ಮೈಸೂರು : ರಾಕಿಂಗ್ ಸ್ಟಾರ್ ಯಶ್ ಮತ್ತು ನಟಿ ರಾಧಿಕಾ ಪಂಡಿತ್ ಕುಟುಂಬ ಸಮೇತ ಇಂದು ನಂಜನಗೂಡಿಗೆ ಆಗಮಿಸಿ, ನಂಜುಂಡೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಕ್ಕಳು ಹಾಗೂ ಅತ್ತೆ ಮಾವ ಸಮೇತ ದೇವಸ್ಥಾನಕ್ಕೆ ಆಗಮಿಸಿದ್ದ ಯಶ್ ಕೆಲ ಹೊತ್ತು ದೇವಸ್ಥಾನದಲ್ಲೇ ಇದ್ದು ನಂಜುಂಡೇಶ್ವರನ ದರ್ಶನ ಪಡೆದರು.
ಸಿನಿಮಾ ಕೆಲಸಗಳ ಮಧ್ಯೆಯೇ ಬಿಡುವು ಮಾಡಿಕೊಂಡು ಯಶ್ ಫ್ಯಾಮಿಲಿಗೆ ಟೈಮ್ ಕೊಟ್ಟಿದ್ದಾರೆ. ಕಳೆದ ಮೂರು ದಿನಗಳಿಂದ ಅವರು ಮೈಸೂರು ಭಾಗದಲ್ಲಿ ಪ್ರವಾಸದಲ್ಲಿದ್ದರು. ನಾಗರ ಹೊಳೆ, ಬಂಡೀಪುರ ಅರಣ್ಯದಲ್ಲಿ ಸಫಾರಿ ನಡುವೆ ಶ್ರೀಕಂಠೇಶ್ವರ ದೇವರಿಗೆ ಪೂಜೆ ನೆರವೇರಿಸಿದ್ದಾರೆ.
ಮೈಸೂರು ಯಶ್ ಅವರ ಹುಟ್ಟೂರು. ಅಲ್ಲದೇ, ಮೈಸೂರಿಗೆ ಹೋದಾಗೆಲ್ಲ ಯಶ್ ಹೀಗೆ ಪ್ರವಾಸ ಮಾಡುತ್ತಲೇ ಇರುತ್ತಾರೆ. ಇಷ್ಟದ ಸ್ಥಳಗಳಿಗೆ ಈ ಬಾರಿ ಹೆಂಡತಿ ಮತ್ತು ಹೆಂಡತಿ ಕುಟುಂಬವನ್ನು ಅವರು ಕರೆದುಕೊಂಡು ಹೋಗಿದ್ದಾರೆ. ಈ ಬಾರಿ ಮಕ್ಕಳಿಗೂ ತಮ್ಮ ಹುಟ್ಟೂರು ತೋರಿಸಿದ್ದಾರೆ.
ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…
ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…
ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…
ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…
ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…
ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…