ಮೈಸೂರು

ಅಪಾಯದ ಮಟ್ಟ ಮೀರಿದ ಯಮುನಾ ನದಿ: ಸಿಎಂ ಕೇಜ್ರಿವಾಲ್ ತುರ್ತು ಸಭೆ

ನವದೆಹಲಿ: ಉತ್ತರ ಭಾರತದಲ್ಲಿ ಸುರಿಯುತ್ತಿರುವ ಭಾರಿ ಮಳೆ ಮುಂದುವರೆದಿರುವಂತೆಯೇ ರಾಜಧಾನಿ ದೆಹಲಿಯಲ್ಲಿ ಯಮುನಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ದೆಹಲಿಯಲ್ಲಿ ಅಕ್ಷರಶಃ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.

ಭಾರಿ ಮಳೆಯಿಂದಾಗಿ ದೆಹಲಿಯಲ್ಲಿ ಯಮುನಾ ನದಿ ಉಕ್ಕಿ ಹರಿಯುತ್ತಿದ್ದು, ನೀರಿನ ಮಟ್ಟ 207.25 ಮೀಟರ್‌ಗೆ ತಲುಪಿದೆ. ಇದರೊಂದಿಗೆ ಸಾರ್ವಕಾಲಿಕ ಗರಿಷ್ಠ ಮಟ್ಟದ ಸಮೀಪಕ್ಕೆ ಯಮುನಾ ನದಿ ಹರಿವು ತಲುಪಿದ್ದು, ಯಮುನಾ ನದಿ ನೀರಿನ ಮಟ್ಟ 1978ರಲ್ಲಿ 207.49 ಮೀಟರ್‌ಗೆ ಏರಿಕೆಯಾಗಿದ್ದದ್ದು ಈವರೆಗಿನ ದಾಖಲೆಯಾಗಿದೆ ಎಂದು ಕೇಂದ್ರ ಜಲ ಆಯೋಗ (ಸಿಡಬ್ಲ್ಯುಸಿ) ಹೇಳಿದೆ.

ಇಂದು ಬೆಳಗ್ಗೆ 4ರ ಹೊತ್ತಿಗೆ ದೆಹಲಿಯ ಹಳೇ ರೈಲು ಸೇತುವೆ ಬಳಿ ನೀರಿನ ಮಟ್ಟ 207 ಮೀಟರ್‌ ಗಡಿ ದಾಟಿತ್ತು. 8ರ ಹೊತ್ತಿಗೆ 207.25 ಮೀಟರ್‌ಗೆ ಏರಿಕೆಯಾಗಿದೆ. ಇದು 2013ರ ಬಳಿಕದ ಗರಿಷ್ಠ ಪ್ರಮಾಣ ಆಗಿದೆ. ಆಗ ನಿರಿನ ಮಟ್ಟ 207.32 ಮೀಟರ್‌ಗೆ ತಲುಪಿತ್ತು. ಇಂದು ಮಧ್ಯಾಹ್ನ 12ರ ವೇಳೆಗೆ ಯಮುನಾ ನದಿ ನೀರಿನ ಮಟ್ಟ 207.35 ಮೀಟರ್‌ಗೆ ಏರಿಕೆಯಾಗಬಹುದು ಎಂದು ಅಂದಾಜಿಸಲಾಗಿದೆ ಮತ್ತು ಏರಿಕೆ ಮುಂದುವರಿಯಲಿದೆ ಎಂಬುದಾಗಿ ನೀರಾವರಿ ಮತ್ತು ಪ್ರವಾಹ ನಿಯಂತ್ರಣ ಇಲಾಖೆ ಮಾಹಿತಿ ನೀಡಿದೆ.

ದೆಹಲಿಯಲ್ಲಿ ಪ್ರವಾಹ ಪರಿಸ್ಥಿತಿ
ಕಳೆದ ಮೂರು ದಿನಗಳಿಂದ ನದಿ ನೀರಿನ ಪ್ರಮಾಣ ತೀವ್ರವಾಗಿ ಏರಿಕೆಯಾಗಿದ್ದು, ಭಾನುವಾರ ಬೆಳಗ್ಗೆ 11ರ ವೇಳೆಗೆ 203.14 ಮೀಟರ್‌ಗೆ ತಲುಪಿದ್ದ ನೀರು, ಸೋಮವಾರ ಸಂಜೆ 5ರ ಹೊತ್ತಿಗೆ 205.4 ಮೀಟರ್‌ ಹಾಗೂ ಅದೇ ದಿನ ರಾತ್ರಿ ವೇಳೆಗೆ 206 ಮೀಟರ್‌ ದಾಟಿತ್ತು. ಅನೇಕ ವಸತಿ ಪ್ರದೇಶಗಳಲ್ಲಿ 2–3 ಅಡಿಗಳಷ್ಟು ನೀರು ನಿಂತಿದ್ದು, ಜನರು ಸಂಕಷ್ಟಕ್ಕೀಡಾಗಿದ್ದಾರೆ. ನದಿ ನೀರು ಅಪಾಯದ ಮಟ್ಟ  (205.33 ಮೀಟರ್‌ ಗಡಿ) ದಾಟಿರುವುದರಿಂದ, ತಗ್ಗುಪ್ರದೇಶಗಳಲ್ಲಿ ವಾಸಿಸುತ್ತಿರುವವರನ್ನು ಸ್ಥಳಾಂತರಿಸಲಾಗಿದೆ. ಪ್ರವಾಹಪೀಡಿತ ಪ್ರದೇಶಗಳ ಮೇಲೆ ಕಣ್ಗಾವಲಿರಿಸುವ ಸಂಬಂಧ 16 ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿದೆ.

ಸಿಎಂ ಕೇಜ್ರಿವಾಲ್ ತುರ್ತು ಸಭೆ
ಇನ್ನು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅಧಿಕಾರಿಗಳ ಸಭೆ ನಡೆಸಿ, ಯಮುನಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗುತ್ತಿರುವುದು ಹಾಗೂ ನಗರದ ವಿವಿಧೆಡೆ ನೀರು ನಿಂತು ಉಂಟಾಗಿರುವ ಸಮಸ್ಯೆ ಕುರಿತು ಚರ್ಚಿಸಿದ್ದಾರೆ. ಭಾರಿ ಮಳೆ ಕಾರಣ ಹರಿಯಾಣದ ಹಥಿನಿಕುಂಡ ಬ್ಯಾರೇಜ್‌ಗೆ ಒಳಹರಿವು ಹೆಚ್ಚಿದೆ. ಹಾಗಾಗಿ, ಬ್ಯಾರೇಜ್‌ನಿಂದ ನೀರು ಬಿಟ್ಟಿರುವ ಕಾರಣ ದೆಹಲಿಯಲ್ಲಿ ಯಮುನಾ ನದಿ ತುಂಬಿ ಹರಿಯುತ್ತಿದ್ದು, ಇದರಿಂದ ಉಂಟಾಗಿರುವ ತೊಂದರೆ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಮೂಲಗಳು ಹೇಳಿವೆ.

andolanait

Recent Posts

ಓದುಗರ ಪತ್ರ: ಕೊರಿಯನ್ ಗೇಮ್ಸ್ ನಿಷೇಧಿಸಿ

ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ…

4 hours ago

ಓದುಗರ ಪತ್ರ: ಖಾಲಿ ನಿವೇಶನದಲ್ಲಿರುವ ಕಸ ತೆರವುಗೊಳಿಸಿ

ಮೈಸೂರಿನ ಶ್ರೀರಾಂಪುರ ೨ನೇ ಹಂತದಲ್ಲಿ ನಿವೇಶನನವೊಂದು ಕಳೆದ ೨೬ ವರ್ಷಗಳಿಂದ ಖಾಲಿಬಿದ್ದಿದೆ. ಈ ಖಾಲಿ ನಿವೇಶನದಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು…

4 hours ago

ಓದುಗರ ಪತ್ರ: ಬೆಳವಾಡಿ ಕೆರೆ ಸ್ವಚ್ಛಗೊಳಿಸಿ

ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ…

5 hours ago

‘ಮಾದಕ ವಸ್ತು ಮಾರಾಟ ಮಾಡಿದರೆ ಕ್ರಮ’

ನವೀನ್ ಡಿಸೋಜ ಜನವರಿಯಲ್ಲಿ ೬೩ ಎನ್‌ಡಿಪಿಎಸ್ ಪ್ರಕರಣಗಳು ದಾಖಲು; ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ಮಡಿಕೇರಿ: ಮಾದಕ ವಸ್ತುಗಳ ಮಾರಾಟ…

5 hours ago

ಆಶ್ರಮ ಶಾಲೆಯಲ್ಲಿ ಅಡುಗೆ ಸಿಬ್ಬಂದಿಯವರ ಸರಸ ಸಲ್ಲಾಪ

ಮಂಜು ಕೋಟೆ ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ ಎಚ್.ಡಿ.ಕೋಟೆ: ಗಿರಿಜನ ಮಕ್ಕಳ…

5 hours ago

ಮಾನಂದವಾಡಿ ರಸ್ತೆಯಲ್ಲಿ ಅಪಘಾತಕ್ಕೆ ಬೀಳಬೇಕಿದೆ ಬ್ರೇಕ್…

ಪ್ರಶಾಂತ್ ಎಸ್. ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ ಎನ್.ಎಚ್.ಪಾಳ್ಯ,ಟೋಲ್‌ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ ಮೈಸೂರು:…

5 hours ago