ಮೈಸೂರು

ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಯಾರು ಮಾತನಾಡುತ್ತಿಲ್ಲ. ಆದರೆ ಅದು ಮಾಧ್ಯಮಗಳಲ್ಲಿ ಮಾತ್ರ ಚರ್ಚೆಯಾಗುತ್ತಿದೆ ಇದಕ್ಕೆಲ್ಲಾ ವಿರಾಮ ಹಾಕಬೇಕು ಎಂದು ವಿಧಾನ ಪರಿಷತ್‌ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರಿನಲ್ಲಿ ಇಂದು(ಫೆಬ್ರವರಿ.19) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರಿಗೆ ಸಂಪೂರ್ಣ ಬೆಂಬಲ ಕೊಡುವುದಾಗಿ ಹೈಕಮಾಂಡ್ ನಾಯಕರು ಹೇಳಿದ್ದಾರೆ. ಅಲ್ಲದೇ ಸಿಎಂ ಬದಲಾಬಣೆ ಬಗ್ಗೆ ಯಾವ ನಾಯಕರು ಹೇಳಿಕೆಗಳನ್ನು ನೀಡುತ್ತಿಲ್ಲ. ಆದರೆ ಮಾಧ್ಯಮಗಳಲ್ಲಿ ಮಾತ್ರ ಸಿಎಂ ಬದಲಾವಣೆ ವಿಚಾರ ಬರುತ್ತಿದೆ . ಇಂತಹ ವಿಚಾರಗಳಿಗೆ ವಿರಾಮ ಹಾಕಬೇಕು ಎಂದು ಹೇಳಿದರು.

ಇನ್ನು ರಾಜಕೀಯದ ವಿಚಾರಗಳನ್ನು ನಾನು ಮಾಧ್ಯಮಗಳ ಮುಂದೆ ಮಾತನಾಡುವುದಿಲ್ಲ. ಪಕ್ಷದ ಆಂತರಿಕ ವಿಚಾರವನ್ನು ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ. ಅದೆಲ್ಲಾ ಇದೆಲ್ಲಾ ವರಿಷ್ಟರಿಗೆ ಬಿಟ್ಟ ವಿಚಾರ ಎಂದರು.

ಇದೇ ಸಂದರ್ಭದಲ್ಲಿ ಗ್ಯಾರೆಂಟಿ ಯೋಜನೆಯಲ್ಲಿ ಒಂದಾಗಿರುವ ಗೃಹಲಕ್ಷ್ಮೀ ಹಣ ಯೋಜನೆಗೆ ಬಗ್ಗೆ ಮಾತನಾಡಿದ ಅವರು, ಎಷ್ಟು ತಿಂಗಳಿಂದ ಬಂದಿಲ್ಲ ಎಲ್ಲವನ್ನೂ ಸೇರಿಸಿ ಒಟ್ಟಿಗೆ ಸರ್ಕಾರ ಹಾಕುತ್ತದೆ. ಈ ಕುರಿತು ಈಗಾಗಲೇ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಖ್ಯಾತ ಗಾಯಕಿ ಎಸ್.ಜಾನಕಿ ನಿಧನ

ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…

1 hour ago

ಗುಂಡ್ಲುಪೇಟೆ: ಮನೆಯೊಳಗೆ ನುಗ್ಗಿದ್ದ ನಾಗರಹಾವಿನ ರಕ್ಷಣೆ

ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…

5 hours ago

ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ

ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…

6 hours ago

ಹನೂರು: ಹುಚ್ಚು ನಾಯಿ ದಾಳಿಗೆ ಹಲವರು ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…

6 hours ago

ರೀಲ್ಸ್‌ಗಾಗಿ ಡ್ರಿಫ್ಟಿಂಗ್:‌ ಜಾನುವಾರುಗಳ ಮೇವನ್ನು ಮಣ್ಣುಪಾಲು ಮಾಡಿದ ಪ್ರವಾಸಿಗರು

ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್‌ ಕಾರನ್ನು ಡ್ರಿಫ್ಟಿಂಗ್‌ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…

6 hours ago

ವಿಯೆಟ್ನಾಂ ದ್ವೀಪದಲ್ಲಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್‌ ಮುಳುಗಡೆ: 15 ಮಂದಿ ಸಾವು

ಹನೋಯ್:‌ ವಿಯೆಟ್ನಾಂ ಫು ಕ್ವಾಕ್‌ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್‌ ಬೋಟ್‌ ಮುಳುಗಡೆಯಾಗಿದ್ದು, ಕನಿಷ್ಠ…

7 hours ago