲ್‌ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…

8 hours ago

ಏಪ್ರಿಲ್ 1ರಿಂದ ಜಾರಿ ಟೋಲ್‌ ದರ ಹೆಚ್ಚಳ ; ಮೈ-ಬೆಂ ಹೆದ್ದಾರಿ ಪ್ರಯಾಣವೂ ದುಬಾರಿ

ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…

9 hours ago

ಮಧ್ಯಪ್ರಾಚ್ಯ ಸಂಘರ್ಷ : ಇಂಧನ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ಮೋದಿ ಮಹತ್ವದ ಸಭೆ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…

9 hours ago

ಕರ್ನಾಟಕ ಹೈಕೋರ್ಟ್‌ : 70 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…

10 hours ago

ಸಿಲಿಂಡರ್‌ಗೆ ಮುಗಿಬಿದ್ದ ಜನ : ಪೊಲೀಸ್‌ ರಕ್ಷಣೆಯಲ್ಲಿ ಸಿಲಿಂಡರ್‌ ವಿತರಣೆ

ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…

10 hours ago