ಮೈಸೂರು: ಮೈಸೂರು-ಕೊಡಗು ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು (ಏ.೧) ಜಿಲ್ಲಾ ಚುನಾವಣಾಧಿಕಾರಿ ಡಾ ಕೆ.ವಿ.ರಾಜೇಂದ್ರ ಅವರಿಗೆ ರಾಜಮಾತೆ ಪ್ರಮೋದಾದೇವಿ ಒಡೆಯರ್, ಶಾಸಕ ಶ್ರೀವತ್ಸ ಜತೆ ಸೇರಿ ನಾಮಪತ್ರ ಸಲ್ಲಿಸಿದರು.
ಉಮೇದುಗಾರಿಗೆ ಸಲ್ಲಿಸುವ ವೇಳೆ ತಮ್ಮ ಆಸ್ತಿ ವಿವರಗಳನ್ನು ಸಹಾ ನಮೂದಿಸಿರುವ ಯದುವೀರ್ ಅವರು ತಮಗೆ ಯಾವುದೇ ಕೃಷಿ ಜಮೀನು ಹಾಗೂ ಸ್ವಂತ ಮನೆಯಿಲ್ಲ ಎಂದು ಹೇಳಿಕೊಂಡಿದ್ದಾರೆ.
ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬಳಿ ಆಸ್ತಿ ಎಷ್ಟಿದೆ ಎನ್ನುವುದನ್ನು ನೋಡುವುದಾದರೆ, ಚರಾಸ್ತಿ ಮೌಲ್ಯ 4,99,59,303 ರೂಪಾಯಿ ಇದೆ. ಆದ್ರೆ, ಯದುವೀರ್ ಹೆಸರಿನಲ್ಲಿ ಯಾವುದೇ ಕೃಷಿ ಭೂಮಿ, ಸ್ವಂತ ಮನೆ ಇಲ್ಲ ಇಲ್ಲದಿರುವುದೇ ವಿಶೇಷ.
ಇನ್ನು ಯದುವೀರ್ ಒಡೆಯರ್ ಅವರ 2 ಬ್ಯಾಂಕ್ ಖಾತೆಗಳಲ್ಲಿ 23.55 ಲಕ್ಷ ಹಣ ಇದೆ. ಒಂದು ಕೋಟಿ ಮೌಲ್ಯದ ವಿವಿಧ ಕಂಪನಿಗಳಲ್ಲಿ ಬಾಂಡ್ ಮತ್ತು ಶೇರ್ ಹೊಂದಿದ್ದಾರೆ. ಇನ್ನು 4 ಕೆಜಿ ಚಿನ್ನ ಮತ್ತು 20 ಕೆಜಿ ಬೆಳ್ಳಿ ಇದೆ ಎಂದು ನಾಮಪತ್ರ ಅಫಿಡೆವಿಟ್ನಲ್ಲಿ ಘೋಷಿಸಿಕೊಂಡಿದ್ದಾರೆ.
ಯದುವೀರ್ ಅವರು ಮಹಾರಾಜರೇ ಆಗಿದ್ದರು, ಅವರ ಬಳಿ ಯಾವುದೇ ಕೃಷಿ ಭೂಮಿ, ಸ್ವಂತ ಮನೆ ಇಲ್ಲ. ವಾಣಿಜ್ಯ ಕಟ್ಟಡಗಳಿಲ್ಲ. ಬ್ಯಾಂಕ್ನಿಂದ ಸಾಲ ಸಹ ಪಡೆದಿಲ್ಲ. ಯಾವುದೇ ಆದಾಯ ತೆರಿಗೆ ಹಣ ಬಾಕಿ ಉಳಿಸಿಕೊಂಡಿಲ್ಲ. ಮತ್ತು ತಮ್ಮ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಮ್ಮ ಅಫಿಡವಿಟ್ನಲ್ಲಿ ಮಾಹಿತಿ ನೀಡಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…