ಮೈಸೂರು : ದೇವರಾಜ ಮಾರುಕಟ್ಟೆ ನಮ್ಮ ಮೈಸೂರಿನ ಒಂದು ಕೇಂದ್ರ ಬಿಂದು. ದೇವರಾಜ ಮಾರುಕಟ್ಟೆ ಉಳಿಸುವ ಹೋರಾಟದಲ್ಲಿ ನಾನು ಯಾವಾಗಲೂ ಪಾಲ್ಗೊಳ್ಳುತ್ತೇನೆ ಎಂದು ಸಂಸದ ಯದುವೀರ್ ಒಡೆಯರ್ ಹೇಳಿದ್ದಾರೆ.
ನಗರದಲ್ಲಿ ದೇವರಾಜ ಮಾರುಕಟ್ಟೆ ವರ್ತಕರಿಗೆ ಪಾಲಿಕೆ ನೋಟಿಸ್ ಕೊಟ್ಟಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ದೇವರಾಜ ಮಾರುಕಟ್ಟೆಯಲ್ಲಿ ಸಣ್ಣ ವ್ಯಾಪಾರಿಗಳು, ಬಡವರು ತಮ್ಮ ವ್ಯಾಪಾರ ಮಾಡಿಕೊಂಡು ಜೀವನ ಮಾಡುತ್ತಿದ್ದಾರೆ. ಈ ದೃಷ್ಠಿಯಿಂದ ನಾವು ಆದಷ್ಟು ಕಾಳಜಿ ವಹಿಸಿಕೊಂಡು ಕೆಲಸ ಮಾಡಬೇಕಾಗಿರುವುದು ಮುಖ್ಯ. ಪಾರಂಪರಿಕ ಕಟ್ಟಡವನ್ನು ಉಳಿಸಬೇಕಾಗಿರುವುದು ಕೂಡ ಮುಖ್ಯವಾಗಿರುವುದರಿಂದ ಆ ದೃಷ್ಠಿಯಿಂದಲೂ ಕೆಲಸ ಮಾಡಬೇಕಾಗಿದೆ. ನಗರ ಪಾಲಿಕೆ ಏನು ನಿರ್ಧಾರ ತೆಗೆದುಕೊಂಡಿದ್ದಾರೆ ಅದು ಕಾನೂನಾತ್ಕವಾಗಿದೆಯಾ ಎಂಬುವುದನ್ನ ಪರಿಶೀಲಿಸುತ್ತೇನೆ. ದೇವರಾಜಮಾರುಕಟ್ಟೆ ಉಳಿಸುವ ಹೋರಾಟದಲ್ಲಿ ನಾವು ಯಾವಾಗಲೂ ಪಾಲ್ಗೊಳ್ಳುತ್ತೇವೆ. ಮುಂದೆಯೂ ಕೂಡ ಅದನ್ನ ಉಳಿಸುವ ನಿಟ್ಟಿನಲ್ಲಿ ನಾವು ಕೂಡ ಕೆಲಸ ಮಾಡಬೇಕಾಗಿದೆ ಎಂದರು.
ಅಲ್ಲದೆ ನಿನ್ನೆ ಮೈಸೂರಿನ ವಿಶ್ವವಿದ್ಯಾನಿಲಯಕ್ಕೆ ಸಂಬಂಧಪಟ್ಟಂತಹ ಪಾರಂಪರಿಕ ಕಟ್ಟಡಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದೇವೆ. ಪಾರಂಪರಿಕ ಕಟ್ಟಡಗಳನ್ನ ಉಳಿಸುವ ನಿಟ್ಟಿನಿಂದ ಏನೇನು ಕೆಲಸ ಆಗಬೇಕಾಗಿದೆ ಅದರ ಬಗ್ಗೆ ಪರಿಶೀಲನೆ ಮಾಡಿದ್ದೇವೆ. ಪಾರಂಪರಿಕ ಕಟ್ಟಡ ಉಳಿಸಲು ಎಲ್ಲರು ಬೆಂಬಲ ಕೊಟ್ಟಿರುವುದು ಸಂತೋಷದ ವಿಷಯ. ನಮ್ಮ ವಿವಿ ವ್ಯಾಪ್ತಿಯಲ್ಲಿ ೨೬ ಪಾರಂಪರಿಕ ಕಟ್ಟಡಗಳು ಇವೆ. ಹೀಗಾಗಿ ಅದನ್ನೆಲ್ಲಾ ಉಳಿಸಬೇಕಾಗಿರುವುದು ಬಹಳ ಮುಖ್ಯ ಎಂದು ಹೇಳಿದರು
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್ಆರ್ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…