ಮೈಸೂರು : ದೇವರಾಜ ಮಾರುಕಟ್ಟೆ ನಮ್ಮ ಮೈಸೂರಿನ ಒಂದು ಕೇಂದ್ರ ಬಿಂದು. ದೇವರಾಜ ಮಾರುಕಟ್ಟೆ ಉಳಿಸುವ ಹೋರಾಟದಲ್ಲಿ ನಾನು ಯಾವಾಗಲೂ ಪಾಲ್ಗೊಳ್ಳುತ್ತೇನೆ ಎಂದು ಸಂಸದ ಯದುವೀರ್ ಒಡೆಯರ್ ಹೇಳಿದ್ದಾರೆ.
ನಗರದಲ್ಲಿ ದೇವರಾಜ ಮಾರುಕಟ್ಟೆ ವರ್ತಕರಿಗೆ ಪಾಲಿಕೆ ನೋಟಿಸ್ ಕೊಟ್ಟಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ದೇವರಾಜ ಮಾರುಕಟ್ಟೆಯಲ್ಲಿ ಸಣ್ಣ ವ್ಯಾಪಾರಿಗಳು, ಬಡವರು ತಮ್ಮ ವ್ಯಾಪಾರ ಮಾಡಿಕೊಂಡು ಜೀವನ ಮಾಡುತ್ತಿದ್ದಾರೆ. ಈ ದೃಷ್ಠಿಯಿಂದ ನಾವು ಆದಷ್ಟು ಕಾಳಜಿ ವಹಿಸಿಕೊಂಡು ಕೆಲಸ ಮಾಡಬೇಕಾಗಿರುವುದು ಮುಖ್ಯ. ಪಾರಂಪರಿಕ ಕಟ್ಟಡವನ್ನು ಉಳಿಸಬೇಕಾಗಿರುವುದು ಕೂಡ ಮುಖ್ಯವಾಗಿರುವುದರಿಂದ ಆ ದೃಷ್ಠಿಯಿಂದಲೂ ಕೆಲಸ ಮಾಡಬೇಕಾಗಿದೆ. ನಗರ ಪಾಲಿಕೆ ಏನು ನಿರ್ಧಾರ ತೆಗೆದುಕೊಂಡಿದ್ದಾರೆ ಅದು ಕಾನೂನಾತ್ಕವಾಗಿದೆಯಾ ಎಂಬುವುದನ್ನ ಪರಿಶೀಲಿಸುತ್ತೇನೆ. ದೇವರಾಜಮಾರುಕಟ್ಟೆ ಉಳಿಸುವ ಹೋರಾಟದಲ್ಲಿ ನಾವು ಯಾವಾಗಲೂ ಪಾಲ್ಗೊಳ್ಳುತ್ತೇವೆ. ಮುಂದೆಯೂ ಕೂಡ ಅದನ್ನ ಉಳಿಸುವ ನಿಟ್ಟಿನಲ್ಲಿ ನಾವು ಕೂಡ ಕೆಲಸ ಮಾಡಬೇಕಾಗಿದೆ ಎಂದರು.
ಅಲ್ಲದೆ ನಿನ್ನೆ ಮೈಸೂರಿನ ವಿಶ್ವವಿದ್ಯಾನಿಲಯಕ್ಕೆ ಸಂಬಂಧಪಟ್ಟಂತಹ ಪಾರಂಪರಿಕ ಕಟ್ಟಡಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದೇವೆ. ಪಾರಂಪರಿಕ ಕಟ್ಟಡಗಳನ್ನ ಉಳಿಸುವ ನಿಟ್ಟಿನಿಂದ ಏನೇನು ಕೆಲಸ ಆಗಬೇಕಾಗಿದೆ ಅದರ ಬಗ್ಗೆ ಪರಿಶೀಲನೆ ಮಾಡಿದ್ದೇವೆ. ಪಾರಂಪರಿಕ ಕಟ್ಟಡ ಉಳಿಸಲು ಎಲ್ಲರು ಬೆಂಬಲ ಕೊಟ್ಟಿರುವುದು ಸಂತೋಷದ ವಿಷಯ. ನಮ್ಮ ವಿವಿ ವ್ಯಾಪ್ತಿಯಲ್ಲಿ ೨೬ ಪಾರಂಪರಿಕ ಕಟ್ಟಡಗಳು ಇವೆ. ಹೀಗಾಗಿ ಅದನ್ನೆಲ್ಲಾ ಉಳಿಸಬೇಕಾಗಿರುವುದು ಬಹಳ ಮುಖ್ಯ ಎಂದು ಹೇಳಿದರು
ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…
ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…
ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…
ಇಸ್ಲಾಮಾಬಾದ್: 2019ರ ಪುಲ್ವಾಮಾ ಉಗ್ರರ ದಾಳಿಯ ಮಾಸ್ಟರ್ ಮೈಂಡ್ ಹಮ್ಜಾ ಬುರ್ಹಾನ್ನನ್ನು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ…
ಬೆಂಗಳೂರು: ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಕಡಿತ ಮಾಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು,…
ಚಾಮರಾಜನಗರ: ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬುದು ಸುಳ್ಳು. ಇದರಲ್ಲಿ ಯಾವುದೇ ಹುರುಳಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ…