ಮೈಸೂರು

ದೇವರಾಜ ಮಾರುಕಟ್ಟೆ ಉಳಿಸುವ ಹೋರಾಟದಲ್ಲಿ ಯಾವಾಗಲೂ ಪಾಲ್ಗೊಳ್ಳುತ್ತೇನೆ ; ಯದುವೀರ್

ಮೈಸೂರು : ದೇವರಾಜ ಮಾರುಕಟ್ಟೆ ನಮ್ಮ ಮೈಸೂರಿನ ಒಂದು ಕೇಂದ್ರ ಬಿಂದು. ದೇವರಾಜ ಮಾರುಕಟ್ಟೆ ಉಳಿಸುವ ಹೋರಾಟದಲ್ಲಿ ನಾನು ಯಾವಾಗಲೂ ಪಾಲ್ಗೊಳ್ಳುತ್ತೇನೆ ಎಂದು ಸಂಸದ ಯದುವೀರ್‌ ಒಡೆಯರ್‌ ಹೇಳಿದ್ದಾರೆ.

ನಗರದಲ್ಲಿ ದೇವರಾಜ ಮಾರುಕಟ್ಟೆ ವರ್ತಕರಿಗೆ ಪಾಲಿಕೆ ನೋಟಿಸ್‌ ಕೊಟ್ಟಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ದೇವರಾಜ ಮಾರುಕಟ್ಟೆಯಲ್ಲಿ ಸಣ್ಣ ವ್ಯಾಪಾರಿಗಳು, ಬಡವರು ತಮ್ಮ ವ್ಯಾಪಾರ ಮಾಡಿಕೊಂಡು ಜೀವನ ಮಾಡುತ್ತಿದ್ದಾರೆ. ಈ ದೃಷ್ಠಿಯಿಂದ ನಾವು ಆದಷ್ಟು ಕಾಳಜಿ ವಹಿಸಿಕೊಂಡು ಕೆಲಸ ಮಾಡಬೇಕಾಗಿರುವುದು ಮುಖ್ಯ. ಪಾರಂಪರಿಕ ಕಟ್ಟಡವನ್ನು ಉಳಿಸಬೇಕಾಗಿರುವುದು ಕೂಡ ಮುಖ್ಯವಾಗಿರುವುದರಿಂದ ಆ ದೃಷ್ಠಿಯಿಂದಲೂ ಕೆಲಸ ಮಾಡಬೇಕಾಗಿದೆ. ನಗರ ಪಾಲಿಕೆ ಏನು ನಿರ್ಧಾರ ತೆಗೆದುಕೊಂಡಿದ್ದಾರೆ ಅದು ಕಾನೂನಾತ್ಕವಾಗಿದೆಯಾ ಎಂಬುವುದನ್ನ ಪರಿಶೀಲಿಸುತ್ತೇನೆ. ದೇವರಾಜಮಾರುಕಟ್ಟೆ ಉಳಿಸುವ ಹೋರಾಟದಲ್ಲಿ ನಾವು ಯಾವಾಗಲೂ ಪಾಲ್ಗೊಳ್ಳುತ್ತೇವೆ. ಮುಂದೆಯೂ ಕೂಡ ಅದನ್ನ ಉಳಿಸುವ ನಿಟ್ಟಿನಲ್ಲಿ ನಾವು ಕೂಡ ಕೆಲಸ ಮಾಡಬೇಕಾಗಿದೆ ಎಂದರು.

ಅಲ್ಲದೆ ನಿನ್ನೆ ಮೈಸೂರಿನ ವಿಶ್ವವಿದ್ಯಾನಿಲಯಕ್ಕೆ ಸಂಬಂಧಪಟ್ಟಂತಹ ಪಾರಂಪರಿಕ ಕಟ್ಟಡಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದೇವೆ. ಪಾರಂಪರಿಕ ಕಟ್ಟಡಗಳನ್ನ ಉಳಿಸುವ ನಿಟ್ಟಿನಿಂದ ಏನೇನು ಕೆಲಸ ಆಗಬೇಕಾಗಿದೆ ಅದರ ಬಗ್ಗೆ ಪರಿಶೀಲನೆ ಮಾಡಿದ್ದೇವೆ. ಪಾರಂಪರಿಕ ಕಟ್ಟಡ ಉಳಿಸಲು ಎಲ್ಲರು ಬೆಂಬಲ ಕೊಟ್ಟಿರುವುದು ಸಂತೋಷದ ವಿಷಯ.  ನಮ್ಮ ವಿವಿ ವ್ಯಾಪ್ತಿಯಲ್ಲಿ ೨೬ ಪಾರಂಪರಿಕ ಕಟ್ಟಡಗಳು ಇವೆ. ಹೀಗಾಗಿ ಅದನ್ನೆಲ್ಲಾ ಉಳಿಸಬೇಕಾಗಿರುವುದು ಬಹಳ ಮುಖ್ಯ ಎಂದು ಹೇಳಿದರು

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

9 mins ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

2 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

16 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

20 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

20 hours ago