ಮೈಸೂರು : ದೇವರಾಜ ಮಾರುಕಟ್ಟೆ ನಮ್ಮ ಮೈಸೂರಿನ ಒಂದು ಕೇಂದ್ರ ಬಿಂದು. ದೇವರಾಜ ಮಾರುಕಟ್ಟೆ ಉಳಿಸುವ ಹೋರಾಟದಲ್ಲಿ ನಾನು ಯಾವಾಗಲೂ ಪಾಲ್ಗೊಳ್ಳುತ್ತೇನೆ ಎಂದು ಸಂಸದ ಯದುವೀರ್ ಒಡೆಯರ್ ಹೇಳಿದ್ದಾರೆ.
ನಗರದಲ್ಲಿ ದೇವರಾಜ ಮಾರುಕಟ್ಟೆ ವರ್ತಕರಿಗೆ ಪಾಲಿಕೆ ನೋಟಿಸ್ ಕೊಟ್ಟಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ದೇವರಾಜ ಮಾರುಕಟ್ಟೆಯಲ್ಲಿ ಸಣ್ಣ ವ್ಯಾಪಾರಿಗಳು, ಬಡವರು ತಮ್ಮ ವ್ಯಾಪಾರ ಮಾಡಿಕೊಂಡು ಜೀವನ ಮಾಡುತ್ತಿದ್ದಾರೆ. ಈ ದೃಷ್ಠಿಯಿಂದ ನಾವು ಆದಷ್ಟು ಕಾಳಜಿ ವಹಿಸಿಕೊಂಡು ಕೆಲಸ ಮಾಡಬೇಕಾಗಿರುವುದು ಮುಖ್ಯ. ಪಾರಂಪರಿಕ ಕಟ್ಟಡವನ್ನು ಉಳಿಸಬೇಕಾಗಿರುವುದು ಕೂಡ ಮುಖ್ಯವಾಗಿರುವುದರಿಂದ ಆ ದೃಷ್ಠಿಯಿಂದಲೂ ಕೆಲಸ ಮಾಡಬೇಕಾಗಿದೆ. ನಗರ ಪಾಲಿಕೆ ಏನು ನಿರ್ಧಾರ ತೆಗೆದುಕೊಂಡಿದ್ದಾರೆ ಅದು ಕಾನೂನಾತ್ಕವಾಗಿದೆಯಾ ಎಂಬುವುದನ್ನ ಪರಿಶೀಲಿಸುತ್ತೇನೆ. ದೇವರಾಜಮಾರುಕಟ್ಟೆ ಉಳಿಸುವ ಹೋರಾಟದಲ್ಲಿ ನಾವು ಯಾವಾಗಲೂ ಪಾಲ್ಗೊಳ್ಳುತ್ತೇವೆ. ಮುಂದೆಯೂ ಕೂಡ ಅದನ್ನ ಉಳಿಸುವ ನಿಟ್ಟಿನಲ್ಲಿ ನಾವು ಕೂಡ ಕೆಲಸ ಮಾಡಬೇಕಾಗಿದೆ ಎಂದರು.
ಅಲ್ಲದೆ ನಿನ್ನೆ ಮೈಸೂರಿನ ವಿಶ್ವವಿದ್ಯಾನಿಲಯಕ್ಕೆ ಸಂಬಂಧಪಟ್ಟಂತಹ ಪಾರಂಪರಿಕ ಕಟ್ಟಡಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದೇವೆ. ಪಾರಂಪರಿಕ ಕಟ್ಟಡಗಳನ್ನ ಉಳಿಸುವ ನಿಟ್ಟಿನಿಂದ ಏನೇನು ಕೆಲಸ ಆಗಬೇಕಾಗಿದೆ ಅದರ ಬಗ್ಗೆ ಪರಿಶೀಲನೆ ಮಾಡಿದ್ದೇವೆ. ಪಾರಂಪರಿಕ ಕಟ್ಟಡ ಉಳಿಸಲು ಎಲ್ಲರು ಬೆಂಬಲ ಕೊಟ್ಟಿರುವುದು ಸಂತೋಷದ ವಿಷಯ. ನಮ್ಮ ವಿವಿ ವ್ಯಾಪ್ತಿಯಲ್ಲಿ ೨೬ ಪಾರಂಪರಿಕ ಕಟ್ಟಡಗಳು ಇವೆ. ಹೀಗಾಗಿ ಅದನ್ನೆಲ್ಲಾ ಉಳಿಸಬೇಕಾಗಿರುವುದು ಬಹಳ ಮುಖ್ಯ ಎಂದು ಹೇಳಿದರು
ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…
ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…
ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…
ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…
ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್ ಡಾ.ಗಿರೀಶ್ ಭಾರದ್ವಾಜ್ ಅವರು ಇಂದು ನಿಧನರಾಗಿದ್ದಾರೆ.…
ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…