ಮೈಸೂರು

ದೇವರಾಜ ಮಾರುಕಟ್ಟೆ ಉಳಿಸುವ ಹೋರಾಟದಲ್ಲಿ ಯಾವಾಗಲೂ ಪಾಲ್ಗೊಳ್ಳುತ್ತೇನೆ ; ಯದುವೀರ್

ಮೈಸೂರು : ದೇವರಾಜ ಮಾರುಕಟ್ಟೆ ನಮ್ಮ ಮೈಸೂರಿನ ಒಂದು ಕೇಂದ್ರ ಬಿಂದು. ದೇವರಾಜ ಮಾರುಕಟ್ಟೆ ಉಳಿಸುವ ಹೋರಾಟದಲ್ಲಿ ನಾನು ಯಾವಾಗಲೂ ಪಾಲ್ಗೊಳ್ಳುತ್ತೇನೆ ಎಂದು ಸಂಸದ ಯದುವೀರ್‌ ಒಡೆಯರ್‌ ಹೇಳಿದ್ದಾರೆ.

ನಗರದಲ್ಲಿ ದೇವರಾಜ ಮಾರುಕಟ್ಟೆ ವರ್ತಕರಿಗೆ ಪಾಲಿಕೆ ನೋಟಿಸ್‌ ಕೊಟ್ಟಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ದೇವರಾಜ ಮಾರುಕಟ್ಟೆಯಲ್ಲಿ ಸಣ್ಣ ವ್ಯಾಪಾರಿಗಳು, ಬಡವರು ತಮ್ಮ ವ್ಯಾಪಾರ ಮಾಡಿಕೊಂಡು ಜೀವನ ಮಾಡುತ್ತಿದ್ದಾರೆ. ಈ ದೃಷ್ಠಿಯಿಂದ ನಾವು ಆದಷ್ಟು ಕಾಳಜಿ ವಹಿಸಿಕೊಂಡು ಕೆಲಸ ಮಾಡಬೇಕಾಗಿರುವುದು ಮುಖ್ಯ. ಪಾರಂಪರಿಕ ಕಟ್ಟಡವನ್ನು ಉಳಿಸಬೇಕಾಗಿರುವುದು ಕೂಡ ಮುಖ್ಯವಾಗಿರುವುದರಿಂದ ಆ ದೃಷ್ಠಿಯಿಂದಲೂ ಕೆಲಸ ಮಾಡಬೇಕಾಗಿದೆ. ನಗರ ಪಾಲಿಕೆ ಏನು ನಿರ್ಧಾರ ತೆಗೆದುಕೊಂಡಿದ್ದಾರೆ ಅದು ಕಾನೂನಾತ್ಕವಾಗಿದೆಯಾ ಎಂಬುವುದನ್ನ ಪರಿಶೀಲಿಸುತ್ತೇನೆ. ದೇವರಾಜಮಾರುಕಟ್ಟೆ ಉಳಿಸುವ ಹೋರಾಟದಲ್ಲಿ ನಾವು ಯಾವಾಗಲೂ ಪಾಲ್ಗೊಳ್ಳುತ್ತೇವೆ. ಮುಂದೆಯೂ ಕೂಡ ಅದನ್ನ ಉಳಿಸುವ ನಿಟ್ಟಿನಲ್ಲಿ ನಾವು ಕೂಡ ಕೆಲಸ ಮಾಡಬೇಕಾಗಿದೆ ಎಂದರು.

ಅಲ್ಲದೆ ನಿನ್ನೆ ಮೈಸೂರಿನ ವಿಶ್ವವಿದ್ಯಾನಿಲಯಕ್ಕೆ ಸಂಬಂಧಪಟ್ಟಂತಹ ಪಾರಂಪರಿಕ ಕಟ್ಟಡಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದೇವೆ. ಪಾರಂಪರಿಕ ಕಟ್ಟಡಗಳನ್ನ ಉಳಿಸುವ ನಿಟ್ಟಿನಿಂದ ಏನೇನು ಕೆಲಸ ಆಗಬೇಕಾಗಿದೆ ಅದರ ಬಗ್ಗೆ ಪರಿಶೀಲನೆ ಮಾಡಿದ್ದೇವೆ. ಪಾರಂಪರಿಕ ಕಟ್ಟಡ ಉಳಿಸಲು ಎಲ್ಲರು ಬೆಂಬಲ ಕೊಟ್ಟಿರುವುದು ಸಂತೋಷದ ವಿಷಯ.  ನಮ್ಮ ವಿವಿ ವ್ಯಾಪ್ತಿಯಲ್ಲಿ ೨೬ ಪಾರಂಪರಿಕ ಕಟ್ಟಡಗಳು ಇವೆ. ಹೀಗಾಗಿ ಅದನ್ನೆಲ್ಲಾ ಉಳಿಸಬೇಕಾಗಿರುವುದು ಬಹಳ ಮುಖ್ಯ ಎಂದು ಹೇಳಿದರು

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

5 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

6 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

7 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

7 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

7 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

8 hours ago