ಮೈಸೂರು : ಸಿದ್ದರಾಮಯ್ಯ ಸರ್ಕಾರದಲ್ಲಿ ಪುತ್ರನ ಹಸ್ತಕ್ಷೇಪ ಜೋರಾಗಿದೆ ಎಂಬ ವಿಪಕ್ಷಗಳ ಆರೋಪಕ್ಕೆ ಪುಷ್ಠಿ ನೀಡುವಂತೆ ಯತೀಂದ್ರ ಸಿದ್ದರಾಮಯ್ಯ ಅವರು ಸಿಎಂ ಜೊತೆ ಮಾತನಾಡಿರುವ ವಿಡಿಯೋ ಭಾರೀ ವೈರಲ್ ಆಗಿದೆ.
ಮೈಸೂರಿನ ಚಟ್ನಳ್ಳಿ ಪಾಳ್ಯ ಗ್ರಾಮದಲ್ಲಿ ನೆನ್ನೆ ನಡೆದ ಜನಸಂಪರ್ಕ ಸಭೆಯಲ್ಲಿ ಜನರ ಅಹವಾಲು ಸ್ವೀಕರಿಸುವ ವೇಳೆ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ತಮ್ಮ ತಂದೆ ಸಿಎಂ ಸಿದ್ದರಾಮಯ್ಯ ಜೊತೆ ನಡೆಸಿರುವ ಫೋನ್ ಸಂಭಾಷಣೆ ರಾಜ್ಯ ರಾಜಕಾರಣದಲ್ಲಿ ಭಾರಿ ಸದ್ದು ಮಾಡುತ್ತಿದೆ.
ತಂದೆಯೋಟ್ಟಿಗೆ ಫೋನ್ ನಲ್ಲಿ ಮಾತನಾಡಿರುವ ಯತೀಂದ್ರ ಆರಂಭದಲ್ಲಿ ಅಪ್ಪ ಹೇಳಿ ಎಂದು ಮಾತು ಶುರು ಮಾಡಿದ್ದಾರೆ. ಈ ವೇಳೆ ಸಿದ್ದರಾಮಯ್ಯನವರು ವಿವೇಕಾನಂದ ಯಾರು ಎಂದು ಪ್ರಶ್ನಿಸಿದ್ದಾರೆ. ಆಗ ಯತೀಂದ್ರ, ಮಹದೇವ್ ಅವರಿಗೆ ಫೋನ್ ನೀಡುವಂತೆ ತಮ್ಮ ತಂದೆಗೆ ಹೇಳುತ್ತಾರೆ. ಅವರಿಗೆ ಫೋನ್ ಕೊಟ್ಟ ತಕ್ಷಣ ಅವರನ್ನು ತರಾಟೆಗೆ ತೆಗೆದುಕೊಂಡ ಯತೀಂದ್ರ, ನಾನು ಕೊಟ್ಟಿದ್ದನ್ನು ಬಿಟ್ಟು ಬೇರೆ ಯಾವುದೆಂದು ಪ್ರಶ್ನಿಸಿದ್ದಾರೆ. ನನಗೆ ಗೊತ್ತಿಲ್ಲ ನಾನು ಕೊಟ್ಟಿರುವ ನಾಲ್ಕೈದು ಮಾತ್ರ ಮಾಡಿ ಎಂದು ಸೂಚನೆ ನೀಡಿದ್ದಾರೆ.
ಸಧ್ಯ ಯತೀಂದ್ರ ಅವರ ಈ ಫೋನ್ ಸಂಭಾಷಣೆಯ ವಿಡಿಯೋ ಭಾರೀ ವೈರಲ್ ಆಗಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…