ಮೈಸೂರು : ಸಿದ್ದರಾಮಯ್ಯ ಸರ್ಕಾರದಲ್ಲಿ ಪುತ್ರನ ಹಸ್ತಕ್ಷೇಪ ಜೋರಾಗಿದೆ ಎಂಬ ವಿಪಕ್ಷಗಳ ಆರೋಪಕ್ಕೆ ಪುಷ್ಠಿ ನೀಡುವಂತೆ ಯತೀಂದ್ರ ಸಿದ್ದರಾಮಯ್ಯ ಅವರು ಸಿಎಂ ಜೊತೆ ಮಾತನಾಡಿರುವ ವಿಡಿಯೋ ಭಾರೀ ವೈರಲ್ ಆಗಿದೆ.
ಮೈಸೂರಿನ ಚಟ್ನಳ್ಳಿ ಪಾಳ್ಯ ಗ್ರಾಮದಲ್ಲಿ ನೆನ್ನೆ ನಡೆದ ಜನಸಂಪರ್ಕ ಸಭೆಯಲ್ಲಿ ಜನರ ಅಹವಾಲು ಸ್ವೀಕರಿಸುವ ವೇಳೆ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ತಮ್ಮ ತಂದೆ ಸಿಎಂ ಸಿದ್ದರಾಮಯ್ಯ ಜೊತೆ ನಡೆಸಿರುವ ಫೋನ್ ಸಂಭಾಷಣೆ ರಾಜ್ಯ ರಾಜಕಾರಣದಲ್ಲಿ ಭಾರಿ ಸದ್ದು ಮಾಡುತ್ತಿದೆ.
ತಂದೆಯೋಟ್ಟಿಗೆ ಫೋನ್ ನಲ್ಲಿ ಮಾತನಾಡಿರುವ ಯತೀಂದ್ರ ಆರಂಭದಲ್ಲಿ ಅಪ್ಪ ಹೇಳಿ ಎಂದು ಮಾತು ಶುರು ಮಾಡಿದ್ದಾರೆ. ಈ ವೇಳೆ ಸಿದ್ದರಾಮಯ್ಯನವರು ವಿವೇಕಾನಂದ ಯಾರು ಎಂದು ಪ್ರಶ್ನಿಸಿದ್ದಾರೆ. ಆಗ ಯತೀಂದ್ರ, ಮಹದೇವ್ ಅವರಿಗೆ ಫೋನ್ ನೀಡುವಂತೆ ತಮ್ಮ ತಂದೆಗೆ ಹೇಳುತ್ತಾರೆ. ಅವರಿಗೆ ಫೋನ್ ಕೊಟ್ಟ ತಕ್ಷಣ ಅವರನ್ನು ತರಾಟೆಗೆ ತೆಗೆದುಕೊಂಡ ಯತೀಂದ್ರ, ನಾನು ಕೊಟ್ಟಿದ್ದನ್ನು ಬಿಟ್ಟು ಬೇರೆ ಯಾವುದೆಂದು ಪ್ರಶ್ನಿಸಿದ್ದಾರೆ. ನನಗೆ ಗೊತ್ತಿಲ್ಲ ನಾನು ಕೊಟ್ಟಿರುವ ನಾಲ್ಕೈದು ಮಾತ್ರ ಮಾಡಿ ಎಂದು ಸೂಚನೆ ನೀಡಿದ್ದಾರೆ.
ಸಧ್ಯ ಯತೀಂದ್ರ ಅವರ ಈ ಫೋನ್ ಸಂಭಾಷಣೆಯ ವಿಡಿಯೋ ಭಾರೀ ವೈರಲ್ ಆಗಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾರತದಲ್ಲಿ ಅತಿ ಹೆಚ್ಚು ಕಾಲ ಸರ್ಕಾರದ ಮುಖ್ಯಸ್ಥರಾದ ದಾಖಲೆ ಬರೆದಿದ್ದಾರೆ. ಈ ಮೂಲಕ ಸಿಕ್ಕಿಂನ…
ತುಮಕೂರು: ಏಪ್ರಿಲ್.1ರಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು…
ಬೆಂಗಳೂರು: ಏಪ್ರಿಲ್.9ರಂದು ನಡೆಯಲಿರುವ ದಾವಣಗೆರೆ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಬಾಗಲಕೋಟೆ…
ಬೆಂಗಳೂರು: ಅಮೇರಿಕಾದಲ್ಲಿರುವ ಕನ್ನಡಿಗರ ಅತಿ ದೊಡ್ಡ ಸಾಂಸ್ಕೃತಿಕ ಸಂಭ್ರಮವಾಗಿರುವ ಅಕ್ಕ ವಿಶ್ವ ಕನ್ನಡ ಸಮ್ಮೇಳನ ರಾಯಭಾರಿಯಾಗಿ ನಟ ರಿಷಬ್ ಶೆಟ್ಟಿ…
ವಾಷಿಂಗ್ಟನ್: ಹಾರ್ಮುಜ್ ಜಲಸಂಧಿಯನ್ನು 48 ಗಂಟೆಯೊಳಗೆ ಸಂಪೂರ್ಣ ಓಪನ್ ಮಾಡಬೇಕು ಎಂದು ಇರಾನ್ಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗಡುವು…
ಮೈಸೂರಿನ ಶಾರದಾದೇವಿ ನಗರದ ಸರ್ಕಲ್ನಲ್ಲಿ ಒಂದು ವರ್ಷದ ಹಿಂದೆ ಲಕ್ಷಾಂತರ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಆದರೆ…