ನವದೆಹಲಿ: ಉತ್ತರ ಭಾರತದಲ್ಲಿ ಸುರಿಯುತ್ತಿರುವ ಭಾರಿ ಮಳೆ ಮುಂದುವರೆದಿರುವಂತೆಯೇ ರಾಜಧಾನಿ ದೆಹಲಿಯಲ್ಲಿ ಯಮುನಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ದೆಹಲಿಯಲ್ಲಿ ಅಕ್ಷರಶಃ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.
ಭಾರಿ ಮಳೆಯಿಂದಾಗಿ ದೆಹಲಿಯಲ್ಲಿ ಯಮುನಾ ನದಿ ಉಕ್ಕಿ ಹರಿಯುತ್ತಿದ್ದು, ನೀರಿನ ಮಟ್ಟ 207.25 ಮೀಟರ್ಗೆ ತಲುಪಿದೆ. ಇದರೊಂದಿಗೆ ಸಾರ್ವಕಾಲಿಕ ಗರಿಷ್ಠ ಮಟ್ಟದ ಸಮೀಪಕ್ಕೆ ಯಮುನಾ ನದಿ ಹರಿವು ತಲುಪಿದ್ದು, ಯಮುನಾ ನದಿ ನೀರಿನ ಮಟ್ಟ 1978ರಲ್ಲಿ 207.49 ಮೀಟರ್ಗೆ ಏರಿಕೆಯಾಗಿದ್ದದ್ದು ಈವರೆಗಿನ ದಾಖಲೆಯಾಗಿದೆ ಎಂದು ಕೇಂದ್ರ ಜಲ ಆಯೋಗ (ಸಿಡಬ್ಲ್ಯುಸಿ) ಹೇಳಿದೆ.
ಇಂದು ಬೆಳಗ್ಗೆ 4ರ ಹೊತ್ತಿಗೆ ದೆಹಲಿಯ ಹಳೇ ರೈಲು ಸೇತುವೆ ಬಳಿ ನೀರಿನ ಮಟ್ಟ 207 ಮೀಟರ್ ಗಡಿ ದಾಟಿತ್ತು. 8ರ ಹೊತ್ತಿಗೆ 207.25 ಮೀಟರ್ಗೆ ಏರಿಕೆಯಾಗಿದೆ. ಇದು 2013ರ ಬಳಿಕದ ಗರಿಷ್ಠ ಪ್ರಮಾಣ ಆಗಿದೆ. ಆಗ ನಿರಿನ ಮಟ್ಟ 207.32 ಮೀಟರ್ಗೆ ತಲುಪಿತ್ತು. ಇಂದು ಮಧ್ಯಾಹ್ನ 12ರ ವೇಳೆಗೆ ಯಮುನಾ ನದಿ ನೀರಿನ ಮಟ್ಟ 207.35 ಮೀಟರ್ಗೆ ಏರಿಕೆಯಾಗಬಹುದು ಎಂದು ಅಂದಾಜಿಸಲಾಗಿದೆ ಮತ್ತು ಏರಿಕೆ ಮುಂದುವರಿಯಲಿದೆ ಎಂಬುದಾಗಿ ನೀರಾವರಿ ಮತ್ತು ಪ್ರವಾಹ ನಿಯಂತ್ರಣ ಇಲಾಖೆ ಮಾಹಿತಿ ನೀಡಿದೆ.
ದೆಹಲಿಯಲ್ಲಿ ಪ್ರವಾಹ ಪರಿಸ್ಥಿತಿ
ಕಳೆದ ಮೂರು ದಿನಗಳಿಂದ ನದಿ ನೀರಿನ ಪ್ರಮಾಣ ತೀವ್ರವಾಗಿ ಏರಿಕೆಯಾಗಿದ್ದು, ಭಾನುವಾರ ಬೆಳಗ್ಗೆ 11ರ ವೇಳೆಗೆ 203.14 ಮೀಟರ್ಗೆ ತಲುಪಿದ್ದ ನೀರು, ಸೋಮವಾರ ಸಂಜೆ 5ರ ಹೊತ್ತಿಗೆ 205.4 ಮೀಟರ್ ಹಾಗೂ ಅದೇ ದಿನ ರಾತ್ರಿ ವೇಳೆಗೆ 206 ಮೀಟರ್ ದಾಟಿತ್ತು. ಅನೇಕ ವಸತಿ ಪ್ರದೇಶಗಳಲ್ಲಿ 2–3 ಅಡಿಗಳಷ್ಟು ನೀರು ನಿಂತಿದ್ದು, ಜನರು ಸಂಕಷ್ಟಕ್ಕೀಡಾಗಿದ್ದಾರೆ. ನದಿ ನೀರು ಅಪಾಯದ ಮಟ್ಟ (205.33 ಮೀಟರ್ ಗಡಿ) ದಾಟಿರುವುದರಿಂದ, ತಗ್ಗುಪ್ರದೇಶಗಳಲ್ಲಿ ವಾಸಿಸುತ್ತಿರುವವರನ್ನು ಸ್ಥಳಾಂತರಿಸಲಾಗಿದೆ. ಪ್ರವಾಹಪೀಡಿತ ಪ್ರದೇಶಗಳ ಮೇಲೆ ಕಣ್ಗಾವಲಿರಿಸುವ ಸಂಬಂಧ 16 ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿದೆ.
ಸಿಎಂ ಕೇಜ್ರಿವಾಲ್ ತುರ್ತು ಸಭೆ
ಇನ್ನು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅಧಿಕಾರಿಗಳ ಸಭೆ ನಡೆಸಿ, ಯಮುನಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗುತ್ತಿರುವುದು ಹಾಗೂ ನಗರದ ವಿವಿಧೆಡೆ ನೀರು ನಿಂತು ಉಂಟಾಗಿರುವ ಸಮಸ್ಯೆ ಕುರಿತು ಚರ್ಚಿಸಿದ್ದಾರೆ. ಭಾರಿ ಮಳೆ ಕಾರಣ ಹರಿಯಾಣದ ಹಥಿನಿಕುಂಡ ಬ್ಯಾರೇಜ್ಗೆ ಒಳಹರಿವು ಹೆಚ್ಚಿದೆ. ಹಾಗಾಗಿ, ಬ್ಯಾರೇಜ್ನಿಂದ ನೀರು ಬಿಟ್ಟಿರುವ ಕಾರಣ ದೆಹಲಿಯಲ್ಲಿ ಯಮುನಾ ನದಿ ತುಂಬಿ ಹರಿಯುತ್ತಿದ್ದು, ಇದರಿಂದ ಉಂಟಾಗಿರುವ ತೊಂದರೆ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಮೂಲಗಳು ಹೇಳಿವೆ.
ನವೀನ್ ಡಿಸೋಜ ಕೊಡಗಿನ ಹೋಂಸ್ಟೇವೊಂದರಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮ; ಜಂಟಿ ಸರ್ವೇ ಆರಂಭ ಮಡಿಕೇರಿ: ಹೋಂಸ್ಟೇಗಳಿಗೆ…
ಭೇರ್ಯ ಮಹೇಶ್ ಬರಪೀಡಿತ ತಾಲ್ಲೂಕುಗಳು ಎಂದು ಘೋಷಿಸಲು ರೈತ ಮುಖಂಡರ ಆಗ್ರಹ ಕೆ.ಆರ್.ನಗರ: ಜಿಲ್ಲೆಯಲ್ಲಿ ಭತ್ತದ ಕಣಜ ಎಂದೇ ಪ್ರಸಿದ್ಧಿಯಾಗಿರುವ…
ಕೆ.ಬಿ.ರಮೇಶನಾಯಕ ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿಗೆ ಸಹಕಾರಿ; ಸ್ಥಳೀಯ ಉತ್ಪನ್ನಗಳ ಮಾರಾಟ, ಆದಾಯ, ಆರೋಗ್ಯ ವೃದ್ಧಿ ಮೈಸೂರು: ಜಗತ್ತಿಗೆ ಯೋಗವನ್ನು ಪರಿಚಯಿಸಿಕೊಡುವ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಎರಡು ದಿನಗಳ ಹಿಂದೆ ಸುರಿದ ಮಳೆಗೆ ಮೈಸೂರು ನಗರದ ಹಲವೆಡೆ ಮರಉರುಳಿರುವುದೂ ಸೇರಿದಂತೆ ಅನೇಕ ಅನಾಹುತಗಳು ನಡೆದಿದೆ.…
ಮೈಸೂರು : ಕೆಎಸ್ಆರ್ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…