ಮೈಸೂರು

ಬಿಜೆಪಿ ನಾಯಕರು ಮೀಸಲಾತಿ ವಿರೋಧಿಗಳು: ಯತೀಂದ್ರ ಸಿದ್ದರಾಮಯ್ಯ (Yathindra Siddaramaiah)

ಮೈಸೂರು : ರಾಜ್ಯದಲ್ಲಿ ಜಾತಿಗಣತಿ ಬಗ್ಗೆ ಪರ ವಿರೋಧ ಚರ್ಚೆ ವ್ಯಕ್ತವಾಗಿದ್ದು, ಬಿಜೆಪಿ-ಜೆಡಿಎಸ್‌ ಮೈತ್ರಿ ಪಕ್ಷಗಳು ಜಾತಿಗಣತಿಯನ್ನು ವಿರೋಧಿಸಿವೆ. ಸದ್ಯ ಈ ಬಗ್ಗೆ ಮಾತನಾಡಿರುವ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಬಿಜೆಪಿ ನಾಯಕರ ಬಗ್ಗೆ ಕಿಡಿಕಾರಿದ್ದಾರೆ.

ನಂಜನಗೂಡಿನಲ್ಲಿ ಇಂದು (ಏ.16) ಮಾತನಾಡಿದ ಅವರು, ಜಾತಿಗಣತಿಯಿಂದ ಹಿಂದುಳಿದ ವರ್ಗಕ್ಕೆ ಎಲ್ಲಿ ಹೆಚ್ಚು ಮೀಸಲಾತಿ ಸಿಗುತ್ತದಯೋ ಎಂದು ಬಿಜೆಪಿ ನಾಯಕರಿಗೆ ಭಯವಿದೆ. ಅದಕ್ಕಾಗಿ ಜಾತಿಗಣತಿಯನ್ನು ವಿರೋಧ ಮಾಡುತ್ತಿದ್ದಾರೆ. ಆದರೆ ನಾವು ಅವರ ವಿರೋಧಕ್ಕೆ ಮಣೆ ಹಾಕದೆ ವರದಿ ಜಾರಿಗೆ ಬದ್ದ ಎಂದು ಹೇಳಿದ್ದಾರೆ.

ಇದನ್ನೂ ಓದಿ:- ಜಾತಿಗಣತಿಯಿಂದ ಯಾರಿಗೂ ಅನ್ಯಾಯವಾಗಲು ಬಿಡಲ್ಲ: ಸಿಎಂ ಸಿದ್ದರಾಮಯ್ಯ

ಈಗಾಗಲೇ ಜಾತಿಗಣತಿಯನ್ನು ಸಂಪುಟದ ಮುಂದೆ ಮಂಡಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಅವರು ನಾಳೆ ಸಚಿವರ ಜೊತೆ ಚರ್ಚೆ ನಡೆಸಿ ಮುಂದಿನ ತೀರ್ಮಾನ ಮಾಡಲಿದ್ದಾರೆ ಎಂದರು.

ಹೆಚ್ಚಿನ ಮಾಹಿತಿ:- ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ಬಗ್ಗೆ ಚರ್ಚಿಸಿ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕಾಂತರಾಜು ಆಯೋಗ ಹಿಂದುಳಿದ ವರ್ಗಗಳಿಗೆ 57% ಮೀಸಲಾತಿ ಹೆಚ್ಚಿಸಬೇಕೆಂದು ಹೇಳಿದೆ. ಜಾತಿಗಣತಿ ಸ್ವೀಕಾರ ಮಾಡಿ ಕೇಂದ್ರಕ್ಕೆ ಶಿಫಾರಸ್ಸು ಕಳುಹಿಸುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ:- ಸಿದ್ದರಾಮಯ್ಯನವರೇ ಕೈ ಹಿಡಿದು ಬರೆಸಿದ್ದೇ ಈ ಜಾತಿ ಗಣತಿ: ಮಾಜಿ ಸಚಿವ ವಿ.ಸುನೀಲ್ ಕುಮಾರ್

ಆಂದೋಲನ ಡೆಸ್ಕ್

Recent Posts

ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ ಸಮಸ್ಯೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…

2 hours ago

ಕದನ ವಿರಾಮದ ನಡುವೆ ಮತ್ತೆ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ: 5 ಮಂದಿ ಸಾವು

ಬೈರುತ್:‌ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್‌ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…

3 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ:  ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…

7 hours ago

ಗಾಂಧಿ ಹಾದಿಯಲ್ಲಿ ಹತಳಾದ ಮಾತಂಗಿನಿ ಹಜ್ರಾ

ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…

7 hours ago

ಧರ್ಮವೆಂದು ತಿಳಿದು ತಿಗಣೆ ಇತ್ಯಾದಿಗಳನ್ನು ಕೊಲ್ಲುತ್ತಿದ್ದೆ

ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…

7 hours ago

ಜೂ.28ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ನವೀನ್ ಡಿಸೋಜ ಮಡಿಕೇರಿ: ಜೂ.೨೮ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ…

7 hours ago